TOP STORIES:

FOLLOW US

ಗರೋಡಿ ಸ್ಟೀಲ್ ಸಂಸ್ಥೆಯಿಂದ ಜೆಎಸ್‌ಡಬ್ಲ್ಯೂ ಸಹಕಾರದೊಂದಿಗೆ ಉಚಿತ ಅಂಬುಲೆನ್ಸ್ ಸೇವೆ


ಮಂಗಳೂರು: ಗರೋಡಿ ಸ್ಟೀಲ್ ಸಂಸ್ಥೆಯಿಂದ ಜೆಎಸ್‌ಡಬ್ಲ್ಯೂ ಸಹಕಾರದೊಂದಿಗೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಗೆ ಆರಂಭಿಸಲಾದ ಉಚಿತ ಅಂಬುಲೆನ್ಸ್ ಸೇವೆಗೆ ಸೋಮವಾರ ಬೈಕಂಪಾಡಿ ಗರೋಡಿ ಸ್ಟೀಲ್ ಪ್ರಾಂಗಣದಲ್ಲಿ ಚಾಲನೆ ನೀಡಲಾಯಿತು.

ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅಂಬುಲೆನ್ಸ್ ಸೇವೆ ಉದ್ಘಾಟಿಸಿ ಮಾತನಾಡಿ, ಕೋವಿಡ್ ಸಂಕಷ್ಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉದ್ಯಮಿಗಳು ನಾನಾ ರೀತಿಯಲ್ಲಿ ಸಹಕಾರ ನೀಡಿದ್ದಾರೆ. ಇದೀಗ ಗರೋಡಿ ಸ್ಟೀಲ್ ಸಂಸ್ಥೆಯ ಸಂಸ್ಥಾಪಕರಾದ ಮನೋಜ್ ಸರಿಪಲ್ಲ ಅವರು ಮೂಡುಬಿದಿರೆ ಕ್ಷೇತ್ರಕ್ಕೆ ಉಚಿತ ಅಂಬುಲೆನ್ಸ್ ಸೇವೆ ನೀಡಿರುವುದು ಶ್ಲಾಘನೀಯ ಮತ್ತು ಅವರ ಸಮಾಜಮುಖಿ ಕಾರ್ಯವನ್ನು ವ್ಯಕ್ತಪಡಿಸುತ್ತದೆ.

ಈ ಕಾರ್ಯಕ್ಕೆ ಮೂಡುಬಿದಿರೆ ಜನತೆಯ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಇನ್ನಷ್ಟು ಸಾಮಾಜಿಕ ಕಾರ್ಯಗಳು ಈ ಸಂಸ್ಥೆಯ ಮುಖೇನ ನಡೆಯಲಿ ಎಂದು ಶುಭ ಹಾರೈಸಿದರು.

ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮಾತನಾಡಿ, ಸಾಮಾಜಿಕ ಸೇವಾ ಮನೋಭಾವದಿಂದ ಉದ್ಯಮಿಗಳು ಸರಕಾರದ ಜತೆ ಕೈ ಜೋಡಿಸಿದಾಗ ಜನರಿಗೆ ಉತ್ತಮ ಸೌಲಭ್ಯ ನೀಡಲು ಸಾಧ್ಯವಾಗುತ್ತದೆ.  ಕೊರೊನಾ ವಿರುದ್ದದ ಹೋರಾಟದಲ್ಲಿ ಜೀವದ ರಕ್ಷಣೆಗೆ ಪ್ರಥಮ ಆಧ್ಯತೆಯಾಗಿದೆ.ಈ ನಿಟ್ಟಿನಲ್ಲಿ ಮನೋಜ್ ಅವರ ಕೊಡುವೆ ಅಭಿನಂದನೀಯ ಎಂದರು.

ಗರೋಡಿ ಸ್ಟೀಲ್ ಸಂಸ್ಥೆಯ ಸಂಸ್ಥಾಪಕ ಮನೋಜ್ ಸರಿಪಲ್ಲ ಮಾತನಾಡಿ, ಅಂಬುಲೆನ್ಸ್ ಸಂಪೂರ್ಣ ಉಚಿತ ಸೇವೆ ನೀಡಲಿದ್ದು, ಹವಾನಿಯಂತ್ರಿತ ಸಹಿತ ಆಕ್ಸಿಜನ್, ಪ್ರಥಮ ಚಿಕಿತ್ಸೆಗೆ ಪೂರಕವಾದ ವ್ಯವಸ್ಥೆಗಳು ಇವೆ. ಇಬ್ಬರು ಸಿಬ್ಬಂದಿಗಳು ಅದಕ್ಕಾಗಿ ನೇಮಿಸಲಾಗಿದೆ. ಮೂಡುಬಿದಿರೆ ಶಾಸಕರ ಮನವಿ ಮೇರೆಗೆ ಈ ಅಂಬುಲೆನ್ಸ್ ನ್ನು ನೀಡಲಾಗಿದ್ದು ಜನತೆಯ ಜೀವ ರಕ್ಷಣೆಗೆ ಬಳಕೆಯಾಗಲಿದೆ ಎಂದರು.

ಜೆಎಸ್‌ಡಬ್ಲ್ಯೂ ಸ್ಟೀಲ್ ಲಿ. ಸಂಸ್ಥೆಯ ರಾಜ್ಯ ಪ್ರಾಂತೀಯ ಸೇಲ್ಸ್ ಮ್ಯಾನೇಜರ್ ಶ್ರೀವತ್ಸ ಕಲುಮಂಗಿ ಮಾತನಾಡಿ, ಸಮಾಜಮುಖೀ ಚಟುವಟಿಕೆಯ ಭಾಗವಾಗಿ ಸಂಸ್ಥೆಯಿಂದ ಬೆಂಗಳೂರು, ಹುಬ್ಬಳ್ಳಿ ಗೋವಾದಲ್ಲಿ ಉಚಿತ ಅಂಬುಲೆನ್ಸ್ ಕೊಡುಗೆ ನೀಡಲಾಗಿದೆ. ಮಹಾರಾಷ್ಟ ಬಳ್ಳಾರಿಯಲ್ಲಿ ೨ಸಾವಿರ ಆಕ್ಸಿಜನ್ ಬೆಡ್ ನಿರ್ಮಿಸಲಾಗಿದೆ. ನಾಗರಿಕರ ಸೇವೆಯಲ್ಲಿ ಜೆಎಸ್‌ಡಬ್ಲ್ಯೂ ಸಂಸ್ಥೆ ಸದಾ ಮುಂದಿದೆ ಎಂದರು.

ಈ ಸಂದರ್ಭ ಮನಪಾ ಸದಸ್ಯ ರಾಜೇಶ್ ಸಾಲ್ಯಾನ್, ಗರೋಡಿ ಸ್ಟೀಲ್ ಸಂಸ್ಥೆಯ ಪಾಲುದಾರರಾದ ಬಿಂಬಾ ಮನೋಜ್, ಕನ್ಸಲ್ಟೆಂಟ್ ಗಿರೀಶ್ ರಾವ್, ಜನರಲ್ ಮ್ಯಾನೇಜರ್‌ಗಳಾದ ಸುಮಂತ್ ಮಲ್ಯ, ನಾಗರಾಜ್ ಎಸ್. ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »