TOP STORIES:

ಚಳಿಗಾಲದಲ್ಲಿ ಚರ್ಮ ರಕ್ಷಣೆಗೆ ಇಲ್ಲಿದೆ ಮನೆ ಮದ್ದು


ಚಳಿಗಾಲದಲ್ಲಿ ಚರ್ಮ ಬೇಗನೆ ಕಾಂತಿ ಕಳೆದುಕೊಳ್ಳುತ್ತದೆ. ಇದಕ್ಕಾಗಿ ಮನೆಯಲ್ಲಿಯೇ ಹಲವಾರು ಕ್ರಮ ಕೈಗೊಳ್ಳಬಹುದು. ಅದು ಹೇಗೆ ಅಂತ ನೀವು ತಿಳಿಯಿರಿ.ಕಡಲೆಹಿಟ್ಟು ಹಾಗೂ ಅರಿಶಿಣ

ಒಣ ಚರ್ಮವಾಗಿದ್ದಲ್ಲಿ ಈ ಲೇಪನದಲ್ಲಿ ಕೆನೆ, ಮೊಸರು ಬಳಸಬಹುದು.

ಇಲ್ಲದಿದ್ದಲ್ಲಿ ನಿಂಬೆ ರಸ ಅಥವಾ ತಿಳಿಮಜ್ಜಿಗೆ ನೀರು ಬೆರೆಸಿ ಲೇಪನ ಮಾಡಿಕೊಳ್ಳಬೇಕು.

ಈ ಲೇಪನವನ್ನು ಮುಖ, ಕೈ-ಕಾಲುಗಳಿಗೆ ಲೇಪಿಸಿಕೊಂಡು, ಒಣಗಿದಂತೆ ಅನಿಸಿದಾಗ ಉಗುರು ಬೆಚ್ಚಗಿನ ನೀರನ್ನು ಬಳಸಿ ತೊಳೆದುಕೊಳ್ಳಬೇಕು.

ಲೋಳೆಸರ

ಯಾವ ಬಗೆಯ ಚರ್ಮದವರೂ ಧಾರಾಳವಾಗಿ ಇದನ್ನು ಬಳಸಬಹುದು. ಬಟ್ಟಲೊಂದಕ್ಕೆ ಲೋಳೆ ಸರದ ತಿರುಳನ್ನು ತೆಗೆದುಕೊಂಡು, ನಿಂಬೆ ರಸ ಹಾಗೂ ಅರಿಶಿಣವನ್ನು ಬೆರೆಸಿ, ಜೆಲ್‌ನಂತೆ ಇದನ್ನು ಮುಖಕ್ಕೆ, ಮೊಣಕೈ ತುದಿಗಳಿಗೆ ಲೇಪಿಸಿ, ಹದಿನೈದು ನಿಮಿಷಗಳ ನಂತರ ತೊಳೆದುಕೊಳ್ಳಿ.

ಆಲೂಗಡ್ಡೆ

ಇದು ಚರ್ಮವನ್ನು ಸ್ವಚ್ಛಗೊಳಿಸಿ, ಕೋಮಲಾಂಶ ನೀಡುತ್ತದೆ. ಆಲೂಗಡ್ಡೆಯನ್ನು ತುರಿದುಕೊಂಡು, ಆ ತುರಿಯನ್ನು ಮುಖಕ್ಕೆ ಉಜ್ಜಿಕೊಳ್ಳಬೇಕು. ಅದರ ನಂತರ ಐಸ್‌ ಕ್ಯುಬ್‌ ಅನ್ನು ಮುಖದ ತುಂಬಾ ಆಡಿಸಿಕೊಂಡರೆ ನುಣುಪು ನಿಮ್ಮ ಅನುಭವಕ್ಕೆ ಬರುತ್ತದೆ.

ಪಪ್ಪಾಯ

ಅತಿ ಹಣ್ಣಾಗಿ ಕಳೆತ ಪಪ್ಪಾಯದ ತಿರುಳನ್ನು ಅಂಗೈಯಲ್ಲಿ ಹಿಸುಕಿಕೊಳ್ಳಿ. ಒಣಚರ್ಮವಾದರೆ ಕೆನೆ, ಎಣ್ಣೆ ಚರ್ಮವಾದರೆ ನಿಂಬೆರಸ ಬೆರೆಸಿ, ಪೇಸ್ಟ್‌ ಮಾಡಿಕೊಳ್ಳಿ. ಈ ಲೇಪನವನ್ನು ಮುಖ, ಕತ್ತು, ಕೈಗಳಿಗೆ ಲೇಪಿಸಿಕೊಳ್ಳಿ. ಕಾಲು ಗಂಟೆಯ ನಂತರ ಚರ್ಮ ಬಿಗಿದುಕೊಂಡಂತೆ ಎನಿಸತೊಡಗುತ್ತದೆ. ಆಗ ಉಗುರು ಬಿಸಿ ನೀರಿನಿಂದ ಇದನ್ನು ತೊಳೆದುಕೊಳ್ಳಿ.

ಕೊಬ್ಬರಿ ಎಣ್ಣೆ

ಸ್ನಾನದ ಮೊದಲು ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಉಗುರು ಬಿಸಿ ನೀರಿನಿಂದ ಸ್ನಾನ ಮಾಡಿದರೆ ನೈಸರ್ಗಿಕ ಮಾಯಿಶ್ಚರೈಸರ್‌ ನೀಡಿದಂತೆ ಆಗುತ್ತದೆ. ಸ್ನಾನಕ್ಕೆ ಮೊದಲು ಕೊಬ್ಬರಿ ಎಣ್ಣೆ ಹಚ್ಚಿಕೊಳ್ಳಲು ಆಗದಿದ್ದರೆ ಸ್ನಾನದ ಕೊನೆಯಲ್ಲಿ ಒಂದು ಲೋಟ ನೀರಿಗೆ ಒಂದಷ್ಟು ತೆಂಗಿನೆಣ್ಣೆಯ ಹನಿಗಳನ್ನು ಸೇರ್ಪಡೆಗೊಳಿಸಿ, ಅವನ್ನು ಕೈ, ಕಾಲು, ಬೆನ್ನು, ಹೊಟ್ಟೆಗೆ ಹಚ್ಚಿಕೊಂಡರೆ ಚಳಿಗಾಲದ ತುರಿಕೆ ಹಾಗೂ ಕೆರೆತವನ್ನು ಕಡಿಮೆ ಮಾಡಬಹುದು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »