TOP STORIES:

ಗುರುಬೆಳದಿಂಗಳು ಸೇವಾ ಯೋಜನೆ : ಹುಟ್ಟು ಅಂಗವೈಕಲ್ಯದ ಮಗುವಿಗೆ ಅತ್ಯಾಧುನಿಕ ಸೌಲಭ್ಯದ ವೀಲ್‌ಚೇರ್ ವಿತರಣೆ


ಮಂಗಳೂರು: ಆರ್ಥಿಕ ಹಿಂದುಳಿದ ಕುಟುಂಬವೊಂದರ ಹುಟ್ಟು ಅಂಗವೈಕಲ್ಯದ 7 ವರ್ಷದ ಮಗುವಿಗೆ ಗುರುಬೆಳದಿಂಗಳು (ರಿ) ಕುದ್ರೋಳಿ ವತಿಯಿಂದ ಸೇವಾ ಯೋಜನೆಯ ಆರೋಗ್ಯ ನಿಧಿಯಿಂದ ಸುಮಾರು 25 ಸಾವಿರ ರೂ. ವೆಚ್ಚದ ಅತ್ಯಾಧುನಿಕ ಸೌಲಭ್ಯದ ವೀಲ್‌ಚೇರ್ ಅನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಬುಧವಾರ ಹಸ್ತಾಂತರಿಸಲಾಯಿತು.

ಕುದ್ರೋಳಿ ಗೋಕರ್ಣನಾಥ ಕಾಲೇಜು ಬಳಿಯ ನಿವಾಸಿಯೊಬ್ಬರು ನಮ್ಮ ಸಂಸ್ಥೆಯ ಜತೆ ಬಂದು ತನ್ನ ಮಗಳು ಹುಟ್ಟು ಅಂಗವೈಕಲ್ಯದಿಂದ ನಡೆದಾಡದ ಸ್ಥಿತಿಯಲ್ಲಿದ್ದು,. ಆರ್ಥಿಕ ಸಮಸ್ಯೆಯಿಂದ ವೀಲ್‌ಚೇರ್ ತೆಗೆದುಕೊಳ್ಳಲು ಕಷ್ಟಪಡುತ್ತಿದ್ದೇವೆ. ಆದರಿಂದ ಸಾಮಾನ್ಯ ಒಂದು ವೀಲ್‌ಚೇರ್ ಆದರೂ ನೀಡಿ ಸಹಕರಿಸಿ ಎಂದು ಮನವಿ ಮಾಡಿದ್ದರು. ಆದರಂತೆ ಮಗುವಿನ ಸಮಸ್ಯೆ ಬಗ್ಗೆ ಮಾಹಿತಿ ಪಡೆದುಕೊಂಡ ಗುರುಬೆಳದಿಂಗಳು ಆಯ್ಕೆ ಸಮಿತಿಯು ತಜ್ಞರ ಜತೆ ಚರ್ಚಿಸಿ ಅವರ ಸಲಹೆಯಂತೆ ಅತ್ಯಾಧುನಿಕ ಸೌಲಭ್ಯದ ( PAEDIATRIC WHEEL CHAIR) ವೀಲ್‌ಚೇರ್ ನೀಡಲು ಟೀಮ್ ಗುರುಬೆಳದಿಂಗಳು ನಿರ್ಧರಿಸಿತು.


ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಪದ್ಮರಾಜ್ ಆರ್., ಉದ್ಯಮಿಗಳಾದ ರಘುನಾಥ ಮಾಬೆನ್ ಉಡುಪಿ, ಕೋಮಲ್ ಅಂಚನ್, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಅನಿಲ್‌ಕುಮಾರ್, ಗೋಕರ್ಣನಾಥ ಸೇವಾದಳದ ಪ್ರೇಮ್‌ಕುಮಾರ್, ಪ್ರಮೋದ್ ಕೋಟ್ಯಾನ್, ಸಾಮಾಜಿಕ ಹೋರಾಟಗಾರ ಸುನೀಲ್ ಕುಮಾರ್ ಬಜಾಲ್, ರಾಜೇಂದ್ರ ಚಿಲಿಂಬಿ, ಕುದ್ರೋಳಿ ಕ್ಷೇತ್ರದ ಅರ್ಚಕರು, ಗುರುಬೆಳದಿಂಗಳು ಸದಸ್ಯರು, ಗೋಕರ್ಣನಾಥ ಸೇವಾದಳದ ಸದಸ್ಯರು ಉಪಸ್ಥಿತರಿದ್ದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »