TOP STORIES:

ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸೋದು ಎಷ್ಟು ಸೇಫ್? ಹಾಗಾದ್ರೆ ಓದಿ ಈ ಸುದ್ದಿ..!


ಆರೋಗ್ಯಕರ ದೇಹವನ್ನು ಪಡೆಯಬೇಕು ಅಂದರೆ ಬೆಳಗ್ಗಿನ ಉಪಹಾರದ ಕಡೆಯೂ ಸೂಕ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಆದರೆ ಅನೇಕರಿಗೆ ಕೆಲಸಕ್ಕೆ ಹೋಗುವ ತರಾತುರಿ, ಮಕ್ಕಳನ್ನು ಶಾಲೆಗೆ ಕಳುಹಿಸುವ ಒತ್ತಡದಿಂದಾಗಿ ಉಪಹಾರ ಸೇವಿಸಲು ಸಾಧ್ಯವೇ ಆಗೋದಿಲ್ಲ. ಇಂತಹ ಸಂದರ್ಭದಲ್ಲಿ ಅನೇಕರು ಬಾಳೆ ಹಣ್ಣನ್ನು ತಿಂದು ಹೊಟ್ಟೆ ತುಂಬಿಸಿಕೊಳ್ಳುವುದುಂಟು.

ಈ ರೀತಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸೋದು ಎಷ್ಟು ಸೇಫ್​ ಎಂದು ಎಂದಾದರೂ ಯೋಚಿಸಿದ್ದೀರೇ..? ಇಲ್ಲ ಎಂದಾದಲ್ಲಿ ಈ ಸ್ಟೋರಿಯನ್ನು ನೀವು ಓದಲೇಬೇಕು.

ರಾತ್ರಿ ಗಂಟೆಗಟ್ಟಲೇ ನಿದ್ದೆ ಮಾಡಿ ಬೆಳಗ್ಗೆ ಏಳುವ ನೀವು ಏನನ್ನು ಸೇವಿಸುತ್ತೀರಾ ಅನ್ನೋದು ನಿಮ್ಮ ಆರೋಗ್ಯವನ್ನು ರಕ್ಷಿಸಲೂಬಹುದು. ಹಾಳುಗೆಡವಲೂಬಹುದು. ಸುಲಭವಾಗಿ ಸಿಗುತ್ತೆ ಎಂಬ ಕಾರಣಕ್ಕೆ ಅನೇಕರು ಬೆಳಗ್ಗೆ ಬಾಳೆಹಣ್ಣನ್ನು ತಿಂದು ಹೊಟ್ಟೆ ತುಂಬಿಸಿಕೊಳ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದು ಕೂಡ ಹೌದು.

ಬಾಳೆಹಣ್ಣನ್ನು ತಿನ್ನಬೇಕು ಎನಿಸಿದ್ರೆ ಸಾಕು ಅದನ್ನು ಹುಡುಕೋದು ಕಷ್ಟದ ಕೆಲಸವೇ ಅಲ್ಲ. ಒಂದು ವೇಳೆ ನೀವು ಫಿಟ್​ನೆಸ್​ ಪ್ರಿಯರಾಗಿದ್ದು ಬೆಳಗ್ಗಿನ ಉಪಹಾರ ತಯಾರಿಸುವ ವಿಚಾರದಲ್ಲಿ ಸೋಂಬೇರಿಗಳಾಗಿದ್ದರೆ ಬಾಳೆಹಣ್ಣು ನಿಮಗೆ ಉತ್ತಮ ಆಯ್ಕೆಯಾಗಿದೆ. ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಫೈಬರ್​, ಪೊಟ್ಯಾಷಿಯಂ, ಮ್ಯಾಗ್ನಿಷೀಯಂ ಅಂಶವಿದೆ. ಇದರಿಂದ ನಿಮ್ಮ ಜೀವ ನಿರೋಧ ಶಕ್ತಿ ಉತ್ತಮ ಆಗೋದ್ರ ಜೊತೆ ಜೊತೆಗೆ ಮೂಳೆಗಳೂ ಬಲಿಷ್ಠವಾಗುತ್ತದೆ.

ಅಲ್ಲದೇ ಬಾಳೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣಾಂಶ, ವಿಟಮಿನ್​ ಬಿ, ವಿಟಮಿನ್​ ಬಿ 6 ಇದೆ. ಬಾಳೆಹಣ್ಣಿನಲ್ಲಿರುವ ಸಿಹಿ ರುಚಿಯು ನಿಮಗೆ ಹೆಚ್ಚಿನ ಎನರ್ಜಿಯನ್ನು ನೀಡುತ್ತೆ. ಆದರೆ ಯಾವುದೇ ಕಾರಣಕ್ಕೂ ಬಾಳೆ ಹಣ್ಣೊಂದನ್ನೇ ನೀವು ಉಪಹಾರದಲ್ಲಿ ಸೇವನೆ ಮಾಡುವಂತಿಲ್ಲ..!

ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಪೋಷಕಾಂಶ ಅಡಗಿದೆ ಎಂಬ ಮಾತನ್ನು ತಳ್ಳಿ ಹಾಕುವಂತಿಲ್ಲ. ಆದರೆ ಇದರಲ್ಲಿರುವ ಸಕ್ಕರೆ ಅಂಶ ಮಧುಮೇಹಿಗಳಿಗೆ ಒಳ್ಳೆಯದಲ್ಲ. ಅಲ್ಲದೇ ಬಾಳೆಹಣ್ಣಿನಿಂದ ದೇಹಕ್ಕೆ ಸಿಕ್ಕ ಶಕ್ತಿಯು ಕೆಲವೇ ಸಮಯಗಳಲ್ಲಿ ಕರಗಿಬಿಡುತ್ತದೆ. ಇದೇ ಕಾರಣಕ್ಕೆ ನೀವು ಬಾಳೆ ಹಣ್ಣನ್ನು ಓಟ್ಸ್​​, ಇತರೆ ಹಣ್ಣುಗಳೊಂದಿಗೆ ಸೇವಿಸುವುದು ಹೆಚ್ಚು ಸೂಕ್ತ ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ.

ಅಲ್ಲದೇ ಬಾಳೆಹಣ್ಣಿನಲ್ಲಿ ಮ್ಯಾಗ್ನೆಷಿಯಂ ಅತಿಯಾದ ಪ್ರಮಾಣದಲ್ಲಿದೆ. ಹೀಗಾಗಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದ್ರೆ ಅದು ದೇಹದ ಜೀರ್ಣ ಕ್ರಿಯೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುತ್ತದೆ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »