TOP STORIES:

ಗುರುಬೆಳದಿಂಗಳು ಸೇವಾ ಯೋಜನೆ : ಹುಟ್ಟು ಅಂಗವೈಕಲ್ಯದ ಮಗುವಿಗೆ ಅತ್ಯಾಧುನಿಕ ಸೌಲಭ್ಯದ ವೀಲ್‌ಚೇರ್ ವಿತರಣೆ


ಮಂಗಳೂರು: ಆರ್ಥಿಕ ಹಿಂದುಳಿದ ಕುಟುಂಬವೊಂದರ ಹುಟ್ಟು ಅಂಗವೈಕಲ್ಯದ 7 ವರ್ಷದ ಮಗುವಿಗೆ ಗುರುಬೆಳದಿಂಗಳು (ರಿ) ಕುದ್ರೋಳಿ ವತಿಯಿಂದ ಸೇವಾ ಯೋಜನೆಯ ಆರೋಗ್ಯ ನಿಧಿಯಿಂದ ಸುಮಾರು 25 ಸಾವಿರ ರೂ. ವೆಚ್ಚದ ಅತ್ಯಾಧುನಿಕ ಸೌಲಭ್ಯದ ವೀಲ್‌ಚೇರ್ ಅನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಬುಧವಾರ ಹಸ್ತಾಂತರಿಸಲಾಯಿತು.

ಕುದ್ರೋಳಿ ಗೋಕರ್ಣನಾಥ ಕಾಲೇಜು ಬಳಿಯ ನಿವಾಸಿಯೊಬ್ಬರು ನಮ್ಮ ಸಂಸ್ಥೆಯ ಜತೆ ಬಂದು ತನ್ನ ಮಗಳು ಹುಟ್ಟು ಅಂಗವೈಕಲ್ಯದಿಂದ ನಡೆದಾಡದ ಸ್ಥಿತಿಯಲ್ಲಿದ್ದು,. ಆರ್ಥಿಕ ಸಮಸ್ಯೆಯಿಂದ ವೀಲ್‌ಚೇರ್ ತೆಗೆದುಕೊಳ್ಳಲು ಕಷ್ಟಪಡುತ್ತಿದ್ದೇವೆ. ಆದರಿಂದ ಸಾಮಾನ್ಯ ಒಂದು ವೀಲ್‌ಚೇರ್ ಆದರೂ ನೀಡಿ ಸಹಕರಿಸಿ ಎಂದು ಮನವಿ ಮಾಡಿದ್ದರು. ಆದರಂತೆ ಮಗುವಿನ ಸಮಸ್ಯೆ ಬಗ್ಗೆ ಮಾಹಿತಿ ಪಡೆದುಕೊಂಡ ಗುರುಬೆಳದಿಂಗಳು ಆಯ್ಕೆ ಸಮಿತಿಯು ತಜ್ಞರ ಜತೆ ಚರ್ಚಿಸಿ ಅವರ ಸಲಹೆಯಂತೆ ಅತ್ಯಾಧುನಿಕ ಸೌಲಭ್ಯದ ( PAEDIATRIC WHEEL CHAIR) ವೀಲ್‌ಚೇರ್ ನೀಡಲು ಟೀಮ್ ಗುರುಬೆಳದಿಂಗಳು ನಿರ್ಧರಿಸಿತು.


ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಪದ್ಮರಾಜ್ ಆರ್., ಉದ್ಯಮಿಗಳಾದ ರಘುನಾಥ ಮಾಬೆನ್ ಉಡುಪಿ, ಕೋಮಲ್ ಅಂಚನ್, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಅನಿಲ್‌ಕುಮಾರ್, ಗೋಕರ್ಣನಾಥ ಸೇವಾದಳದ ಪ್ರೇಮ್‌ಕುಮಾರ್, ಪ್ರಮೋದ್ ಕೋಟ್ಯಾನ್, ಸಾಮಾಜಿಕ ಹೋರಾಟಗಾರ ಸುನೀಲ್ ಕುಮಾರ್ ಬಜಾಲ್, ರಾಜೇಂದ್ರ ಚಿಲಿಂಬಿ, ಕುದ್ರೋಳಿ ಕ್ಷೇತ್ರದ ಅರ್ಚಕರು, ಗುರುಬೆಳದಿಂಗಳು ಸದಸ್ಯರು, ಗೋಕರ್ಣನಾಥ ಸೇವಾದಳದ ಸದಸ್ಯರು ಉಪಸ್ಥಿತರಿದ್ದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »