TOP STORIES:

ಗಣರಾಜ್ಯೋತ್ಸವ ಪರೇಡ್‌ : ಬ್ರಹ್ಮಶ್ರೀ ನಾರಾಯಣಗುರುಗಳ ಸ್ಥಬ್ದಚಿತ್ರ ತಿರಸ್ಕರಿಸಿದ ಕೇಂದ್ರ ಸರಕಾರ


ನವದೆಹಲಿ : ಪ್ರತಿವರ್ಷದಂತೆ ಗಣರಾಜ್ಯೋತ್ಸವ ಪರೇಡ್‌ಗೆ ಸಿದ್ದತೆಗಳು ನಡೆದಿವೆ. ಪರೇಡ್‌ ಸಂದರ್ಭದಲ್ಲಿ ವಿವಿಧ ರಾಜ್ಯಗಳುಸ್ತಬ್ಧಚಿತ್ರಗಳನ್ನು ಪ್ರದರ್ಶಿಸುತ್ತವೆ. ಆದರೆ ಕೇಂದ್ರ ಸರಕಾರ ಬಾರಿ ಕೇರಳದ ನಾರಾಯಣಗುರು ಸ್ತಬ್ದಚಿತ್ರವನ್ನು ತಿರಸ್ಕರಿಸುವಮೂಲಕ ವಿವಾದವನ್ನು ಸೃಷ್ಟಿಸಿದೆ.

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಆಯಾ ರಾಜ್ಯಗಳು ಸ್ತಬ್ದಚಿತ್ರಗಳನ್ನು ಪ್ರದರ್ಶಿಸುತ್ತವೆ. ಅದರಂತೆ ಕೇರಳಸರಕಾರ ನಾರಾಯಣಗುರು ಸ್ತಬ್ದ ಚಿತ್ರದ ಪ್ರಸ್ತಾಪವನ್ನು ಕಳಿಸಿತ್ತು. ಕೇರಳ ಕಳಿಸಿದ್ದ ʼಶ್ರೀ ನಾರಾಯಣ ಗುರುʼ ಹಾಗೂʼಜಟಾಯುಪ್ಪಾರʼ ಪ್ರತಿಕೃತಿಗಳನ್ನು ಕೇಂದ್ರ ಸರಕಾರವು ತಿರಸ್ಕರಿಸಿ, ಆದಿ ಶಂಕರಾಚಾರ್ಯರ ಪ್ರತಿಮೆ ಇಡಬೇಕೆಂದು ಸೂಚಿಸಿದೆಎಂದು ಮಲಿಯಾಳಂ ಪತ್ರಿಕೆಗಳು ವರದಿ ಮಾಡಿವೆ.

ಕೇರಳದ ಪ್ರಮುಖ ಪತ್ರಿಕೆಯಾಗಿರುವ ಮಾತೃಭೂಮಿಯು ಕುರಿತು ವರದಿ ಮಾಡಿದೆ. “ಕೇರಳ ಸರಕಾರವು ಜಟಾಯುಪ್ಪಾರದಹಿನ್ನೆಲೆಯುಳ್ಳ, ಮಹಿಳಾ ಸಬಲೀಕರಣವನ್ನು ಮತ್ತು ಪ್ರವಾಸೋದ್ಯಮವನ್ನು ಬಿಂಬಿಸುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದಪರೇಡ್‌ ನಲ್ಲಿ ಪ್ರದರ್ಶಿಸಲು ಉದ್ದೇಶಿಸಿತ್ತು. ಇದರೊಂದಿಗೆ ಅದರ ಮುಂಭಾಗದಲ್ಲಿ ಮಹಾನ್ ಧಾರ್ಮಿಕ ಸುಧಾರಕರಾದ ಶ್ರೀನಾರಾಯಣ ಗುರುಗಳ ಪ್ರತಿಮೆಯನ್ನು ಇರಿಸುವುದಾಗಿ ಕೇಂದ್ರ ಸರಕಾರಕ್ಕೆ ಕಳಿಸಿದ್ದ ಪ್ರಸ್ತಾವನೆಯಲ್ಲಿ ಉಲ್ಲೇಖಿಸಿತ್ತು.

ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಳುಎಂಬ ವಿಷಯವನ್ನು ಇದು ಆಧರಿಸಿದೆ. ಸ್ತಬ್ಧ ಚಿತ್ರಗಳನ್ನು ಮೌಲ್ಯಮಾಪನ ಮಾಡಲು ಮತ್ತು ಶಿಫಾರಸು ಮಾಡಲು ರಕ್ಷಣಾ ಸಚಿವಾಲಯವು ನೇಮಿಸಿದ ತೀರ್ಪುಗಾರರುಎಲ್ಲಾ ಐದು ಸುತ್ತಿನ ಚರ್ಚೆಗಳಲ್ಲಿ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದರು. ಡಿಸೆಂಬರ್ 18 ರಂದು ನಡೆದ ಅಂತಿಮ ಸುತ್ತಿನಲ್ಲಿತೀರ್ಪುಗಾರರು ಸ್ಕೆಚ್ ಅನ್ನು ಅನುಮೋದಿಸಿದರು ಮತ್ತು ಸಂಗೀತ ಸಂಯೋಜಿಸಲು ನಿರ್ದೇಶಿಸಿದ್ದರು.

ಸ್ತಬ್ಧ ಚಿತ್ರವನ್ನು ಅನುಮೋದಿಸಲಾಗಿದೆ ಎಂಬ ಪತ್ರ ಬರದಿದ್ದ ಕಾರಣ ಕೇರಳ ಸರಕಾರವು ಕುರಿತು ವಿಚಾರಿಸಿದಾಗ, ಅನುಮೋದನೆಗೊಂಡ 12 ರಾಜ್ಯಗಳ ಪಟ್ಟಿಯಲ್ಲಿ ಕೇರಳ ರಾಜ್ಯದ ಹೆಸರಿರಲಿಲ್ಲ ಎಂದು ತಿಳಿದು ಬಂದಿದೆ. ಕೇಂದ್ರ ಸರಕಾರ ಕೇರಳಕ್ಕೆ ರೀತಿ ಅವಮಾನ ಮಾಡುತ್ತಿರುವುದು ಇದೇ ಮೊದಲಲ್ಲ. 2019, 2020 ರಲ್ಲೂ ತಿರಸ್ಕಾರ ಮಾಡಿ ಪರೇಡ್‌ ನಿಂದ ಹೊರಹಾಕಿತ್ತು. ಇನ್ನೊಂದು ಪ್ರಮುಖ ಸಂಗತಿ ಎಂದರೆ ಕೇರಳದ ಸ್ತಬ್ಧ ಚಿತ್ರವು ಹಿಂದೆ ಐದು ಬಾರಿ ಪ್ರಶಸ್ತಿ ಗೆದ್ದಿದೆ.

ನಾರಾಯಣಗುರುಗಳ ಪ್ರತಿಮೆಯ ಸ್ಥಬ್ಧಚಿತ್ರವನ್ನು ತಿರಸ್ಕರಿಸಿರುವುದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಒಕ್ಕೂಟ ಸರಕಾರದ ನಿಲುವನ್ನು ಜನರು ಖಂಡಿಸುತ್ತಿದ್ದಾರೆ.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »