TOP STORIES:

ಚಳಿಗಾಲದಲ್ಲಿ ಚರ್ಮ ರಕ್ಷಣೆಗೆ ಇಲ್ಲಿದೆ ಮನೆ ಮದ್ದು


ಚಳಿಗಾಲದಲ್ಲಿ ಚರ್ಮ ಬೇಗನೆ ಕಾಂತಿ ಕಳೆದುಕೊಳ್ಳುತ್ತದೆ. ಇದಕ್ಕಾಗಿ ಮನೆಯಲ್ಲಿಯೇ ಹಲವಾರು ಕ್ರಮ ಕೈಗೊಳ್ಳಬಹುದು. ಅದು ಹೇಗೆ ಅಂತ ನೀವು ತಿಳಿಯಿರಿ.ಕಡಲೆಹಿಟ್ಟು ಹಾಗೂ ಅರಿಶಿಣ

ಒಣ ಚರ್ಮವಾಗಿದ್ದಲ್ಲಿ ಈ ಲೇಪನದಲ್ಲಿ ಕೆನೆ, ಮೊಸರು ಬಳಸಬಹುದು.

ಇಲ್ಲದಿದ್ದಲ್ಲಿ ನಿಂಬೆ ರಸ ಅಥವಾ ತಿಳಿಮಜ್ಜಿಗೆ ನೀರು ಬೆರೆಸಿ ಲೇಪನ ಮಾಡಿಕೊಳ್ಳಬೇಕು.

ಈ ಲೇಪನವನ್ನು ಮುಖ, ಕೈ-ಕಾಲುಗಳಿಗೆ ಲೇಪಿಸಿಕೊಂಡು, ಒಣಗಿದಂತೆ ಅನಿಸಿದಾಗ ಉಗುರು ಬೆಚ್ಚಗಿನ ನೀರನ್ನು ಬಳಸಿ ತೊಳೆದುಕೊಳ್ಳಬೇಕು.

ಲೋಳೆಸರ

ಯಾವ ಬಗೆಯ ಚರ್ಮದವರೂ ಧಾರಾಳವಾಗಿ ಇದನ್ನು ಬಳಸಬಹುದು. ಬಟ್ಟಲೊಂದಕ್ಕೆ ಲೋಳೆ ಸರದ ತಿರುಳನ್ನು ತೆಗೆದುಕೊಂಡು, ನಿಂಬೆ ರಸ ಹಾಗೂ ಅರಿಶಿಣವನ್ನು ಬೆರೆಸಿ, ಜೆಲ್‌ನಂತೆ ಇದನ್ನು ಮುಖಕ್ಕೆ, ಮೊಣಕೈ ತುದಿಗಳಿಗೆ ಲೇಪಿಸಿ, ಹದಿನೈದು ನಿಮಿಷಗಳ ನಂತರ ತೊಳೆದುಕೊಳ್ಳಿ.

ಆಲೂಗಡ್ಡೆ

ಇದು ಚರ್ಮವನ್ನು ಸ್ವಚ್ಛಗೊಳಿಸಿ, ಕೋಮಲಾಂಶ ನೀಡುತ್ತದೆ. ಆಲೂಗಡ್ಡೆಯನ್ನು ತುರಿದುಕೊಂಡು, ಆ ತುರಿಯನ್ನು ಮುಖಕ್ಕೆ ಉಜ್ಜಿಕೊಳ್ಳಬೇಕು. ಅದರ ನಂತರ ಐಸ್‌ ಕ್ಯುಬ್‌ ಅನ್ನು ಮುಖದ ತುಂಬಾ ಆಡಿಸಿಕೊಂಡರೆ ನುಣುಪು ನಿಮ್ಮ ಅನುಭವಕ್ಕೆ ಬರುತ್ತದೆ.

ಪಪ್ಪಾಯ

ಅತಿ ಹಣ್ಣಾಗಿ ಕಳೆತ ಪಪ್ಪಾಯದ ತಿರುಳನ್ನು ಅಂಗೈಯಲ್ಲಿ ಹಿಸುಕಿಕೊಳ್ಳಿ. ಒಣಚರ್ಮವಾದರೆ ಕೆನೆ, ಎಣ್ಣೆ ಚರ್ಮವಾದರೆ ನಿಂಬೆರಸ ಬೆರೆಸಿ, ಪೇಸ್ಟ್‌ ಮಾಡಿಕೊಳ್ಳಿ. ಈ ಲೇಪನವನ್ನು ಮುಖ, ಕತ್ತು, ಕೈಗಳಿಗೆ ಲೇಪಿಸಿಕೊಳ್ಳಿ. ಕಾಲು ಗಂಟೆಯ ನಂತರ ಚರ್ಮ ಬಿಗಿದುಕೊಂಡಂತೆ ಎನಿಸತೊಡಗುತ್ತದೆ. ಆಗ ಉಗುರು ಬಿಸಿ ನೀರಿನಿಂದ ಇದನ್ನು ತೊಳೆದುಕೊಳ್ಳಿ.

ಕೊಬ್ಬರಿ ಎಣ್ಣೆ

ಸ್ನಾನದ ಮೊದಲು ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಉಗುರು ಬಿಸಿ ನೀರಿನಿಂದ ಸ್ನಾನ ಮಾಡಿದರೆ ನೈಸರ್ಗಿಕ ಮಾಯಿಶ್ಚರೈಸರ್‌ ನೀಡಿದಂತೆ ಆಗುತ್ತದೆ. ಸ್ನಾನಕ್ಕೆ ಮೊದಲು ಕೊಬ್ಬರಿ ಎಣ್ಣೆ ಹಚ್ಚಿಕೊಳ್ಳಲು ಆಗದಿದ್ದರೆ ಸ್ನಾನದ ಕೊನೆಯಲ್ಲಿ ಒಂದು ಲೋಟ ನೀರಿಗೆ ಒಂದಷ್ಟು ತೆಂಗಿನೆಣ್ಣೆಯ ಹನಿಗಳನ್ನು ಸೇರ್ಪಡೆಗೊಳಿಸಿ, ಅವನ್ನು ಕೈ, ಕಾಲು, ಬೆನ್ನು, ಹೊಟ್ಟೆಗೆ ಹಚ್ಚಿಕೊಂಡರೆ ಚಳಿಗಾಲದ ತುರಿಕೆ ಹಾಗೂ ಕೆರೆತವನ್ನು ಕಡಿಮೆ ಮಾಡಬಹುದು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »