TOP STORIES:

FOLLOW US

ಗಣರಾಜ್ಯೋತ್ಸವ ಪರೇಡ್‌ : ಬ್ರಹ್ಮಶ್ರೀ ನಾರಾಯಣಗುರುಗಳ ಸ್ಥಬ್ದಚಿತ್ರ ತಿರಸ್ಕರಿಸಿದ ಕೇಂದ್ರ ಸರಕಾರ


ನವದೆಹಲಿ : ಪ್ರತಿವರ್ಷದಂತೆ ಗಣರಾಜ್ಯೋತ್ಸವ ಪರೇಡ್‌ಗೆ ಸಿದ್ದತೆಗಳು ನಡೆದಿವೆ. ಪರೇಡ್‌ ಸಂದರ್ಭದಲ್ಲಿ ವಿವಿಧ ರಾಜ್ಯಗಳುಸ್ತಬ್ಧಚಿತ್ರಗಳನ್ನು ಪ್ರದರ್ಶಿಸುತ್ತವೆ. ಆದರೆ ಕೇಂದ್ರ ಸರಕಾರ ಬಾರಿ ಕೇರಳದ ನಾರಾಯಣಗುರು ಸ್ತಬ್ದಚಿತ್ರವನ್ನು ತಿರಸ್ಕರಿಸುವಮೂಲಕ ವಿವಾದವನ್ನು ಸೃಷ್ಟಿಸಿದೆ.

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಆಯಾ ರಾಜ್ಯಗಳು ಸ್ತಬ್ದಚಿತ್ರಗಳನ್ನು ಪ್ರದರ್ಶಿಸುತ್ತವೆ. ಅದರಂತೆ ಕೇರಳಸರಕಾರ ನಾರಾಯಣಗುರು ಸ್ತಬ್ದ ಚಿತ್ರದ ಪ್ರಸ್ತಾಪವನ್ನು ಕಳಿಸಿತ್ತು. ಕೇರಳ ಕಳಿಸಿದ್ದ ʼಶ್ರೀ ನಾರಾಯಣ ಗುರುʼ ಹಾಗೂʼಜಟಾಯುಪ್ಪಾರʼ ಪ್ರತಿಕೃತಿಗಳನ್ನು ಕೇಂದ್ರ ಸರಕಾರವು ತಿರಸ್ಕರಿಸಿ, ಆದಿ ಶಂಕರಾಚಾರ್ಯರ ಪ್ರತಿಮೆ ಇಡಬೇಕೆಂದು ಸೂಚಿಸಿದೆಎಂದು ಮಲಿಯಾಳಂ ಪತ್ರಿಕೆಗಳು ವರದಿ ಮಾಡಿವೆ.

ಕೇರಳದ ಪ್ರಮುಖ ಪತ್ರಿಕೆಯಾಗಿರುವ ಮಾತೃಭೂಮಿಯು ಕುರಿತು ವರದಿ ಮಾಡಿದೆ. “ಕೇರಳ ಸರಕಾರವು ಜಟಾಯುಪ್ಪಾರದಹಿನ್ನೆಲೆಯುಳ್ಳ, ಮಹಿಳಾ ಸಬಲೀಕರಣವನ್ನು ಮತ್ತು ಪ್ರವಾಸೋದ್ಯಮವನ್ನು ಬಿಂಬಿಸುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದಪರೇಡ್‌ ನಲ್ಲಿ ಪ್ರದರ್ಶಿಸಲು ಉದ್ದೇಶಿಸಿತ್ತು. ಇದರೊಂದಿಗೆ ಅದರ ಮುಂಭಾಗದಲ್ಲಿ ಮಹಾನ್ ಧಾರ್ಮಿಕ ಸುಧಾರಕರಾದ ಶ್ರೀನಾರಾಯಣ ಗುರುಗಳ ಪ್ರತಿಮೆಯನ್ನು ಇರಿಸುವುದಾಗಿ ಕೇಂದ್ರ ಸರಕಾರಕ್ಕೆ ಕಳಿಸಿದ್ದ ಪ್ರಸ್ತಾವನೆಯಲ್ಲಿ ಉಲ್ಲೇಖಿಸಿತ್ತು.

ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಳುಎಂಬ ವಿಷಯವನ್ನು ಇದು ಆಧರಿಸಿದೆ. ಸ್ತಬ್ಧ ಚಿತ್ರಗಳನ್ನು ಮೌಲ್ಯಮಾಪನ ಮಾಡಲು ಮತ್ತು ಶಿಫಾರಸು ಮಾಡಲು ರಕ್ಷಣಾ ಸಚಿವಾಲಯವು ನೇಮಿಸಿದ ತೀರ್ಪುಗಾರರುಎಲ್ಲಾ ಐದು ಸುತ್ತಿನ ಚರ್ಚೆಗಳಲ್ಲಿ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದರು. ಡಿಸೆಂಬರ್ 18 ರಂದು ನಡೆದ ಅಂತಿಮ ಸುತ್ತಿನಲ್ಲಿತೀರ್ಪುಗಾರರು ಸ್ಕೆಚ್ ಅನ್ನು ಅನುಮೋದಿಸಿದರು ಮತ್ತು ಸಂಗೀತ ಸಂಯೋಜಿಸಲು ನಿರ್ದೇಶಿಸಿದ್ದರು.

ಸ್ತಬ್ಧ ಚಿತ್ರವನ್ನು ಅನುಮೋದಿಸಲಾಗಿದೆ ಎಂಬ ಪತ್ರ ಬರದಿದ್ದ ಕಾರಣ ಕೇರಳ ಸರಕಾರವು ಕುರಿತು ವಿಚಾರಿಸಿದಾಗ, ಅನುಮೋದನೆಗೊಂಡ 12 ರಾಜ್ಯಗಳ ಪಟ್ಟಿಯಲ್ಲಿ ಕೇರಳ ರಾಜ್ಯದ ಹೆಸರಿರಲಿಲ್ಲ ಎಂದು ತಿಳಿದು ಬಂದಿದೆ. ಕೇಂದ್ರ ಸರಕಾರ ಕೇರಳಕ್ಕೆ ರೀತಿ ಅವಮಾನ ಮಾಡುತ್ತಿರುವುದು ಇದೇ ಮೊದಲಲ್ಲ. 2019, 2020 ರಲ್ಲೂ ತಿರಸ್ಕಾರ ಮಾಡಿ ಪರೇಡ್‌ ನಿಂದ ಹೊರಹಾಕಿತ್ತು. ಇನ್ನೊಂದು ಪ್ರಮುಖ ಸಂಗತಿ ಎಂದರೆ ಕೇರಳದ ಸ್ತಬ್ಧ ಚಿತ್ರವು ಹಿಂದೆ ಐದು ಬಾರಿ ಪ್ರಶಸ್ತಿ ಗೆದ್ದಿದೆ.

ನಾರಾಯಣಗುರುಗಳ ಪ್ರತಿಮೆಯ ಸ್ಥಬ್ಧಚಿತ್ರವನ್ನು ತಿರಸ್ಕರಿಸಿರುವುದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಒಕ್ಕೂಟ ಸರಕಾರದ ನಿಲುವನ್ನು ಜನರು ಖಂಡಿಸುತ್ತಿದ್ದಾರೆ.


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »