TOP STORIES:

FOLLOW US

ಗಣರಾಜ್ಯೋತ್ಸವ ಪರೇಡ್‌ : ಬ್ರಹ್ಮಶ್ರೀ ನಾರಾಯಣಗುರುಗಳ ಸ್ಥಬ್ದಚಿತ್ರ ತಿರಸ್ಕರಿಸಿದ ಕೇಂದ್ರ ಸರಕಾರ


ನವದೆಹಲಿ : ಪ್ರತಿವರ್ಷದಂತೆ ಗಣರಾಜ್ಯೋತ್ಸವ ಪರೇಡ್‌ಗೆ ಸಿದ್ದತೆಗಳು ನಡೆದಿವೆ. ಪರೇಡ್‌ ಸಂದರ್ಭದಲ್ಲಿ ವಿವಿಧ ರಾಜ್ಯಗಳುಸ್ತಬ್ಧಚಿತ್ರಗಳನ್ನು ಪ್ರದರ್ಶಿಸುತ್ತವೆ. ಆದರೆ ಕೇಂದ್ರ ಸರಕಾರ ಬಾರಿ ಕೇರಳದ ನಾರಾಯಣಗುರು ಸ್ತಬ್ದಚಿತ್ರವನ್ನು ತಿರಸ್ಕರಿಸುವಮೂಲಕ ವಿವಾದವನ್ನು ಸೃಷ್ಟಿಸಿದೆ.

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಆಯಾ ರಾಜ್ಯಗಳು ಸ್ತಬ್ದಚಿತ್ರಗಳನ್ನು ಪ್ರದರ್ಶಿಸುತ್ತವೆ. ಅದರಂತೆ ಕೇರಳಸರಕಾರ ನಾರಾಯಣಗುರು ಸ್ತಬ್ದ ಚಿತ್ರದ ಪ್ರಸ್ತಾಪವನ್ನು ಕಳಿಸಿತ್ತು. ಕೇರಳ ಕಳಿಸಿದ್ದ ʼಶ್ರೀ ನಾರಾಯಣ ಗುರುʼ ಹಾಗೂʼಜಟಾಯುಪ್ಪಾರʼ ಪ್ರತಿಕೃತಿಗಳನ್ನು ಕೇಂದ್ರ ಸರಕಾರವು ತಿರಸ್ಕರಿಸಿ, ಆದಿ ಶಂಕರಾಚಾರ್ಯರ ಪ್ರತಿಮೆ ಇಡಬೇಕೆಂದು ಸೂಚಿಸಿದೆಎಂದು ಮಲಿಯಾಳಂ ಪತ್ರಿಕೆಗಳು ವರದಿ ಮಾಡಿವೆ.

ಕೇರಳದ ಪ್ರಮುಖ ಪತ್ರಿಕೆಯಾಗಿರುವ ಮಾತೃಭೂಮಿಯು ಕುರಿತು ವರದಿ ಮಾಡಿದೆ. “ಕೇರಳ ಸರಕಾರವು ಜಟಾಯುಪ್ಪಾರದಹಿನ್ನೆಲೆಯುಳ್ಳ, ಮಹಿಳಾ ಸಬಲೀಕರಣವನ್ನು ಮತ್ತು ಪ್ರವಾಸೋದ್ಯಮವನ್ನು ಬಿಂಬಿಸುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದಪರೇಡ್‌ ನಲ್ಲಿ ಪ್ರದರ್ಶಿಸಲು ಉದ್ದೇಶಿಸಿತ್ತು. ಇದರೊಂದಿಗೆ ಅದರ ಮುಂಭಾಗದಲ್ಲಿ ಮಹಾನ್ ಧಾರ್ಮಿಕ ಸುಧಾರಕರಾದ ಶ್ರೀನಾರಾಯಣ ಗುರುಗಳ ಪ್ರತಿಮೆಯನ್ನು ಇರಿಸುವುದಾಗಿ ಕೇಂದ್ರ ಸರಕಾರಕ್ಕೆ ಕಳಿಸಿದ್ದ ಪ್ರಸ್ತಾವನೆಯಲ್ಲಿ ಉಲ್ಲೇಖಿಸಿತ್ತು.

ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಳುಎಂಬ ವಿಷಯವನ್ನು ಇದು ಆಧರಿಸಿದೆ. ಸ್ತಬ್ಧ ಚಿತ್ರಗಳನ್ನು ಮೌಲ್ಯಮಾಪನ ಮಾಡಲು ಮತ್ತು ಶಿಫಾರಸು ಮಾಡಲು ರಕ್ಷಣಾ ಸಚಿವಾಲಯವು ನೇಮಿಸಿದ ತೀರ್ಪುಗಾರರುಎಲ್ಲಾ ಐದು ಸುತ್ತಿನ ಚರ್ಚೆಗಳಲ್ಲಿ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದರು. ಡಿಸೆಂಬರ್ 18 ರಂದು ನಡೆದ ಅಂತಿಮ ಸುತ್ತಿನಲ್ಲಿತೀರ್ಪುಗಾರರು ಸ್ಕೆಚ್ ಅನ್ನು ಅನುಮೋದಿಸಿದರು ಮತ್ತು ಸಂಗೀತ ಸಂಯೋಜಿಸಲು ನಿರ್ದೇಶಿಸಿದ್ದರು.

ಸ್ತಬ್ಧ ಚಿತ್ರವನ್ನು ಅನುಮೋದಿಸಲಾಗಿದೆ ಎಂಬ ಪತ್ರ ಬರದಿದ್ದ ಕಾರಣ ಕೇರಳ ಸರಕಾರವು ಕುರಿತು ವಿಚಾರಿಸಿದಾಗ, ಅನುಮೋದನೆಗೊಂಡ 12 ರಾಜ್ಯಗಳ ಪಟ್ಟಿಯಲ್ಲಿ ಕೇರಳ ರಾಜ್ಯದ ಹೆಸರಿರಲಿಲ್ಲ ಎಂದು ತಿಳಿದು ಬಂದಿದೆ. ಕೇಂದ್ರ ಸರಕಾರ ಕೇರಳಕ್ಕೆ ರೀತಿ ಅವಮಾನ ಮಾಡುತ್ತಿರುವುದು ಇದೇ ಮೊದಲಲ್ಲ. 2019, 2020 ರಲ್ಲೂ ತಿರಸ್ಕಾರ ಮಾಡಿ ಪರೇಡ್‌ ನಿಂದ ಹೊರಹಾಕಿತ್ತು. ಇನ್ನೊಂದು ಪ್ರಮುಖ ಸಂಗತಿ ಎಂದರೆ ಕೇರಳದ ಸ್ತಬ್ಧ ಚಿತ್ರವು ಹಿಂದೆ ಐದು ಬಾರಿ ಪ್ರಶಸ್ತಿ ಗೆದ್ದಿದೆ.

ನಾರಾಯಣಗುರುಗಳ ಪ್ರತಿಮೆಯ ಸ್ಥಬ್ಧಚಿತ್ರವನ್ನು ತಿರಸ್ಕರಿಸಿರುವುದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಒಕ್ಕೂಟ ಸರಕಾರದ ನಿಲುವನ್ನು ಜನರು ಖಂಡಿಸುತ್ತಿದ್ದಾರೆ.


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »