TOP STORIES:

ಚಳಿಗಾಲದಲ್ಲಿ ಚರ್ಮ ರಕ್ಷಣೆಗೆ ಇಲ್ಲಿದೆ ಮನೆ ಮದ್ದು


ಚಳಿಗಾಲದಲ್ಲಿ ಚರ್ಮ ಬೇಗನೆ ಕಾಂತಿ ಕಳೆದುಕೊಳ್ಳುತ್ತದೆ. ಇದಕ್ಕಾಗಿ ಮನೆಯಲ್ಲಿಯೇ ಹಲವಾರು ಕ್ರಮ ಕೈಗೊಳ್ಳಬಹುದು. ಅದು ಹೇಗೆ ಅಂತ ನೀವು ತಿಳಿಯಿರಿ.ಕಡಲೆಹಿಟ್ಟು ಹಾಗೂ ಅರಿಶಿಣ

ಒಣ ಚರ್ಮವಾಗಿದ್ದಲ್ಲಿ ಈ ಲೇಪನದಲ್ಲಿ ಕೆನೆ, ಮೊಸರು ಬಳಸಬಹುದು.

ಇಲ್ಲದಿದ್ದಲ್ಲಿ ನಿಂಬೆ ರಸ ಅಥವಾ ತಿಳಿಮಜ್ಜಿಗೆ ನೀರು ಬೆರೆಸಿ ಲೇಪನ ಮಾಡಿಕೊಳ್ಳಬೇಕು.

ಈ ಲೇಪನವನ್ನು ಮುಖ, ಕೈ-ಕಾಲುಗಳಿಗೆ ಲೇಪಿಸಿಕೊಂಡು, ಒಣಗಿದಂತೆ ಅನಿಸಿದಾಗ ಉಗುರು ಬೆಚ್ಚಗಿನ ನೀರನ್ನು ಬಳಸಿ ತೊಳೆದುಕೊಳ್ಳಬೇಕು.

ಲೋಳೆಸರ

ಯಾವ ಬಗೆಯ ಚರ್ಮದವರೂ ಧಾರಾಳವಾಗಿ ಇದನ್ನು ಬಳಸಬಹುದು. ಬಟ್ಟಲೊಂದಕ್ಕೆ ಲೋಳೆ ಸರದ ತಿರುಳನ್ನು ತೆಗೆದುಕೊಂಡು, ನಿಂಬೆ ರಸ ಹಾಗೂ ಅರಿಶಿಣವನ್ನು ಬೆರೆಸಿ, ಜೆಲ್‌ನಂತೆ ಇದನ್ನು ಮುಖಕ್ಕೆ, ಮೊಣಕೈ ತುದಿಗಳಿಗೆ ಲೇಪಿಸಿ, ಹದಿನೈದು ನಿಮಿಷಗಳ ನಂತರ ತೊಳೆದುಕೊಳ್ಳಿ.

ಆಲೂಗಡ್ಡೆ

ಇದು ಚರ್ಮವನ್ನು ಸ್ವಚ್ಛಗೊಳಿಸಿ, ಕೋಮಲಾಂಶ ನೀಡುತ್ತದೆ. ಆಲೂಗಡ್ಡೆಯನ್ನು ತುರಿದುಕೊಂಡು, ಆ ತುರಿಯನ್ನು ಮುಖಕ್ಕೆ ಉಜ್ಜಿಕೊಳ್ಳಬೇಕು. ಅದರ ನಂತರ ಐಸ್‌ ಕ್ಯುಬ್‌ ಅನ್ನು ಮುಖದ ತುಂಬಾ ಆಡಿಸಿಕೊಂಡರೆ ನುಣುಪು ನಿಮ್ಮ ಅನುಭವಕ್ಕೆ ಬರುತ್ತದೆ.

ಪಪ್ಪಾಯ

ಅತಿ ಹಣ್ಣಾಗಿ ಕಳೆತ ಪಪ್ಪಾಯದ ತಿರುಳನ್ನು ಅಂಗೈಯಲ್ಲಿ ಹಿಸುಕಿಕೊಳ್ಳಿ. ಒಣಚರ್ಮವಾದರೆ ಕೆನೆ, ಎಣ್ಣೆ ಚರ್ಮವಾದರೆ ನಿಂಬೆರಸ ಬೆರೆಸಿ, ಪೇಸ್ಟ್‌ ಮಾಡಿಕೊಳ್ಳಿ. ಈ ಲೇಪನವನ್ನು ಮುಖ, ಕತ್ತು, ಕೈಗಳಿಗೆ ಲೇಪಿಸಿಕೊಳ್ಳಿ. ಕಾಲು ಗಂಟೆಯ ನಂತರ ಚರ್ಮ ಬಿಗಿದುಕೊಂಡಂತೆ ಎನಿಸತೊಡಗುತ್ತದೆ. ಆಗ ಉಗುರು ಬಿಸಿ ನೀರಿನಿಂದ ಇದನ್ನು ತೊಳೆದುಕೊಳ್ಳಿ.

ಕೊಬ್ಬರಿ ಎಣ್ಣೆ

ಸ್ನಾನದ ಮೊದಲು ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಉಗುರು ಬಿಸಿ ನೀರಿನಿಂದ ಸ್ನಾನ ಮಾಡಿದರೆ ನೈಸರ್ಗಿಕ ಮಾಯಿಶ್ಚರೈಸರ್‌ ನೀಡಿದಂತೆ ಆಗುತ್ತದೆ. ಸ್ನಾನಕ್ಕೆ ಮೊದಲು ಕೊಬ್ಬರಿ ಎಣ್ಣೆ ಹಚ್ಚಿಕೊಳ್ಳಲು ಆಗದಿದ್ದರೆ ಸ್ನಾನದ ಕೊನೆಯಲ್ಲಿ ಒಂದು ಲೋಟ ನೀರಿಗೆ ಒಂದಷ್ಟು ತೆಂಗಿನೆಣ್ಣೆಯ ಹನಿಗಳನ್ನು ಸೇರ್ಪಡೆಗೊಳಿಸಿ, ಅವನ್ನು ಕೈ, ಕಾಲು, ಬೆನ್ನು, ಹೊಟ್ಟೆಗೆ ಹಚ್ಚಿಕೊಂಡರೆ ಚಳಿಗಾಲದ ತುರಿಕೆ ಹಾಗೂ ಕೆರೆತವನ್ನು ಕಡಿಮೆ ಮಾಡಬಹುದು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »