TOP STORIES:

FOLLOW US

ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸೋದು ಎಷ್ಟು ಸೇಫ್? ಹಾಗಾದ್ರೆ ಓದಿ ಈ ಸುದ್ದಿ..!


ಆರೋಗ್ಯಕರ ದೇಹವನ್ನು ಪಡೆಯಬೇಕು ಅಂದರೆ ಬೆಳಗ್ಗಿನ ಉಪಹಾರದ ಕಡೆಯೂ ಸೂಕ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಆದರೆ ಅನೇಕರಿಗೆ ಕೆಲಸಕ್ಕೆ ಹೋಗುವ ತರಾತುರಿ, ಮಕ್ಕಳನ್ನು ಶಾಲೆಗೆ ಕಳುಹಿಸುವ ಒತ್ತಡದಿಂದಾಗಿ ಉಪಹಾರ ಸೇವಿಸಲು ಸಾಧ್ಯವೇ ಆಗೋದಿಲ್ಲ. ಇಂತಹ ಸಂದರ್ಭದಲ್ಲಿ ಅನೇಕರು ಬಾಳೆ ಹಣ್ಣನ್ನು ತಿಂದು ಹೊಟ್ಟೆ ತುಂಬಿಸಿಕೊಳ್ಳುವುದುಂಟು.

ಈ ರೀತಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸೋದು ಎಷ್ಟು ಸೇಫ್​ ಎಂದು ಎಂದಾದರೂ ಯೋಚಿಸಿದ್ದೀರೇ..? ಇಲ್ಲ ಎಂದಾದಲ್ಲಿ ಈ ಸ್ಟೋರಿಯನ್ನು ನೀವು ಓದಲೇಬೇಕು.

ರಾತ್ರಿ ಗಂಟೆಗಟ್ಟಲೇ ನಿದ್ದೆ ಮಾಡಿ ಬೆಳಗ್ಗೆ ಏಳುವ ನೀವು ಏನನ್ನು ಸೇವಿಸುತ್ತೀರಾ ಅನ್ನೋದು ನಿಮ್ಮ ಆರೋಗ್ಯವನ್ನು ರಕ್ಷಿಸಲೂಬಹುದು. ಹಾಳುಗೆಡವಲೂಬಹುದು. ಸುಲಭವಾಗಿ ಸಿಗುತ್ತೆ ಎಂಬ ಕಾರಣಕ್ಕೆ ಅನೇಕರು ಬೆಳಗ್ಗೆ ಬಾಳೆಹಣ್ಣನ್ನು ತಿಂದು ಹೊಟ್ಟೆ ತುಂಬಿಸಿಕೊಳ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದು ಕೂಡ ಹೌದು.

ಬಾಳೆಹಣ್ಣನ್ನು ತಿನ್ನಬೇಕು ಎನಿಸಿದ್ರೆ ಸಾಕು ಅದನ್ನು ಹುಡುಕೋದು ಕಷ್ಟದ ಕೆಲಸವೇ ಅಲ್ಲ. ಒಂದು ವೇಳೆ ನೀವು ಫಿಟ್​ನೆಸ್​ ಪ್ರಿಯರಾಗಿದ್ದು ಬೆಳಗ್ಗಿನ ಉಪಹಾರ ತಯಾರಿಸುವ ವಿಚಾರದಲ್ಲಿ ಸೋಂಬೇರಿಗಳಾಗಿದ್ದರೆ ಬಾಳೆಹಣ್ಣು ನಿಮಗೆ ಉತ್ತಮ ಆಯ್ಕೆಯಾಗಿದೆ. ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಫೈಬರ್​, ಪೊಟ್ಯಾಷಿಯಂ, ಮ್ಯಾಗ್ನಿಷೀಯಂ ಅಂಶವಿದೆ. ಇದರಿಂದ ನಿಮ್ಮ ಜೀವ ನಿರೋಧ ಶಕ್ತಿ ಉತ್ತಮ ಆಗೋದ್ರ ಜೊತೆ ಜೊತೆಗೆ ಮೂಳೆಗಳೂ ಬಲಿಷ್ಠವಾಗುತ್ತದೆ.

ಅಲ್ಲದೇ ಬಾಳೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣಾಂಶ, ವಿಟಮಿನ್​ ಬಿ, ವಿಟಮಿನ್​ ಬಿ 6 ಇದೆ. ಬಾಳೆಹಣ್ಣಿನಲ್ಲಿರುವ ಸಿಹಿ ರುಚಿಯು ನಿಮಗೆ ಹೆಚ್ಚಿನ ಎನರ್ಜಿಯನ್ನು ನೀಡುತ್ತೆ. ಆದರೆ ಯಾವುದೇ ಕಾರಣಕ್ಕೂ ಬಾಳೆ ಹಣ್ಣೊಂದನ್ನೇ ನೀವು ಉಪಹಾರದಲ್ಲಿ ಸೇವನೆ ಮಾಡುವಂತಿಲ್ಲ..!

ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಪೋಷಕಾಂಶ ಅಡಗಿದೆ ಎಂಬ ಮಾತನ್ನು ತಳ್ಳಿ ಹಾಕುವಂತಿಲ್ಲ. ಆದರೆ ಇದರಲ್ಲಿರುವ ಸಕ್ಕರೆ ಅಂಶ ಮಧುಮೇಹಿಗಳಿಗೆ ಒಳ್ಳೆಯದಲ್ಲ. ಅಲ್ಲದೇ ಬಾಳೆಹಣ್ಣಿನಿಂದ ದೇಹಕ್ಕೆ ಸಿಕ್ಕ ಶಕ್ತಿಯು ಕೆಲವೇ ಸಮಯಗಳಲ್ಲಿ ಕರಗಿಬಿಡುತ್ತದೆ. ಇದೇ ಕಾರಣಕ್ಕೆ ನೀವು ಬಾಳೆ ಹಣ್ಣನ್ನು ಓಟ್ಸ್​​, ಇತರೆ ಹಣ್ಣುಗಳೊಂದಿಗೆ ಸೇವಿಸುವುದು ಹೆಚ್ಚು ಸೂಕ್ತ ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ.

ಅಲ್ಲದೇ ಬಾಳೆಹಣ್ಣಿನಲ್ಲಿ ಮ್ಯಾಗ್ನೆಷಿಯಂ ಅತಿಯಾದ ಪ್ರಮಾಣದಲ್ಲಿದೆ. ಹೀಗಾಗಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದ್ರೆ ಅದು ದೇಹದ ಜೀರ್ಣ ಕ್ರಿಯೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುತ್ತದೆ.


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »