TOP STORIES:

ಗರೋಡಿ ಸ್ಟೀಲ್ ಸಂಸ್ಥೆಯಿಂದ ಜೆಎಸ್‌ಡಬ್ಲ್ಯೂ ಸಹಕಾರದೊಂದಿಗೆ ಉಚಿತ ಅಂಬುಲೆನ್ಸ್ ಸೇವೆ


ಮಂಗಳೂರು: ಗರೋಡಿ ಸ್ಟೀಲ್ ಸಂಸ್ಥೆಯಿಂದ ಜೆಎಸ್‌ಡಬ್ಲ್ಯೂ ಸಹಕಾರದೊಂದಿಗೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಗೆ ಆರಂಭಿಸಲಾದ ಉಚಿತ ಅಂಬುಲೆನ್ಸ್ ಸೇವೆಗೆ ಸೋಮವಾರ ಬೈಕಂಪಾಡಿ ಗರೋಡಿ ಸ್ಟೀಲ್ ಪ್ರಾಂಗಣದಲ್ಲಿ ಚಾಲನೆ ನೀಡಲಾಯಿತು.

ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅಂಬುಲೆನ್ಸ್ ಸೇವೆ ಉದ್ಘಾಟಿಸಿ ಮಾತನಾಡಿ, ಕೋವಿಡ್ ಸಂಕಷ್ಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉದ್ಯಮಿಗಳು ನಾನಾ ರೀತಿಯಲ್ಲಿ ಸಹಕಾರ ನೀಡಿದ್ದಾರೆ. ಇದೀಗ ಗರೋಡಿ ಸ್ಟೀಲ್ ಸಂಸ್ಥೆಯ ಸಂಸ್ಥಾಪಕರಾದ ಮನೋಜ್ ಸರಿಪಲ್ಲ ಅವರು ಮೂಡುಬಿದಿರೆ ಕ್ಷೇತ್ರಕ್ಕೆ ಉಚಿತ ಅಂಬುಲೆನ್ಸ್ ಸೇವೆ ನೀಡಿರುವುದು ಶ್ಲಾಘನೀಯ ಮತ್ತು ಅವರ ಸಮಾಜಮುಖಿ ಕಾರ್ಯವನ್ನು ವ್ಯಕ್ತಪಡಿಸುತ್ತದೆ.

ಈ ಕಾರ್ಯಕ್ಕೆ ಮೂಡುಬಿದಿರೆ ಜನತೆಯ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಇನ್ನಷ್ಟು ಸಾಮಾಜಿಕ ಕಾರ್ಯಗಳು ಈ ಸಂಸ್ಥೆಯ ಮುಖೇನ ನಡೆಯಲಿ ಎಂದು ಶುಭ ಹಾರೈಸಿದರು.

ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮಾತನಾಡಿ, ಸಾಮಾಜಿಕ ಸೇವಾ ಮನೋಭಾವದಿಂದ ಉದ್ಯಮಿಗಳು ಸರಕಾರದ ಜತೆ ಕೈ ಜೋಡಿಸಿದಾಗ ಜನರಿಗೆ ಉತ್ತಮ ಸೌಲಭ್ಯ ನೀಡಲು ಸಾಧ್ಯವಾಗುತ್ತದೆ.  ಕೊರೊನಾ ವಿರುದ್ದದ ಹೋರಾಟದಲ್ಲಿ ಜೀವದ ರಕ್ಷಣೆಗೆ ಪ್ರಥಮ ಆಧ್ಯತೆಯಾಗಿದೆ.ಈ ನಿಟ್ಟಿನಲ್ಲಿ ಮನೋಜ್ ಅವರ ಕೊಡುವೆ ಅಭಿನಂದನೀಯ ಎಂದರು.

ಗರೋಡಿ ಸ್ಟೀಲ್ ಸಂಸ್ಥೆಯ ಸಂಸ್ಥಾಪಕ ಮನೋಜ್ ಸರಿಪಲ್ಲ ಮಾತನಾಡಿ, ಅಂಬುಲೆನ್ಸ್ ಸಂಪೂರ್ಣ ಉಚಿತ ಸೇವೆ ನೀಡಲಿದ್ದು, ಹವಾನಿಯಂತ್ರಿತ ಸಹಿತ ಆಕ್ಸಿಜನ್, ಪ್ರಥಮ ಚಿಕಿತ್ಸೆಗೆ ಪೂರಕವಾದ ವ್ಯವಸ್ಥೆಗಳು ಇವೆ. ಇಬ್ಬರು ಸಿಬ್ಬಂದಿಗಳು ಅದಕ್ಕಾಗಿ ನೇಮಿಸಲಾಗಿದೆ. ಮೂಡುಬಿದಿರೆ ಶಾಸಕರ ಮನವಿ ಮೇರೆಗೆ ಈ ಅಂಬುಲೆನ್ಸ್ ನ್ನು ನೀಡಲಾಗಿದ್ದು ಜನತೆಯ ಜೀವ ರಕ್ಷಣೆಗೆ ಬಳಕೆಯಾಗಲಿದೆ ಎಂದರು.

ಜೆಎಸ್‌ಡಬ್ಲ್ಯೂ ಸ್ಟೀಲ್ ಲಿ. ಸಂಸ್ಥೆಯ ರಾಜ್ಯ ಪ್ರಾಂತೀಯ ಸೇಲ್ಸ್ ಮ್ಯಾನೇಜರ್ ಶ್ರೀವತ್ಸ ಕಲುಮಂಗಿ ಮಾತನಾಡಿ, ಸಮಾಜಮುಖೀ ಚಟುವಟಿಕೆಯ ಭಾಗವಾಗಿ ಸಂಸ್ಥೆಯಿಂದ ಬೆಂಗಳೂರು, ಹುಬ್ಬಳ್ಳಿ ಗೋವಾದಲ್ಲಿ ಉಚಿತ ಅಂಬುಲೆನ್ಸ್ ಕೊಡುಗೆ ನೀಡಲಾಗಿದೆ. ಮಹಾರಾಷ್ಟ ಬಳ್ಳಾರಿಯಲ್ಲಿ ೨ಸಾವಿರ ಆಕ್ಸಿಜನ್ ಬೆಡ್ ನಿರ್ಮಿಸಲಾಗಿದೆ. ನಾಗರಿಕರ ಸೇವೆಯಲ್ಲಿ ಜೆಎಸ್‌ಡಬ್ಲ್ಯೂ ಸಂಸ್ಥೆ ಸದಾ ಮುಂದಿದೆ ಎಂದರು.

ಈ ಸಂದರ್ಭ ಮನಪಾ ಸದಸ್ಯ ರಾಜೇಶ್ ಸಾಲ್ಯಾನ್, ಗರೋಡಿ ಸ್ಟೀಲ್ ಸಂಸ್ಥೆಯ ಪಾಲುದಾರರಾದ ಬಿಂಬಾ ಮನೋಜ್, ಕನ್ಸಲ್ಟೆಂಟ್ ಗಿರೀಶ್ ರಾವ್, ಜನರಲ್ ಮ್ಯಾನೇಜರ್‌ಗಳಾದ ಸುಮಂತ್ ಮಲ್ಯ, ನಾಗರಾಜ್ ಎಸ್. ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »