TOP STORIES:

ಗೆಜ್ಜೆ ಗಿರಿ ಕ್ಷೇತ್ರದ ಸೇವಾ ಕಾರ್ಯಕರ್ತ ಪ್ರವೀಣ್ ನೆಟ್ಟರ್ ಅವರ ಅಂತಿಮ ನಮನ ಕಾರ್ಯದಲ್ಲಿ ಕ್ಷೇತ್ರದ ಆಡಳಿತ ಮಂಡಳಿಯ ಪಾಲ್ಗೊಂಡ ಬಗ್ಗೆ.


ಶ್ರೀ ಕ್ಷೇತ್ರಗೆಜ್ಜೆ ಗಿರಿಯ ಸೇವಕರಾಗಿ ಕ್ಷೇತ್ರದಲ್ಲಿ ಜರಗಿದ ಅಭೂತಪೂರ್ವ, ದಾಖಲೆಯ ಭಕ್ತರು ಸಂದರ್ಶಿಸಿದ್ದ ಬ್ರಹ್ಮಕಲಶೋತ್ಸವದಲ್ಲಿತನ್ನನ್ನು ತಾನು ಸಮರ್ಪಿಸಿಕೊಂಡು   ಜವಾಬ್ದಾರಿಯುತ ಕೆಲಸಗಳನ್ನು  ಅತ್ಯುತ್ತಮವಾಗಿ ತೊಡಗಿಸಿಕೊಂಡು ಸಮಾಜಮುಖಿಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ನಮ್ಮೆಲ್ಲರ ಆತ್ಮೀಯ ವಿ ಪ್ರವೀಣ್ ನೆಟ್ಟರ್ ರವರ ಅಗಲುವಿಕೆಯನ್ನು ನಾವು ಅರಗಿಸಿಕೊಳ್ಳಲುಸಾಧ್ಯವಿಲ್ಲ ಇಂತಹ ವ್ಯಕ್ತಿಯನ್ನು ಕಳೆದುಕೊಂಡ ನೋವು ನಮ್ಮ ಬಿಲ್ಲವ ಸಮುದಾಯದ ಯಾವೊಬ್ಬ ವ್ಯಕ್ತಿಯು ಮರೆಯಲಾಸಾಧ್ಯರಾಕ್ಷಸೀಯ ಪ್ರವೃತ್ತಿಯ ದುಷ್ಕೃತ್ಯಗಳಿಗೆ ಯಬಲಿಯಾದ ಪ್ರವೀಣ್ ನೆಟ್ಟಾರುರವರ ಅಂತಿಮ ಯಾತ್ರೆಯಲ್ಲಿ ಶ್ರೀ ಕ್ಷೇತ್ರದ  ಆಡಳಿತಸಮಿತಿಯ ಪದಾಧಿಕಾರಿಗಳು ಪ್ರಾರಂಭದಿಂದ ಕೊನೆಯವರೆಗೂ ಸಮಾಜದ ಒಂದು ಅಮೂಲ್ಯ ಮುತ್ತನ್ನು ಕಳೆದುಕೊಂಡನೋವಿನಿಂದಲೇ ಅಂತಿಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮುದಾಯದ ವಿಧಿ ವಿಧಾನದಂತೆ ದಿವಂಗತ ಪ್ರವೀಣ್ ನೆಟ್ವರ್ ಅವರಅಂತ್ಯಕ್ರಿಯೆಯನ್ನು ನೆರವೇರಿಸಿವಲ್ಲಿ ಕ್ಷೇತ್ರದ ಗೌರವಾಧ್ಯಕ್ಷರಾದ ಜಯಂತ್ ನಡುಬೈಲ್ ಸ್ಥಳದಲ್ಲೇ ಇದ್ದು ಸೂಕ್ತ ವಾದಮಾರ್ಗದರ್ಶನ ನೀಡುತಿದ್ದರು‌. ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಸೇರಿದ್ದ ಐದು ಸಾವಿರ ಕ್ಕಿಂತಲೂ ಅಧಿಕ ಪ್ರವೀಣ್ಅವರ ಆಪ್ತರು, ಸಂಘಪರಿವಾರ, ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಸಂಘಟನೆಗಳ ಮುಖಂಡರು ಕಾರ್ಯಕರ್ತರು, ಕುಟುಂಬಬಳಗ,ಅವರ ಮಿತ್ರ ವೃಂದ ಎಲ್ಲರಿಗೂ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲು ಉಲ್ಲಾಸ್ ಹರಸಾಹಸ ಪಡುತಿದ್ದರು‌. ನಂತರ ಅವರ ಕುಟುಂಬಕ್ಕೂ ಆರ್ಥಿಕವಾಗಿ ಸಹಕಾರವಾಗಬೇಕು, ದುರ್ದೈವ ದಿಂದ ಕುಟುಂಬದ ದುಡಿಯುವ ಕೈಗಳೆ ಇಂದುಮರೆಯಾಗಿದೆ ಎಂದು ಪ್ರವೀಣ್ ನೆಟ್ಟಾರರವರ ಧರ್ಮ ಪತ್ನಿ ನೂತನ ಪ್ರವೀಣ್  ಯವರ ಖಾತೆಯನ್ನು ಸಾಮಾಜಿಕ ಜಾಲತಾಣದಲ್ಲಿಸಹಕಾರ ಕೋರಿ  ಹರಿಬಿಟ್ಟರು ಇದರ ಪರಿಣಾಮ ಒಂದು ಉತ್ತಮ ಮೊತ್ತ  ಸಂಗ್ರಹವಾಗಿ, ದಿವಂಗತರ ಕುಟುಂಬದ ಮುಂದಿನಜೀವನದ ನಿರ್ವಹಣೆಗೆ ಸರ್ಕಾರದ ಸಹಾಯ ಹಸ್ತವನ್ನು ಚಾಚುವ ಮಾನವೀಯ ದೃಷ್ಟಿಯಿಂದ  ಸಂದರ್ಭದಲ್ಲಿಯೋಚಿಸಿರುವುದು ಒಂದು ಉತ್ತಮ ಕೆಲಸವಾಗಿದೆ ಅಷ್ಟೇ ಅಲ್ಲದೆ ಉಸ್ತುವಾರಿ ಸಚಿವರಲ್ಲಿ ಶಾಸಕರುಗಳಲ್ಲಿ ಕುಟುಂಬಕ್ಕೆ ಹೆಚ್ಚಿನರೀತಿಯ ಸಹಕಾರವನ್ನು ಸರಕಾರದಿಂದ ನೀಡಬೇಕೆಂದು ಸಮಾಜದ ಪರವಾಗಿ ವಿನಂತಿಸಿ ಸರ್ವರ ಪ್ರೀತಿ ಚೋರ ಇಹಲೋಕತ್ಯಜಿಸಿದ ಪ್ರವೀಣ್ ಮನೆಗೆ ಮುಖ್ಯಮಂತ್ರಿಗಳು ಮತ್ತು ಗ್ರಹ ಸಚಿವರು ಭೇಟಿ ನೀಡಿ ಧೈರ್ಯ ತುಂಬ ಕೆಲಸವನ್ನು ಮಾಡಬೇಕೆಂದುಬೆಳ್ತಂಗಡಿ ಶಾಸಕರಲ್ಲಿ ಕೇಳಿಕೊಂಡರು ಜಯಂತ್ ನಡುಬೈಲ್. ಇದೆಲ್ಲವೂ ಒಬ್ಬ ಸಮಾಜದ ವ್ಯಕ್ತಿಯು ಅತ್ಯಂತ ಕಷ್ಟ ಸಂದರ್ಭದಲ್ಲಿನಮ್ಮ ಸಮಾಜದ ಶಕ್ತಿಪೀಠ ವಾದ ಶ್ರೀ ಕ್ಷೇತ್ರದ ಪದಾಧಿಕಾರಿಗಳ ಒಟ್ಟು ಸಮಾಜದ ಕಾಳಜಿಯ ಚಿಂತನೆಯ ಪ್ರತಿಫಲವಾಗಿ ಮುಖ್ಯಮಂತ್ರಿ, ಗೃಹಮಂತ್ರಿ, ರಾಷ್ಟ್ರ, ರಾಜ್ಯ, ಕೇರಳ ಬಿಜೆಪಿ ನಾಯಕರು, ಮೂರು ಸಚಿವರು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು ಮಾಜಿ ಶಾಸಕರು ಬೇರೆ ಜಿಲ್ಲೆಗಳಿಂದ ಈಡಿಗ ಸಮುದಾಯದ ಶಾಸಕರು ಜಿಲ್ಲೆಯ ಹೆಚ್ಚಿನ ಜನ ಪ್ರತಿನಿಧಿಗಳು  ಎಲ್ಲರಿಗೂ ಅಂತ್ಯಕ್ರಿಯೆ  ಮತ್ತು ದುಃಖತ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು.ಸಮಾಜದ  ಮೆಚ್ಚಿಗೆಯಕಾರ್ಯ.ಕ್ಷೇತ್ರದ ಅಧ್ಯಕ್ಷರಾದ ಶ್ರೀ ಪಿತಾಂಬರ ಹೇರಾಜೆ, ಪದಾಧಿಕಾರಿಗಳಾದ ರವಿ ಪೂಜಾರಿ ಚಿಲಿಂಬಿ, ಮೋಹನ್ ದಾಸ್,ದೀಪಕ್ಕೋಟ್ಯಾನ್, ಕ್ಷೇತ್ರದ ಟ್ರಸ್ಟಿಗಳು ಮತ್ತು ಸಿಬ್ಬಂದಿ ವರ್ಗ ಬಿಲ್ಲವ ಸಮಾಜದ ಗಣ್ಯರು ಮೃತ ಪ್ರವೀಣ್ ಅವರ ಅಂತಿಮ ದರ್ಶನಪಡೆದು ಕಂಬನಿ ಮಿಡಿದರು. ಮುಂದಿನ ದಿನಗಳಲ್ಲಿ ನಮ್ಮ ಸಮಾಜದ ಯುವಕರು ಉತ್ತಮ ರೀತಿಯಲ್ಲಿ ಸಜ್ಜನ ಜೀವನವನ್ನುನಡೆಸಲು ಉತ್ತಮ ರೀತಿಯ ಸಲಹೆ, ಮಾರ್ಗದರ್ಶನವನ್ನ ಹಂತ ಹಂತವಾಗಿ ಸಮಾಜದ ಯುವಕರಿಗೆ ತಲುಪಿಸಿ ನಮ್ಮ ಸಮಾಜಕ್ಕೆಶ್ರೀ ಕ್ಷೇತ್ರದಿಂದ ಒಂದು ಉತ್ತಮ ಮಾರ್ಗದರ್ಶನವನ್ನು ನೀಡಬೇಕು ಇದೇ ರೀತಿ ಅನೇಕ ಸಂದರ್ಭಗಳಲ್ಲಿ ಅಸಹಾಯಕಪರಿಸ್ಥಿತಿಯಲ್ಲಿರುವ ಎಲ್ಲರಿಗೂ ಸಹಾಯ ಮಾಡುವ ಶಕ್ತಿಯನ್ನು ಯೋಚನೆಯನ್ನು ಶ್ರೀ ಕ್ಷೇತ್ರದ ಶಕ್ತಿಗಳು ಕರುಣಿಸಲಿ ಎಂದು ಕ್ಷೇತ್ರದಭಕ್ತರ ಕೋರಿಕೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »