TOP STORIES:

ಗೆಜ್ಜೆ ಗಿರಿ ಕ್ಷೇತ್ರದ ಸೇವಾ ಕಾರ್ಯಕರ್ತ ಪ್ರವೀಣ್ ನೆಟ್ಟರ್ ಅವರ ಅಂತಿಮ ನಮನ ಕಾರ್ಯದಲ್ಲಿ ಕ್ಷೇತ್ರದ ಆಡಳಿತ ಮಂಡಳಿಯ ಪಾಲ್ಗೊಂಡ ಬಗ್ಗೆ.


ಶ್ರೀ ಕ್ಷೇತ್ರಗೆಜ್ಜೆ ಗಿರಿಯ ಸೇವಕರಾಗಿ ಕ್ಷೇತ್ರದಲ್ಲಿ ಜರಗಿದ ಅಭೂತಪೂರ್ವ, ದಾಖಲೆಯ ಭಕ್ತರು ಸಂದರ್ಶಿಸಿದ್ದ ಬ್ರಹ್ಮಕಲಶೋತ್ಸವದಲ್ಲಿತನ್ನನ್ನು ತಾನು ಸಮರ್ಪಿಸಿಕೊಂಡು   ಜವಾಬ್ದಾರಿಯುತ ಕೆಲಸಗಳನ್ನು  ಅತ್ಯುತ್ತಮವಾಗಿ ತೊಡಗಿಸಿಕೊಂಡು ಸಮಾಜಮುಖಿಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ನಮ್ಮೆಲ್ಲರ ಆತ್ಮೀಯ ವಿ ಪ್ರವೀಣ್ ನೆಟ್ಟರ್ ರವರ ಅಗಲುವಿಕೆಯನ್ನು ನಾವು ಅರಗಿಸಿಕೊಳ್ಳಲುಸಾಧ್ಯವಿಲ್ಲ ಇಂತಹ ವ್ಯಕ್ತಿಯನ್ನು ಕಳೆದುಕೊಂಡ ನೋವು ನಮ್ಮ ಬಿಲ್ಲವ ಸಮುದಾಯದ ಯಾವೊಬ್ಬ ವ್ಯಕ್ತಿಯು ಮರೆಯಲಾಸಾಧ್ಯರಾಕ್ಷಸೀಯ ಪ್ರವೃತ್ತಿಯ ದುಷ್ಕೃತ್ಯಗಳಿಗೆ ಯಬಲಿಯಾದ ಪ್ರವೀಣ್ ನೆಟ್ಟಾರುರವರ ಅಂತಿಮ ಯಾತ್ರೆಯಲ್ಲಿ ಶ್ರೀ ಕ್ಷೇತ್ರದ  ಆಡಳಿತಸಮಿತಿಯ ಪದಾಧಿಕಾರಿಗಳು ಪ್ರಾರಂಭದಿಂದ ಕೊನೆಯವರೆಗೂ ಸಮಾಜದ ಒಂದು ಅಮೂಲ್ಯ ಮುತ್ತನ್ನು ಕಳೆದುಕೊಂಡನೋವಿನಿಂದಲೇ ಅಂತಿಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮುದಾಯದ ವಿಧಿ ವಿಧಾನದಂತೆ ದಿವಂಗತ ಪ್ರವೀಣ್ ನೆಟ್ವರ್ ಅವರಅಂತ್ಯಕ್ರಿಯೆಯನ್ನು ನೆರವೇರಿಸಿವಲ್ಲಿ ಕ್ಷೇತ್ರದ ಗೌರವಾಧ್ಯಕ್ಷರಾದ ಜಯಂತ್ ನಡುಬೈಲ್ ಸ್ಥಳದಲ್ಲೇ ಇದ್ದು ಸೂಕ್ತ ವಾದಮಾರ್ಗದರ್ಶನ ನೀಡುತಿದ್ದರು‌. ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಸೇರಿದ್ದ ಐದು ಸಾವಿರ ಕ್ಕಿಂತಲೂ ಅಧಿಕ ಪ್ರವೀಣ್ಅವರ ಆಪ್ತರು, ಸಂಘಪರಿವಾರ, ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಸಂಘಟನೆಗಳ ಮುಖಂಡರು ಕಾರ್ಯಕರ್ತರು, ಕುಟುಂಬಬಳಗ,ಅವರ ಮಿತ್ರ ವೃಂದ ಎಲ್ಲರಿಗೂ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲು ಉಲ್ಲಾಸ್ ಹರಸಾಹಸ ಪಡುತಿದ್ದರು‌. ನಂತರ ಅವರ ಕುಟುಂಬಕ್ಕೂ ಆರ್ಥಿಕವಾಗಿ ಸಹಕಾರವಾಗಬೇಕು, ದುರ್ದೈವ ದಿಂದ ಕುಟುಂಬದ ದುಡಿಯುವ ಕೈಗಳೆ ಇಂದುಮರೆಯಾಗಿದೆ ಎಂದು ಪ್ರವೀಣ್ ನೆಟ್ಟಾರರವರ ಧರ್ಮ ಪತ್ನಿ ನೂತನ ಪ್ರವೀಣ್  ಯವರ ಖಾತೆಯನ್ನು ಸಾಮಾಜಿಕ ಜಾಲತಾಣದಲ್ಲಿಸಹಕಾರ ಕೋರಿ  ಹರಿಬಿಟ್ಟರು ಇದರ ಪರಿಣಾಮ ಒಂದು ಉತ್ತಮ ಮೊತ್ತ  ಸಂಗ್ರಹವಾಗಿ, ದಿವಂಗತರ ಕುಟುಂಬದ ಮುಂದಿನಜೀವನದ ನಿರ್ವಹಣೆಗೆ ಸರ್ಕಾರದ ಸಹಾಯ ಹಸ್ತವನ್ನು ಚಾಚುವ ಮಾನವೀಯ ದೃಷ್ಟಿಯಿಂದ  ಸಂದರ್ಭದಲ್ಲಿಯೋಚಿಸಿರುವುದು ಒಂದು ಉತ್ತಮ ಕೆಲಸವಾಗಿದೆ ಅಷ್ಟೇ ಅಲ್ಲದೆ ಉಸ್ತುವಾರಿ ಸಚಿವರಲ್ಲಿ ಶಾಸಕರುಗಳಲ್ಲಿ ಕುಟುಂಬಕ್ಕೆ ಹೆಚ್ಚಿನರೀತಿಯ ಸಹಕಾರವನ್ನು ಸರಕಾರದಿಂದ ನೀಡಬೇಕೆಂದು ಸಮಾಜದ ಪರವಾಗಿ ವಿನಂತಿಸಿ ಸರ್ವರ ಪ್ರೀತಿ ಚೋರ ಇಹಲೋಕತ್ಯಜಿಸಿದ ಪ್ರವೀಣ್ ಮನೆಗೆ ಮುಖ್ಯಮಂತ್ರಿಗಳು ಮತ್ತು ಗ್ರಹ ಸಚಿವರು ಭೇಟಿ ನೀಡಿ ಧೈರ್ಯ ತುಂಬ ಕೆಲಸವನ್ನು ಮಾಡಬೇಕೆಂದುಬೆಳ್ತಂಗಡಿ ಶಾಸಕರಲ್ಲಿ ಕೇಳಿಕೊಂಡರು ಜಯಂತ್ ನಡುಬೈಲ್. ಇದೆಲ್ಲವೂ ಒಬ್ಬ ಸಮಾಜದ ವ್ಯಕ್ತಿಯು ಅತ್ಯಂತ ಕಷ್ಟ ಸಂದರ್ಭದಲ್ಲಿನಮ್ಮ ಸಮಾಜದ ಶಕ್ತಿಪೀಠ ವಾದ ಶ್ರೀ ಕ್ಷೇತ್ರದ ಪದಾಧಿಕಾರಿಗಳ ಒಟ್ಟು ಸಮಾಜದ ಕಾಳಜಿಯ ಚಿಂತನೆಯ ಪ್ರತಿಫಲವಾಗಿ ಮುಖ್ಯಮಂತ್ರಿ, ಗೃಹಮಂತ್ರಿ, ರಾಷ್ಟ್ರ, ರಾಜ್ಯ, ಕೇರಳ ಬಿಜೆಪಿ ನಾಯಕರು, ಮೂರು ಸಚಿವರು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು ಮಾಜಿ ಶಾಸಕರು ಬೇರೆ ಜಿಲ್ಲೆಗಳಿಂದ ಈಡಿಗ ಸಮುದಾಯದ ಶಾಸಕರು ಜಿಲ್ಲೆಯ ಹೆಚ್ಚಿನ ಜನ ಪ್ರತಿನಿಧಿಗಳು  ಎಲ್ಲರಿಗೂ ಅಂತ್ಯಕ್ರಿಯೆ  ಮತ್ತು ದುಃಖತ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು.ಸಮಾಜದ  ಮೆಚ್ಚಿಗೆಯಕಾರ್ಯ.ಕ್ಷೇತ್ರದ ಅಧ್ಯಕ್ಷರಾದ ಶ್ರೀ ಪಿತಾಂಬರ ಹೇರಾಜೆ, ಪದಾಧಿಕಾರಿಗಳಾದ ರವಿ ಪೂಜಾರಿ ಚಿಲಿಂಬಿ, ಮೋಹನ್ ದಾಸ್,ದೀಪಕ್ಕೋಟ್ಯಾನ್, ಕ್ಷೇತ್ರದ ಟ್ರಸ್ಟಿಗಳು ಮತ್ತು ಸಿಬ್ಬಂದಿ ವರ್ಗ ಬಿಲ್ಲವ ಸಮಾಜದ ಗಣ್ಯರು ಮೃತ ಪ್ರವೀಣ್ ಅವರ ಅಂತಿಮ ದರ್ಶನಪಡೆದು ಕಂಬನಿ ಮಿಡಿದರು. ಮುಂದಿನ ದಿನಗಳಲ್ಲಿ ನಮ್ಮ ಸಮಾಜದ ಯುವಕರು ಉತ್ತಮ ರೀತಿಯಲ್ಲಿ ಸಜ್ಜನ ಜೀವನವನ್ನುನಡೆಸಲು ಉತ್ತಮ ರೀತಿಯ ಸಲಹೆ, ಮಾರ್ಗದರ್ಶನವನ್ನ ಹಂತ ಹಂತವಾಗಿ ಸಮಾಜದ ಯುವಕರಿಗೆ ತಲುಪಿಸಿ ನಮ್ಮ ಸಮಾಜಕ್ಕೆಶ್ರೀ ಕ್ಷೇತ್ರದಿಂದ ಒಂದು ಉತ್ತಮ ಮಾರ್ಗದರ್ಶನವನ್ನು ನೀಡಬೇಕು ಇದೇ ರೀತಿ ಅನೇಕ ಸಂದರ್ಭಗಳಲ್ಲಿ ಅಸಹಾಯಕಪರಿಸ್ಥಿತಿಯಲ್ಲಿರುವ ಎಲ್ಲರಿಗೂ ಸಹಾಯ ಮಾಡುವ ಶಕ್ತಿಯನ್ನು ಯೋಚನೆಯನ್ನು ಶ್ರೀ ಕ್ಷೇತ್ರದ ಶಕ್ತಿಗಳು ಕರುಣಿಸಲಿ ಎಂದು ಕ್ಷೇತ್ರದಭಕ್ತರ ಕೋರಿಕೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »