TOP STORIES:

ಗಣರಾಜ್ಯೋತ್ಸವ ಪರೇಡ್‌ : ಬ್ರಹ್ಮಶ್ರೀ ನಾರಾಯಣಗುರುಗಳ ಸ್ಥಬ್ದಚಿತ್ರ ತಿರಸ್ಕರಿಸಿದ ಕೇಂದ್ರ ಸರಕಾರ


ನವದೆಹಲಿ : ಪ್ರತಿವರ್ಷದಂತೆ ಗಣರಾಜ್ಯೋತ್ಸವ ಪರೇಡ್‌ಗೆ ಸಿದ್ದತೆಗಳು ನಡೆದಿವೆ. ಪರೇಡ್‌ ಸಂದರ್ಭದಲ್ಲಿ ವಿವಿಧ ರಾಜ್ಯಗಳುಸ್ತಬ್ಧಚಿತ್ರಗಳನ್ನು ಪ್ರದರ್ಶಿಸುತ್ತವೆ. ಆದರೆ ಕೇಂದ್ರ ಸರಕಾರ ಬಾರಿ ಕೇರಳದ ನಾರಾಯಣಗುರು ಸ್ತಬ್ದಚಿತ್ರವನ್ನು ತಿರಸ್ಕರಿಸುವಮೂಲಕ ವಿವಾದವನ್ನು ಸೃಷ್ಟಿಸಿದೆ.

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಆಯಾ ರಾಜ್ಯಗಳು ಸ್ತಬ್ದಚಿತ್ರಗಳನ್ನು ಪ್ರದರ್ಶಿಸುತ್ತವೆ. ಅದರಂತೆ ಕೇರಳಸರಕಾರ ನಾರಾಯಣಗುರು ಸ್ತಬ್ದ ಚಿತ್ರದ ಪ್ರಸ್ತಾಪವನ್ನು ಕಳಿಸಿತ್ತು. ಕೇರಳ ಕಳಿಸಿದ್ದ ʼಶ್ರೀ ನಾರಾಯಣ ಗುರುʼ ಹಾಗೂʼಜಟಾಯುಪ್ಪಾರʼ ಪ್ರತಿಕೃತಿಗಳನ್ನು ಕೇಂದ್ರ ಸರಕಾರವು ತಿರಸ್ಕರಿಸಿ, ಆದಿ ಶಂಕರಾಚಾರ್ಯರ ಪ್ರತಿಮೆ ಇಡಬೇಕೆಂದು ಸೂಚಿಸಿದೆಎಂದು ಮಲಿಯಾಳಂ ಪತ್ರಿಕೆಗಳು ವರದಿ ಮಾಡಿವೆ.

ಕೇರಳದ ಪ್ರಮುಖ ಪತ್ರಿಕೆಯಾಗಿರುವ ಮಾತೃಭೂಮಿಯು ಕುರಿತು ವರದಿ ಮಾಡಿದೆ. “ಕೇರಳ ಸರಕಾರವು ಜಟಾಯುಪ್ಪಾರದಹಿನ್ನೆಲೆಯುಳ್ಳ, ಮಹಿಳಾ ಸಬಲೀಕರಣವನ್ನು ಮತ್ತು ಪ್ರವಾಸೋದ್ಯಮವನ್ನು ಬಿಂಬಿಸುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದಪರೇಡ್‌ ನಲ್ಲಿ ಪ್ರದರ್ಶಿಸಲು ಉದ್ದೇಶಿಸಿತ್ತು. ಇದರೊಂದಿಗೆ ಅದರ ಮುಂಭಾಗದಲ್ಲಿ ಮಹಾನ್ ಧಾರ್ಮಿಕ ಸುಧಾರಕರಾದ ಶ್ರೀನಾರಾಯಣ ಗುರುಗಳ ಪ್ರತಿಮೆಯನ್ನು ಇರಿಸುವುದಾಗಿ ಕೇಂದ್ರ ಸರಕಾರಕ್ಕೆ ಕಳಿಸಿದ್ದ ಪ್ರಸ್ತಾವನೆಯಲ್ಲಿ ಉಲ್ಲೇಖಿಸಿತ್ತು.

ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಳುಎಂಬ ವಿಷಯವನ್ನು ಇದು ಆಧರಿಸಿದೆ. ಸ್ತಬ್ಧ ಚಿತ್ರಗಳನ್ನು ಮೌಲ್ಯಮಾಪನ ಮಾಡಲು ಮತ್ತು ಶಿಫಾರಸು ಮಾಡಲು ರಕ್ಷಣಾ ಸಚಿವಾಲಯವು ನೇಮಿಸಿದ ತೀರ್ಪುಗಾರರುಎಲ್ಲಾ ಐದು ಸುತ್ತಿನ ಚರ್ಚೆಗಳಲ್ಲಿ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದರು. ಡಿಸೆಂಬರ್ 18 ರಂದು ನಡೆದ ಅಂತಿಮ ಸುತ್ತಿನಲ್ಲಿತೀರ್ಪುಗಾರರು ಸ್ಕೆಚ್ ಅನ್ನು ಅನುಮೋದಿಸಿದರು ಮತ್ತು ಸಂಗೀತ ಸಂಯೋಜಿಸಲು ನಿರ್ದೇಶಿಸಿದ್ದರು.

ಸ್ತಬ್ಧ ಚಿತ್ರವನ್ನು ಅನುಮೋದಿಸಲಾಗಿದೆ ಎಂಬ ಪತ್ರ ಬರದಿದ್ದ ಕಾರಣ ಕೇರಳ ಸರಕಾರವು ಕುರಿತು ವಿಚಾರಿಸಿದಾಗ, ಅನುಮೋದನೆಗೊಂಡ 12 ರಾಜ್ಯಗಳ ಪಟ್ಟಿಯಲ್ಲಿ ಕೇರಳ ರಾಜ್ಯದ ಹೆಸರಿರಲಿಲ್ಲ ಎಂದು ತಿಳಿದು ಬಂದಿದೆ. ಕೇಂದ್ರ ಸರಕಾರ ಕೇರಳಕ್ಕೆ ರೀತಿ ಅವಮಾನ ಮಾಡುತ್ತಿರುವುದು ಇದೇ ಮೊದಲಲ್ಲ. 2019, 2020 ರಲ್ಲೂ ತಿರಸ್ಕಾರ ಮಾಡಿ ಪರೇಡ್‌ ನಿಂದ ಹೊರಹಾಕಿತ್ತು. ಇನ್ನೊಂದು ಪ್ರಮುಖ ಸಂಗತಿ ಎಂದರೆ ಕೇರಳದ ಸ್ತಬ್ಧ ಚಿತ್ರವು ಹಿಂದೆ ಐದು ಬಾರಿ ಪ್ರಶಸ್ತಿ ಗೆದ್ದಿದೆ.

ನಾರಾಯಣಗುರುಗಳ ಪ್ರತಿಮೆಯ ಸ್ಥಬ್ಧಚಿತ್ರವನ್ನು ತಿರಸ್ಕರಿಸಿರುವುದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಒಕ್ಕೂಟ ಸರಕಾರದ ನಿಲುವನ್ನು ಜನರು ಖಂಡಿಸುತ್ತಿದ್ದಾರೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »