TOP STORIES:

ಗರೋಡಿ ಸ್ಟೀಲ್ ಸಂಸ್ಥೆಯಿಂದ ಜೆಎಸ್‌ಡಬ್ಲ್ಯೂ ಸಹಕಾರದೊಂದಿಗೆ ಉಚಿತ ಅಂಬುಲೆನ್ಸ್ ಸೇವೆ


ಮಂಗಳೂರು: ಗರೋಡಿ ಸ್ಟೀಲ್ ಸಂಸ್ಥೆಯಿಂದ ಜೆಎಸ್‌ಡಬ್ಲ್ಯೂ ಸಹಕಾರದೊಂದಿಗೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಗೆ ಆರಂಭಿಸಲಾದ ಉಚಿತ ಅಂಬುಲೆನ್ಸ್ ಸೇವೆಗೆ ಸೋಮವಾರ ಬೈಕಂಪಾಡಿ ಗರೋಡಿ ಸ್ಟೀಲ್ ಪ್ರಾಂಗಣದಲ್ಲಿ ಚಾಲನೆ ನೀಡಲಾಯಿತು.

ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅಂಬುಲೆನ್ಸ್ ಸೇವೆ ಉದ್ಘಾಟಿಸಿ ಮಾತನಾಡಿ, ಕೋವಿಡ್ ಸಂಕಷ್ಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉದ್ಯಮಿಗಳು ನಾನಾ ರೀತಿಯಲ್ಲಿ ಸಹಕಾರ ನೀಡಿದ್ದಾರೆ. ಇದೀಗ ಗರೋಡಿ ಸ್ಟೀಲ್ ಸಂಸ್ಥೆಯ ಸಂಸ್ಥಾಪಕರಾದ ಮನೋಜ್ ಸರಿಪಲ್ಲ ಅವರು ಮೂಡುಬಿದಿರೆ ಕ್ಷೇತ್ರಕ್ಕೆ ಉಚಿತ ಅಂಬುಲೆನ್ಸ್ ಸೇವೆ ನೀಡಿರುವುದು ಶ್ಲಾಘನೀಯ ಮತ್ತು ಅವರ ಸಮಾಜಮುಖಿ ಕಾರ್ಯವನ್ನು ವ್ಯಕ್ತಪಡಿಸುತ್ತದೆ.

ಈ ಕಾರ್ಯಕ್ಕೆ ಮೂಡುಬಿದಿರೆ ಜನತೆಯ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಇನ್ನಷ್ಟು ಸಾಮಾಜಿಕ ಕಾರ್ಯಗಳು ಈ ಸಂಸ್ಥೆಯ ಮುಖೇನ ನಡೆಯಲಿ ಎಂದು ಶುಭ ಹಾರೈಸಿದರು.

ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮಾತನಾಡಿ, ಸಾಮಾಜಿಕ ಸೇವಾ ಮನೋಭಾವದಿಂದ ಉದ್ಯಮಿಗಳು ಸರಕಾರದ ಜತೆ ಕೈ ಜೋಡಿಸಿದಾಗ ಜನರಿಗೆ ಉತ್ತಮ ಸೌಲಭ್ಯ ನೀಡಲು ಸಾಧ್ಯವಾಗುತ್ತದೆ.  ಕೊರೊನಾ ವಿರುದ್ದದ ಹೋರಾಟದಲ್ಲಿ ಜೀವದ ರಕ್ಷಣೆಗೆ ಪ್ರಥಮ ಆಧ್ಯತೆಯಾಗಿದೆ.ಈ ನಿಟ್ಟಿನಲ್ಲಿ ಮನೋಜ್ ಅವರ ಕೊಡುವೆ ಅಭಿನಂದನೀಯ ಎಂದರು.

ಗರೋಡಿ ಸ್ಟೀಲ್ ಸಂಸ್ಥೆಯ ಸಂಸ್ಥಾಪಕ ಮನೋಜ್ ಸರಿಪಲ್ಲ ಮಾತನಾಡಿ, ಅಂಬುಲೆನ್ಸ್ ಸಂಪೂರ್ಣ ಉಚಿತ ಸೇವೆ ನೀಡಲಿದ್ದು, ಹವಾನಿಯಂತ್ರಿತ ಸಹಿತ ಆಕ್ಸಿಜನ್, ಪ್ರಥಮ ಚಿಕಿತ್ಸೆಗೆ ಪೂರಕವಾದ ವ್ಯವಸ್ಥೆಗಳು ಇವೆ. ಇಬ್ಬರು ಸಿಬ್ಬಂದಿಗಳು ಅದಕ್ಕಾಗಿ ನೇಮಿಸಲಾಗಿದೆ. ಮೂಡುಬಿದಿರೆ ಶಾಸಕರ ಮನವಿ ಮೇರೆಗೆ ಈ ಅಂಬುಲೆನ್ಸ್ ನ್ನು ನೀಡಲಾಗಿದ್ದು ಜನತೆಯ ಜೀವ ರಕ್ಷಣೆಗೆ ಬಳಕೆಯಾಗಲಿದೆ ಎಂದರು.

ಜೆಎಸ್‌ಡಬ್ಲ್ಯೂ ಸ್ಟೀಲ್ ಲಿ. ಸಂಸ್ಥೆಯ ರಾಜ್ಯ ಪ್ರಾಂತೀಯ ಸೇಲ್ಸ್ ಮ್ಯಾನೇಜರ್ ಶ್ರೀವತ್ಸ ಕಲುಮಂಗಿ ಮಾತನಾಡಿ, ಸಮಾಜಮುಖೀ ಚಟುವಟಿಕೆಯ ಭಾಗವಾಗಿ ಸಂಸ್ಥೆಯಿಂದ ಬೆಂಗಳೂರು, ಹುಬ್ಬಳ್ಳಿ ಗೋವಾದಲ್ಲಿ ಉಚಿತ ಅಂಬುಲೆನ್ಸ್ ಕೊಡುಗೆ ನೀಡಲಾಗಿದೆ. ಮಹಾರಾಷ್ಟ ಬಳ್ಳಾರಿಯಲ್ಲಿ ೨ಸಾವಿರ ಆಕ್ಸಿಜನ್ ಬೆಡ್ ನಿರ್ಮಿಸಲಾಗಿದೆ. ನಾಗರಿಕರ ಸೇವೆಯಲ್ಲಿ ಜೆಎಸ್‌ಡಬ್ಲ್ಯೂ ಸಂಸ್ಥೆ ಸದಾ ಮುಂದಿದೆ ಎಂದರು.

ಈ ಸಂದರ್ಭ ಮನಪಾ ಸದಸ್ಯ ರಾಜೇಶ್ ಸಾಲ್ಯಾನ್, ಗರೋಡಿ ಸ್ಟೀಲ್ ಸಂಸ್ಥೆಯ ಪಾಲುದಾರರಾದ ಬಿಂಬಾ ಮನೋಜ್, ಕನ್ಸಲ್ಟೆಂಟ್ ಗಿರೀಶ್ ರಾವ್, ಜನರಲ್ ಮ್ಯಾನೇಜರ್‌ಗಳಾದ ಸುಮಂತ್ ಮಲ್ಯ, ನಾಗರಾಜ್ ಎಸ್. ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.


Related Posts

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್


Read More »

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »