TOP STORIES:

ಗರ್ಭಗುಡಿಯಲ್ಲಿರುವ ಶಿವನೇ ಮಂಗಳೂರು ದಸರಾ ರೂವಾರಿ ಜನಾರ್ದನ ಪೂಜಾರಿ ಮನದಾಳ


ಮಂಗಳೂರು: ನಾನು ‘ಮಂಗಳೂರು ದಸರಾ’ದ ರೂವಾರಿ ಎಂದು ಹೇಳುತ್ತಾರೆ. ಆದರೆ ನಾನು ಇದರ ರೂವಾರಿಯಾಗಲು ಸಾಧ್ಯವಿಲ್ಲ ಗರ್ಭಗುಡಿಯಲ್ಲಿರುವ ಶಿವನೇ ಇದರ ರೂವಾರಿಯಾಗಿದ್ದಾನೆ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ಹರಿಕಾರ, ಮಾಜಿ ಕೇಂದ್ರದ ಸಚಿವ ಬಿ.ಜನಾರ್ದನ ಪೂಜಾರಿ ಹೇಳಿದರು.

ಕುದ್ರೋಳಿಯಲ್ಲಿ ಶನಿವಾರ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಶಿವನ ಆಶೀರ್ವಾದದಿಂದ ಮಂಗಳೂರು ಸಾಂಗವಾಗಿ ನಡೆದುಕೊಂಡು ಬರುತ್ತಿದೆ. ಶಿವನ ಆಶೀರ್ವಾದ ಎಲ್ಲರ ಮೇಲೆ ಇರಲಿದೆ ಎಂದು ಪೂಜಾರಿ ಹಾರೈಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಸರಕಾರ ರೂಪಿಸಿದ ನಿಯಮಗಳಿಗೆ ಸ್ಪಂದಿಸಿ ದಸರಾ ಹಬ್ಬವನ್ನು ಸಂಭ್ರಮಿಸ ಬೇಕು. ಕ್ಷೇತ್ರದ ಆಡಳಿತ ಮಂಡಳಿ ಸರಕಾರದ ಆದೇಶಕ್ಕೆ ಸ್ಪಂದಿಸಬೇಕು. ಗೊಂದಲಗಳಿಗೆ ಅವಕಾಶ ಮಾಡಿ ಕೊಡ ಬಾರದು. ಕ್ಷೇತ್ರಾಡಳಿತ ಮಂಡಳಿ, ಭಕ್ತರು ಜತೆಯಾಗಿ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸೋಣ ಎಂದವರು ಹೇಳಿದರು.

ಸಂಜೆ 6 ಗಂಟೆ ವೇಳೆಗೆ ಶ್ರೀಕ್ಷೇತ್ರಕ್ಕೆ ಆಗಮಿಸಿದ ಜನಾರ್ದನ ಪೂಜಾರಿ ಅವರನ್ನು ಕ್ಷೇತ್ರದ ಆಡಳಿತ ಸಮಿತಿಯ ಪದಾಧಿಕಾರಿಗಳು ಸ್ವಾಗತಿಸಿದರು. ಕ್ಷೇತ್ರದ ದರ್ಬಾರು ಮಂಟಪದಲ್ಲಿ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರ ಸಹಿತ ಶಾರದಾ ಮಾತೆಯ ವಿಗ್ರಹಗಳನ್ನು ವೀಕ್ಷಿಸಿದ ಬಳಿಕ ಅವರು ದೀಪ ಬೆಳಗಿಸಿ ಮಂಗಳೂರು ದಸರಾ ಉದ್ಘಾಟಿಸಿದರು. ಸುಮಾರು ಅರ್ಧಗಂಟೆ ನೃತ್ಯ ಭಜನಾ ಕಾರ್ಯಕ್ರಮ ವೀಕ್ಷಿಸಿ ಪುನೀತರಾದರು. ಬಳಿಕ ಕ್ಷೇತ್ರದ ಮುಖ್ಯದ್ವಾರದ ಎದು ಹುಲಿವೇಷ ಕುಣಿತ ವೀಕ್ಷಿಸಿ ಅವರಿಗೆ ಹಾರೈಸಿದರು.

ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್., ಶೇಖರ್ ಪೂಜಾರಿ, ಕೆ. ಮಹೇಶ್ಚಂದ್ರ, ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯರಾದ ದೇವೇಂದ್ರ ಪೂಜಾರಿ, ಹರಿಕೃಷ್ಣ ಬಂಟ್ವಾಳ್, ಡಾ. ಬಿ.ಜಿ. ಸುವರ್ಣ, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಮೇಯರ್ ಪುರುಷೋತ್ತಮ ಚಿತ್ರಾಪುರ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಾಮ್‌ದಾಸ್, ಕಾರ್ಪೊರೇಟರ್‌ಗಳಾದ ಅನಿಲ್ ಕುಮಾರ್, ಸುಧೀರ್ ಶೆಟ್ಟಿ, ಯೋಗೀಶ್ ಮೂಲ್ಕಿ ಮತ್ತಿತರರು ಉಪಸ್ಥಿತರಿದ್ದರು.

 

 


Related Posts

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »