TOP STORIES:

FOLLOW US

ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸೋದು ಎಷ್ಟು ಸೇಫ್? ಹಾಗಾದ್ರೆ ಓದಿ ಈ ಸುದ್ದಿ..!


ಆರೋಗ್ಯಕರ ದೇಹವನ್ನು ಪಡೆಯಬೇಕು ಅಂದರೆ ಬೆಳಗ್ಗಿನ ಉಪಹಾರದ ಕಡೆಯೂ ಸೂಕ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಆದರೆ ಅನೇಕರಿಗೆ ಕೆಲಸಕ್ಕೆ ಹೋಗುವ ತರಾತುರಿ, ಮಕ್ಕಳನ್ನು ಶಾಲೆಗೆ ಕಳುಹಿಸುವ ಒತ್ತಡದಿಂದಾಗಿ ಉಪಹಾರ ಸೇವಿಸಲು ಸಾಧ್ಯವೇ ಆಗೋದಿಲ್ಲ. ಇಂತಹ ಸಂದರ್ಭದಲ್ಲಿ ಅನೇಕರು ಬಾಳೆ ಹಣ್ಣನ್ನು ತಿಂದು ಹೊಟ್ಟೆ ತುಂಬಿಸಿಕೊಳ್ಳುವುದುಂಟು.

ಈ ರೀತಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸೋದು ಎಷ್ಟು ಸೇಫ್​ ಎಂದು ಎಂದಾದರೂ ಯೋಚಿಸಿದ್ದೀರೇ..? ಇಲ್ಲ ಎಂದಾದಲ್ಲಿ ಈ ಸ್ಟೋರಿಯನ್ನು ನೀವು ಓದಲೇಬೇಕು.

ರಾತ್ರಿ ಗಂಟೆಗಟ್ಟಲೇ ನಿದ್ದೆ ಮಾಡಿ ಬೆಳಗ್ಗೆ ಏಳುವ ನೀವು ಏನನ್ನು ಸೇವಿಸುತ್ತೀರಾ ಅನ್ನೋದು ನಿಮ್ಮ ಆರೋಗ್ಯವನ್ನು ರಕ್ಷಿಸಲೂಬಹುದು. ಹಾಳುಗೆಡವಲೂಬಹುದು. ಸುಲಭವಾಗಿ ಸಿಗುತ್ತೆ ಎಂಬ ಕಾರಣಕ್ಕೆ ಅನೇಕರು ಬೆಳಗ್ಗೆ ಬಾಳೆಹಣ್ಣನ್ನು ತಿಂದು ಹೊಟ್ಟೆ ತುಂಬಿಸಿಕೊಳ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದು ಕೂಡ ಹೌದು.

ಬಾಳೆಹಣ್ಣನ್ನು ತಿನ್ನಬೇಕು ಎನಿಸಿದ್ರೆ ಸಾಕು ಅದನ್ನು ಹುಡುಕೋದು ಕಷ್ಟದ ಕೆಲಸವೇ ಅಲ್ಲ. ಒಂದು ವೇಳೆ ನೀವು ಫಿಟ್​ನೆಸ್​ ಪ್ರಿಯರಾಗಿದ್ದು ಬೆಳಗ್ಗಿನ ಉಪಹಾರ ತಯಾರಿಸುವ ವಿಚಾರದಲ್ಲಿ ಸೋಂಬೇರಿಗಳಾಗಿದ್ದರೆ ಬಾಳೆಹಣ್ಣು ನಿಮಗೆ ಉತ್ತಮ ಆಯ್ಕೆಯಾಗಿದೆ. ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಫೈಬರ್​, ಪೊಟ್ಯಾಷಿಯಂ, ಮ್ಯಾಗ್ನಿಷೀಯಂ ಅಂಶವಿದೆ. ಇದರಿಂದ ನಿಮ್ಮ ಜೀವ ನಿರೋಧ ಶಕ್ತಿ ಉತ್ತಮ ಆಗೋದ್ರ ಜೊತೆ ಜೊತೆಗೆ ಮೂಳೆಗಳೂ ಬಲಿಷ್ಠವಾಗುತ್ತದೆ.

ಅಲ್ಲದೇ ಬಾಳೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣಾಂಶ, ವಿಟಮಿನ್​ ಬಿ, ವಿಟಮಿನ್​ ಬಿ 6 ಇದೆ. ಬಾಳೆಹಣ್ಣಿನಲ್ಲಿರುವ ಸಿಹಿ ರುಚಿಯು ನಿಮಗೆ ಹೆಚ್ಚಿನ ಎನರ್ಜಿಯನ್ನು ನೀಡುತ್ತೆ. ಆದರೆ ಯಾವುದೇ ಕಾರಣಕ್ಕೂ ಬಾಳೆ ಹಣ್ಣೊಂದನ್ನೇ ನೀವು ಉಪಹಾರದಲ್ಲಿ ಸೇವನೆ ಮಾಡುವಂತಿಲ್ಲ..!

ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಪೋಷಕಾಂಶ ಅಡಗಿದೆ ಎಂಬ ಮಾತನ್ನು ತಳ್ಳಿ ಹಾಕುವಂತಿಲ್ಲ. ಆದರೆ ಇದರಲ್ಲಿರುವ ಸಕ್ಕರೆ ಅಂಶ ಮಧುಮೇಹಿಗಳಿಗೆ ಒಳ್ಳೆಯದಲ್ಲ. ಅಲ್ಲದೇ ಬಾಳೆಹಣ್ಣಿನಿಂದ ದೇಹಕ್ಕೆ ಸಿಕ್ಕ ಶಕ್ತಿಯು ಕೆಲವೇ ಸಮಯಗಳಲ್ಲಿ ಕರಗಿಬಿಡುತ್ತದೆ. ಇದೇ ಕಾರಣಕ್ಕೆ ನೀವು ಬಾಳೆ ಹಣ್ಣನ್ನು ಓಟ್ಸ್​​, ಇತರೆ ಹಣ್ಣುಗಳೊಂದಿಗೆ ಸೇವಿಸುವುದು ಹೆಚ್ಚು ಸೂಕ್ತ ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ.

ಅಲ್ಲದೇ ಬಾಳೆಹಣ್ಣಿನಲ್ಲಿ ಮ್ಯಾಗ್ನೆಷಿಯಂ ಅತಿಯಾದ ಪ್ರಮಾಣದಲ್ಲಿದೆ. ಹೀಗಾಗಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದ್ರೆ ಅದು ದೇಹದ ಜೀರ್ಣ ಕ್ರಿಯೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುತ್ತದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »