TOP STORIES:

ಗರ್ಭಿಣಿ ಹೊಟ್ಟೆ ಆಕಾರ ನೋಡಿದ್ರೆ ಮಗು ಗಂಡೋ, ಹೆಣ್ಣೋ ಅಂತ ತಿಳಿಯತ್ತಾ?; ಪ್ರೆಗ್ನೆಸಿಯ ಸತ್ಯ ಮಿಥ್ಯಗಳು ಇಲ್ಲಿವೆ


ನವಜಾತ ಶಿಶು ಅಥವಾ ಜನಿಸಲಿರುವ ಶಿಶುವಿನ ಕುರಿತು ನೀಡುವ ಕೆಲವು ತಪ್ಪು ಮಾಹಿತಿಗಳು ಮತ್ತು ಆ ಕುರಿತ ವಾಸ್ತವ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನವಜಾತ ಶಿಶುಗಳು ಅಥವಾ ಹುಟ್ಟಲಿರುವ ಶಿಶು ಯಾವುದು ಎಂಬ ಕುತೂಹಲ ಸಾಮಾನ್ಯ. ಅನೇಕರು ಗರ್ಭಿಣಿಯರ ಹೊಟ್ಟೆಯ ಆಕಾರ ನೋಡಿ ಅನೇಕರು ಹುಟ್ಟುವ ಮಗು ಗಂಡೋ ಅಥವಾ ಹೆಣ್ಣೋ ಎಂದು ಅಂದಾಜು ಮಾಡುತ್ತಾರೆ. ಅಲ್ಲದೇ ಅನೇಕ ಗರ್ಭಿಣಿಯರು ಕೂಡ ಈ ಕುರಿತು ವಿಚಾರವನ್ನು ಅಂತರ್ಜಾಲದಲ್ಲಿ ಹುಡುಕುತ್ತಾರೆ.  ಅಷ್ಟೇ ಅಲ್ಲದೇ ಗರ್ಭಾವಸ್ಥೆಯಲ್ಲಿನ ಅನೇಕ ವಿಚಾರಗಳ ಕುರಿತು ನಮ್ಮ ಸುತ್ತ ಮುತ್ತಲಿನವರು ಅನೇಕ ಸಲಹೆ ನೀಡುತ್ತಲೇ ಇರುತ್ತಾರೆ. ಆದರೆ ಅವೆಲ್ಲವೂ ಸತ್ಯವಾಗಿರುವುದಿಲ್ಲ, ಅವುಗಳಲ್ಲಿ ಸತ್ಯಕ್ಕೆ ದೂರವಾದ ಮತ್ತು ಅವೈಜ್ಞಾನಿಕವಾದ ಮಾಹಿತಿಗಳು ಬಹಳಷ್ಟಿರುತ್ತವೆ. ನವಜಾತ ಶಿಶುವಿನ ತಾಯಂದಿರು ಅಥವಾ ಸದ್ಯದಲ್ಲಿಯೇ ಶಿಶುವಿಗೆ ಜನ್ಮ ನೀಡಲಿರುವ ಭಾವಿ ಅಮ್ಮಂದಿರ ಸುತ್ತಮುತ್ತ ತರಾವರಿ ಸಲಹೆಗಳನ್ನು ನೀಡುವ ಅಥವಾ ಊಹೆಗಳನ್ನು ಮಾಡುವ ಜನರ ದಂಡೇ ಇರುತ್ತದೆ ಎಂಬುವುದು ಸರ್ವಕಾಲಿಕ ಸತ್ಯ.

 

ಒಂದು ನವಜಾತ ಶಿಶುವಿನ ತಾಯಿ ಅಥವಾ ಸದ್ಯದಲ್ಲಿಯೇ ಶಿಶುವಿಗೆ ಜನ್ಮ ನೀಡಲಿರುವ ಮಹಿಳೆ ಆದಾಗಲೇ ದುರ್ಬಲಳಾಗಿರಬಹುದು ಅಥವಾ ಹೊಸ ಅನುಭವದ ಒತ್ತಡದ ಮನಸ್ಥಿತಿಯಲ್ಲಿ ಇರಬಹುದು, ಅಂತಹ ಸಂದರ್ಭದಲ್ಲಿ ಆಧಾರವಿಲ್ಲದ ಸಲಹೆಗಳಿಗೆ ಕಿವಿ ಕೊಡದೆ, ತಜ್ಞರು ನೀಡುವ ಮಾಹಿತಿಗಳನ್ನು ನಂಬುವುದು ಬಹಳ ಅಗತ್ಯ. ನವಜಾತ ಶಿಶು ಅಥವಾ ಜನಿಸಲಿರುವ ಶಿಶುವಿನ ಕುರಿತು ನೀಡುವ ಕೆಲವು ತಪ್ಪು ಮಾಹಿತಿಗಳು ಮತ್ತು ಆ ಕುರಿತ ವಾಸ್ತವ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

 

 

ಮಿಥ್ಯ 1: ಗರ್ಭಿಣಿಯ ಹೊಟ್ಟೆ ಎಷ್ಟು ಉಬ್ಬಿದೆ ಎಂಬುದನ್ನು ಆಧರಿಸಿ ಅದರ ಲಿಂಗವನ್ನು ನಿರ್ಧರಿಸಲಾಗುತ್ತದೆ. ಗರ್ಭಿಣಿಯ ಹೊಟ್ಟೆ ಕಡಿಮೆ ಉಬ್ಬಿದ್ದರೆ ಒಳಗಿರುವುದು ಗಂಡು ಮಗು. ಹೊಟ್ಟೆ ದೊಡ್ಡದಿದ್ದರೆ ಅದು ಹೆಣ್ಣು ಮಗು.
ಸತ್ಯ: ರಾಷ್ಟ್ರೀಯ ಆರೋಗ್ಯ ಸೇವೆಯ (ಎನ್‍ಹೆಚ್‍ಎಸ್) ಪ್ರಕಾರ, ಈ ಊಹೆಗೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ ಮತ್ತು ಹೊಟ್ಟೆಯ ಗಾತ್ರಕ್ಕೂ ಮಗುವಿನ ಲಿಂಗಕ್ಕೂ ಯಾವುದೇ ಸಂಬಂಧವಿಲ್ಲ. ಗರ್ಭಿಣಿಯ ಹೊಟ್ಟೆಯ ಗಾತ್ರ ಮತ್ತು ಆಕಾರವು ಆಕೆಯ ಸ್ನಾಯುವಿನ ಗಾತ್ರ, ರಚನೆ, ಭಂಗಿ ಮತ್ತು ಆಕೆಯ ಹೊಟ್ಟೆಯ ಸುತ್ತಲೂ ಸಂಗ್ರಹವಾಗಿರುವ ಕೊಬ್ಬನ್ನು ಅವಲಂಬಿಸಿದೆ.

ಮಿಥ್ಯ 2 : ಕೊಲಸ್ಟ್ರಮ್ ಅಥವಾ ತಾಯಿಯ ಆರಂಭದ ಎದೆಹಾಲನ್ನು ಮಗುವಿಗೆ ಕುಡಿಸಬಾರದು. ಅದು ಅಶುದ್ಧವಾಗಿರುತ್ತದೆ.

ಸತ್ಯ : ಕೊಲಸ್ಟ್ರಮ್ ಎಂದರೆ ಹಳದಿ ಬಣ್ಣವುಳ್ಳ , ತಾಯಿಯ ಪ್ರಪ್ರಥಮ ಎದೆ ಹಾಲು. ಅತ್ಯಧಿಕ ಪ್ರೊಟೀನ್ ಹೊಂದಿರುವ ಆ ಹಾಲು ಸೋಂಕು ನಿರೋಧಕ ಗುಣಗಳನ್ನು ಹೊಂದಿದೆ. ಆದ್ದರಿಂದ ಮಗುವಿಗೆ ಇದನ್ನು ಕುಡಿಸಲು ಸೂಚಿಸಲಾಗುತ್ತದೆ. ಆದರೆ, ಭಾರತದಲ್ಲಿ ಕೆಲವು ಮಹಿಳೆಯರು ಇದನ್ನು ಇಂದಿಗೂ ಅಶುದ್ಧವೆಂದು ಭಾವಿಸಿದ್ದು, ಮಗುವಿಗೆ ಕುಡಿಸಲು ನಿರಾಕರಿಸುತ್ತಾರೆ.

ಮಿಥ್ಯ 3: ನವಜಾತ ಶಿಶುವಿನ ಜೀವನ ಸಿಹಿಯಾಗಿರಬೇಕು ಎಂಬುದರ ಸಂಕೇತವಾಗಿ, ಅದಕ್ಕೆ ಪ್ರಥಮವಾಗಿ ಜೇನು ತುಪ್ಪವನ್ನು ನೆಕ್ಕಿಸುವುದು ಅತ್ಯಂತ ಪುರಾತನ ಸಂಪ್ರದಾಯ.

ಸತ್ಯ: ನವಜಾತ ಶಿಶುವಿನ ಪ್ರತಿರಕ್ಷಣಾ ವ್ಯವಸ್ಥೆ ತುಂಬಾ ನಾಜೂಕಾಗಿ ಇರುತ್ತದೆ. ಮಗುವಿಗೆ ಅದರ ಮೊದಲ ಹುಟ್ಟುಹಬ್ಬಕ್ಕಿಂತ ಮೊದಲು ಜೇನು ತುಪ್ಪವನ್ನು ನೀಡುವುದು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ಕಾರಣವೇನೆಂದರೆ, ಅದು ನವಜಾತ ಶಿಶುವಿನ ಅಪಕ್ವ ವ್ಯವಸ್ಥೆಯಲ್ಲಿ ಸೇರಿಕೊಳ್ಳಬಲ್ಲ ಬ್ಯಾಕ್ಟೀರಿಯಾವಾದ ಕ್ಲೋಸ್ಟ್ರಿಡಿಯಂ ಬೊಟುಲಿನಮ್ ಬೀಜಕಗಳನ್ನು ಹೊಂದಿರುತ್ತದೆ, ಮತ್ತು ಆ ಬ್ಯಾಕ್ಟೀರಿಯಾ ಶಿಶುವಿಗೆ ಮಾರಕ ರೋಗವನ್ನು ಉಂಟು ಮಾಡಬಹುದು.

ಮಿಥ್ಯ 4: ನವಜಾತ ಶಿಶುವಿನ ಆಹಾರ ಕ್ರಮದಲ್ಲಿ ಜ್ಯೂಸ್‍ಗಳನ್ನು ಕೂಡ ಸೇರಿಸಬೇಕು.
ಸತ್ಯ : ಹಣ್ಣಿನ ರಸದಲ್ಲಿ ವಿಟಮಿನ್ ಸಿ ಹೇರಳವಾಗಿರುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಅದು ಮಗುವಿನ ಕರುಳಿನ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಬಹುದು . ಏಕೆಂದರೆ ಆರಂಭದಲ್ಲಿ , ಅದರಲ್ಲೂ ಮುಖ್ಯವಾಗಿ ಜನಿಸಿದ ಒಂದು ವರ್ಷದವರೆಗೆ ಅವುಗಳಲ್ಲಿ ಹಣ್ಣಿನ ರಸವನ್ನು ಜೀರ್ಣ ಮಾಡಿಕೊಳ್ಳಬಲ್ಲ ಸಾಮರ್ಥ್ಯ ಇರುವುದಿಲ್ಲ.

 

ಮಿಥ್ಯ 5 : ಎರಡನೇ ಮತ್ತು ಮೂರನೆಯ ಶಿಶುಗಳಿಗೆ ಹೋಲಿಸಿದರೆ, ಮೊದಲ ಮಗು ತಡವಾಗಿ ಹೊರ ಬರುತ್ತದೆ ಎಂಬ ನಂಬಿಕೆ ಕೂಡ ಜನರಲ್ಲಿದೆ.

ಸತ್ಯ : ವಾಸ್ತವ ಏನೆಂದರೆ, ನಿಮ್ಮ ಋತುಚಕ್ರದ ಅವಧಿಯ ಉದ್ದವು ನಿಮ್ಮ ಮಗುವಿನ ಆಗಮನವನ್ನು ನಿರ್ಧರಿಸುತ್ತದೆ. ನಿಮ್ಮ ಋತುಚಕ್ರದ ಅವಧಿ ಕಡಿಮೆ ಇದ್ದರೆ ಹೆರಿಗೆ ಬೇಗ ಆಗಬಹುದು, ಉದ್ದನೆಯ ಋತುಚಕ್ರದ ಅವಧಿ ಇದ್ದಲ್ಲಿ ಹೆರಿಗೆ ಕೂಡ ತಡ ಆಗಬಹುದು.ಆದರೂ ಋತುಚಕ್ರದ ಅವಧಿ 28 ದಿನಗಳದ್ದಾಗಿದ್ದರೆ, ನಿಮಗೆ ಹೆರಿಗೆಗೆ ನಿಗದಿ ಪಡಿಸಿದ ದಿನಾಂಕದ ಹತ್ತಿರದ ತಾರೀಖಿನಲ್ಲೇ ಹೆರಿಗೆ ಆಗುವ ಸಾಧ್ಯತೆ ಇರುತ್ತದೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »