TOP STORIES:

FOLLOW US

ಗೆಜ್ಜೆ ಗಿರಿ ಕ್ಷೇತ್ರದ ಸೇವಾ ಕಾರ್ಯಕರ್ತ ಪ್ರವೀಣ್ ನೆಟ್ಟರ್ ಅವರ ಅಂತಿಮ ನಮನ ಕಾರ್ಯದಲ್ಲಿ ಕ್ಷೇತ್ರದ ಆಡಳಿತ ಮಂಡಳಿಯ ಪಾಲ್ಗೊಂಡ ಬಗ್ಗೆ.


ಶ್ರೀ ಕ್ಷೇತ್ರಗೆಜ್ಜೆ ಗಿರಿಯ ಸೇವಕರಾಗಿ ಕ್ಷೇತ್ರದಲ್ಲಿ ಜರಗಿದ ಅಭೂತಪೂರ್ವ, ದಾಖಲೆಯ ಭಕ್ತರು ಸಂದರ್ಶಿಸಿದ್ದ ಬ್ರಹ್ಮಕಲಶೋತ್ಸವದಲ್ಲಿತನ್ನನ್ನು ತಾನು ಸಮರ್ಪಿಸಿಕೊಂಡು   ಜವಾಬ್ದಾರಿಯುತ ಕೆಲಸಗಳನ್ನು  ಅತ್ಯುತ್ತಮವಾಗಿ ತೊಡಗಿಸಿಕೊಂಡು ಸಮಾಜಮುಖಿಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ನಮ್ಮೆಲ್ಲರ ಆತ್ಮೀಯ ವಿ ಪ್ರವೀಣ್ ನೆಟ್ಟರ್ ರವರ ಅಗಲುವಿಕೆಯನ್ನು ನಾವು ಅರಗಿಸಿಕೊಳ್ಳಲುಸಾಧ್ಯವಿಲ್ಲ ಇಂತಹ ವ್ಯಕ್ತಿಯನ್ನು ಕಳೆದುಕೊಂಡ ನೋವು ನಮ್ಮ ಬಿಲ್ಲವ ಸಮುದಾಯದ ಯಾವೊಬ್ಬ ವ್ಯಕ್ತಿಯು ಮರೆಯಲಾಸಾಧ್ಯರಾಕ್ಷಸೀಯ ಪ್ರವೃತ್ತಿಯ ದುಷ್ಕೃತ್ಯಗಳಿಗೆ ಯಬಲಿಯಾದ ಪ್ರವೀಣ್ ನೆಟ್ಟಾರುರವರ ಅಂತಿಮ ಯಾತ್ರೆಯಲ್ಲಿ ಶ್ರೀ ಕ್ಷೇತ್ರದ  ಆಡಳಿತಸಮಿತಿಯ ಪದಾಧಿಕಾರಿಗಳು ಪ್ರಾರಂಭದಿಂದ ಕೊನೆಯವರೆಗೂ ಸಮಾಜದ ಒಂದು ಅಮೂಲ್ಯ ಮುತ್ತನ್ನು ಕಳೆದುಕೊಂಡನೋವಿನಿಂದಲೇ ಅಂತಿಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮುದಾಯದ ವಿಧಿ ವಿಧಾನದಂತೆ ದಿವಂಗತ ಪ್ರವೀಣ್ ನೆಟ್ವರ್ ಅವರಅಂತ್ಯಕ್ರಿಯೆಯನ್ನು ನೆರವೇರಿಸಿವಲ್ಲಿ ಕ್ಷೇತ್ರದ ಗೌರವಾಧ್ಯಕ್ಷರಾದ ಜಯಂತ್ ನಡುಬೈಲ್ ಸ್ಥಳದಲ್ಲೇ ಇದ್ದು ಸೂಕ್ತ ವಾದಮಾರ್ಗದರ್ಶನ ನೀಡುತಿದ್ದರು‌. ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಸೇರಿದ್ದ ಐದು ಸಾವಿರ ಕ್ಕಿಂತಲೂ ಅಧಿಕ ಪ್ರವೀಣ್ಅವರ ಆಪ್ತರು, ಸಂಘಪರಿವಾರ, ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಸಂಘಟನೆಗಳ ಮುಖಂಡರು ಕಾರ್ಯಕರ್ತರು, ಕುಟುಂಬಬಳಗ,ಅವರ ಮಿತ್ರ ವೃಂದ ಎಲ್ಲರಿಗೂ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲು ಉಲ್ಲಾಸ್ ಹರಸಾಹಸ ಪಡುತಿದ್ದರು‌. ನಂತರ ಅವರ ಕುಟುಂಬಕ್ಕೂ ಆರ್ಥಿಕವಾಗಿ ಸಹಕಾರವಾಗಬೇಕು, ದುರ್ದೈವ ದಿಂದ ಕುಟುಂಬದ ದುಡಿಯುವ ಕೈಗಳೆ ಇಂದುಮರೆಯಾಗಿದೆ ಎಂದು ಪ್ರವೀಣ್ ನೆಟ್ಟಾರರವರ ಧರ್ಮ ಪತ್ನಿ ನೂತನ ಪ್ರವೀಣ್  ಯವರ ಖಾತೆಯನ್ನು ಸಾಮಾಜಿಕ ಜಾಲತಾಣದಲ್ಲಿಸಹಕಾರ ಕೋರಿ  ಹರಿಬಿಟ್ಟರು ಇದರ ಪರಿಣಾಮ ಒಂದು ಉತ್ತಮ ಮೊತ್ತ  ಸಂಗ್ರಹವಾಗಿ, ದಿವಂಗತರ ಕುಟುಂಬದ ಮುಂದಿನಜೀವನದ ನಿರ್ವಹಣೆಗೆ ಸರ್ಕಾರದ ಸಹಾಯ ಹಸ್ತವನ್ನು ಚಾಚುವ ಮಾನವೀಯ ದೃಷ್ಟಿಯಿಂದ  ಸಂದರ್ಭದಲ್ಲಿಯೋಚಿಸಿರುವುದು ಒಂದು ಉತ್ತಮ ಕೆಲಸವಾಗಿದೆ ಅಷ್ಟೇ ಅಲ್ಲದೆ ಉಸ್ತುವಾರಿ ಸಚಿವರಲ್ಲಿ ಶಾಸಕರುಗಳಲ್ಲಿ ಕುಟುಂಬಕ್ಕೆ ಹೆಚ್ಚಿನರೀತಿಯ ಸಹಕಾರವನ್ನು ಸರಕಾರದಿಂದ ನೀಡಬೇಕೆಂದು ಸಮಾಜದ ಪರವಾಗಿ ವಿನಂತಿಸಿ ಸರ್ವರ ಪ್ರೀತಿ ಚೋರ ಇಹಲೋಕತ್ಯಜಿಸಿದ ಪ್ರವೀಣ್ ಮನೆಗೆ ಮುಖ್ಯಮಂತ್ರಿಗಳು ಮತ್ತು ಗ್ರಹ ಸಚಿವರು ಭೇಟಿ ನೀಡಿ ಧೈರ್ಯ ತುಂಬ ಕೆಲಸವನ್ನು ಮಾಡಬೇಕೆಂದುಬೆಳ್ತಂಗಡಿ ಶಾಸಕರಲ್ಲಿ ಕೇಳಿಕೊಂಡರು ಜಯಂತ್ ನಡುಬೈಲ್. ಇದೆಲ್ಲವೂ ಒಬ್ಬ ಸಮಾಜದ ವ್ಯಕ್ತಿಯು ಅತ್ಯಂತ ಕಷ್ಟ ಸಂದರ್ಭದಲ್ಲಿನಮ್ಮ ಸಮಾಜದ ಶಕ್ತಿಪೀಠ ವಾದ ಶ್ರೀ ಕ್ಷೇತ್ರದ ಪದಾಧಿಕಾರಿಗಳ ಒಟ್ಟು ಸಮಾಜದ ಕಾಳಜಿಯ ಚಿಂತನೆಯ ಪ್ರತಿಫಲವಾಗಿ ಮುಖ್ಯಮಂತ್ರಿ, ಗೃಹಮಂತ್ರಿ, ರಾಷ್ಟ್ರ, ರಾಜ್ಯ, ಕೇರಳ ಬಿಜೆಪಿ ನಾಯಕರು, ಮೂರು ಸಚಿವರು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು ಮಾಜಿ ಶಾಸಕರು ಬೇರೆ ಜಿಲ್ಲೆಗಳಿಂದ ಈಡಿಗ ಸಮುದಾಯದ ಶಾಸಕರು ಜಿಲ್ಲೆಯ ಹೆಚ್ಚಿನ ಜನ ಪ್ರತಿನಿಧಿಗಳು  ಎಲ್ಲರಿಗೂ ಅಂತ್ಯಕ್ರಿಯೆ  ಮತ್ತು ದುಃಖತ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು.ಸಮಾಜದ  ಮೆಚ್ಚಿಗೆಯಕಾರ್ಯ.ಕ್ಷೇತ್ರದ ಅಧ್ಯಕ್ಷರಾದ ಶ್ರೀ ಪಿತಾಂಬರ ಹೇರಾಜೆ, ಪದಾಧಿಕಾರಿಗಳಾದ ರವಿ ಪೂಜಾರಿ ಚಿಲಿಂಬಿ, ಮೋಹನ್ ದಾಸ್,ದೀಪಕ್ಕೋಟ್ಯಾನ್, ಕ್ಷೇತ್ರದ ಟ್ರಸ್ಟಿಗಳು ಮತ್ತು ಸಿಬ್ಬಂದಿ ವರ್ಗ ಬಿಲ್ಲವ ಸಮಾಜದ ಗಣ್ಯರು ಮೃತ ಪ್ರವೀಣ್ ಅವರ ಅಂತಿಮ ದರ್ಶನಪಡೆದು ಕಂಬನಿ ಮಿಡಿದರು. ಮುಂದಿನ ದಿನಗಳಲ್ಲಿ ನಮ್ಮ ಸಮಾಜದ ಯುವಕರು ಉತ್ತಮ ರೀತಿಯಲ್ಲಿ ಸಜ್ಜನ ಜೀವನವನ್ನುನಡೆಸಲು ಉತ್ತಮ ರೀತಿಯ ಸಲಹೆ, ಮಾರ್ಗದರ್ಶನವನ್ನ ಹಂತ ಹಂತವಾಗಿ ಸಮಾಜದ ಯುವಕರಿಗೆ ತಲುಪಿಸಿ ನಮ್ಮ ಸಮಾಜಕ್ಕೆಶ್ರೀ ಕ್ಷೇತ್ರದಿಂದ ಒಂದು ಉತ್ತಮ ಮಾರ್ಗದರ್ಶನವನ್ನು ನೀಡಬೇಕು ಇದೇ ರೀತಿ ಅನೇಕ ಸಂದರ್ಭಗಳಲ್ಲಿ ಅಸಹಾಯಕಪರಿಸ್ಥಿತಿಯಲ್ಲಿರುವ ಎಲ್ಲರಿಗೂ ಸಹಾಯ ಮಾಡುವ ಶಕ್ತಿಯನ್ನು ಯೋಚನೆಯನ್ನು ಶ್ರೀ ಕ್ಷೇತ್ರದ ಶಕ್ತಿಗಳು ಕರುಣಿಸಲಿ ಎಂದು ಕ್ಷೇತ್ರದಭಕ್ತರ ಕೋರಿಕೆ.


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »