TOP STORIES:

ಚಳಿಗಾಲದಲ್ಲಿ ಚರ್ಮ ರಕ್ಷಣೆಗೆ ಇಲ್ಲಿದೆ ಮನೆ ಮದ್ದು


ಚಳಿಗಾಲದಲ್ಲಿ ಚರ್ಮ ಬೇಗನೆ ಕಾಂತಿ ಕಳೆದುಕೊಳ್ಳುತ್ತದೆ. ಇದಕ್ಕಾಗಿ ಮನೆಯಲ್ಲಿಯೇ ಹಲವಾರು ಕ್ರಮ ಕೈಗೊಳ್ಳಬಹುದು. ಅದು ಹೇಗೆ ಅಂತ ನೀವು ತಿಳಿಯಿರಿ.ಕಡಲೆಹಿಟ್ಟು ಹಾಗೂ ಅರಿಶಿಣ

ಒಣ ಚರ್ಮವಾಗಿದ್ದಲ್ಲಿ ಈ ಲೇಪನದಲ್ಲಿ ಕೆನೆ, ಮೊಸರು ಬಳಸಬಹುದು.

ಇಲ್ಲದಿದ್ದಲ್ಲಿ ನಿಂಬೆ ರಸ ಅಥವಾ ತಿಳಿಮಜ್ಜಿಗೆ ನೀರು ಬೆರೆಸಿ ಲೇಪನ ಮಾಡಿಕೊಳ್ಳಬೇಕು.

ಈ ಲೇಪನವನ್ನು ಮುಖ, ಕೈ-ಕಾಲುಗಳಿಗೆ ಲೇಪಿಸಿಕೊಂಡು, ಒಣಗಿದಂತೆ ಅನಿಸಿದಾಗ ಉಗುರು ಬೆಚ್ಚಗಿನ ನೀರನ್ನು ಬಳಸಿ ತೊಳೆದುಕೊಳ್ಳಬೇಕು.

ಲೋಳೆಸರ

ಯಾವ ಬಗೆಯ ಚರ್ಮದವರೂ ಧಾರಾಳವಾಗಿ ಇದನ್ನು ಬಳಸಬಹುದು. ಬಟ್ಟಲೊಂದಕ್ಕೆ ಲೋಳೆ ಸರದ ತಿರುಳನ್ನು ತೆಗೆದುಕೊಂಡು, ನಿಂಬೆ ರಸ ಹಾಗೂ ಅರಿಶಿಣವನ್ನು ಬೆರೆಸಿ, ಜೆಲ್‌ನಂತೆ ಇದನ್ನು ಮುಖಕ್ಕೆ, ಮೊಣಕೈ ತುದಿಗಳಿಗೆ ಲೇಪಿಸಿ, ಹದಿನೈದು ನಿಮಿಷಗಳ ನಂತರ ತೊಳೆದುಕೊಳ್ಳಿ.

ಆಲೂಗಡ್ಡೆ

ಇದು ಚರ್ಮವನ್ನು ಸ್ವಚ್ಛಗೊಳಿಸಿ, ಕೋಮಲಾಂಶ ನೀಡುತ್ತದೆ. ಆಲೂಗಡ್ಡೆಯನ್ನು ತುರಿದುಕೊಂಡು, ಆ ತುರಿಯನ್ನು ಮುಖಕ್ಕೆ ಉಜ್ಜಿಕೊಳ್ಳಬೇಕು. ಅದರ ನಂತರ ಐಸ್‌ ಕ್ಯುಬ್‌ ಅನ್ನು ಮುಖದ ತುಂಬಾ ಆಡಿಸಿಕೊಂಡರೆ ನುಣುಪು ನಿಮ್ಮ ಅನುಭವಕ್ಕೆ ಬರುತ್ತದೆ.

ಪಪ್ಪಾಯ

ಅತಿ ಹಣ್ಣಾಗಿ ಕಳೆತ ಪಪ್ಪಾಯದ ತಿರುಳನ್ನು ಅಂಗೈಯಲ್ಲಿ ಹಿಸುಕಿಕೊಳ್ಳಿ. ಒಣಚರ್ಮವಾದರೆ ಕೆನೆ, ಎಣ್ಣೆ ಚರ್ಮವಾದರೆ ನಿಂಬೆರಸ ಬೆರೆಸಿ, ಪೇಸ್ಟ್‌ ಮಾಡಿಕೊಳ್ಳಿ. ಈ ಲೇಪನವನ್ನು ಮುಖ, ಕತ್ತು, ಕೈಗಳಿಗೆ ಲೇಪಿಸಿಕೊಳ್ಳಿ. ಕಾಲು ಗಂಟೆಯ ನಂತರ ಚರ್ಮ ಬಿಗಿದುಕೊಂಡಂತೆ ಎನಿಸತೊಡಗುತ್ತದೆ. ಆಗ ಉಗುರು ಬಿಸಿ ನೀರಿನಿಂದ ಇದನ್ನು ತೊಳೆದುಕೊಳ್ಳಿ.

ಕೊಬ್ಬರಿ ಎಣ್ಣೆ

ಸ್ನಾನದ ಮೊದಲು ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಉಗುರು ಬಿಸಿ ನೀರಿನಿಂದ ಸ್ನಾನ ಮಾಡಿದರೆ ನೈಸರ್ಗಿಕ ಮಾಯಿಶ್ಚರೈಸರ್‌ ನೀಡಿದಂತೆ ಆಗುತ್ತದೆ. ಸ್ನಾನಕ್ಕೆ ಮೊದಲು ಕೊಬ್ಬರಿ ಎಣ್ಣೆ ಹಚ್ಚಿಕೊಳ್ಳಲು ಆಗದಿದ್ದರೆ ಸ್ನಾನದ ಕೊನೆಯಲ್ಲಿ ಒಂದು ಲೋಟ ನೀರಿಗೆ ಒಂದಷ್ಟು ತೆಂಗಿನೆಣ್ಣೆಯ ಹನಿಗಳನ್ನು ಸೇರ್ಪಡೆಗೊಳಿಸಿ, ಅವನ್ನು ಕೈ, ಕಾಲು, ಬೆನ್ನು, ಹೊಟ್ಟೆಗೆ ಹಚ್ಚಿಕೊಂಡರೆ ಚಳಿಗಾಲದ ತುರಿಕೆ ಹಾಗೂ ಕೆರೆತವನ್ನು ಕಡಿಮೆ ಮಾಡಬಹುದು.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »