TOP STORIES:

ಚಳಿಗಾಲದಲ್ಲಿ ಸಿಹಿ ಪೊಟಾಟೋ ಪೌಷ್ಟಿಕಾಂಶ ಆಹಾರ


750BC ಯಿಂದಲೂ ಬಳಕೆಯಲ್ಲಿರುವ ಆಹಾರ ಗೆಣಸು. ಆದಿಮಾನವ ಕಾಡಿನಲ್ಲಿ ಹುಡುಕಿ ತಿನ್ನುತ್ತಿದ್ದು ಇದೇ ಗೆಣಸು. ಸಿಹಿ ಪೊಟಾಟೋ ಪೌಷ್ಟಿಕಾಂಶದ ಆಗರ ಎನ್ನುತ್ತಾರೆ ತಜ್ಞರು. ಹಸಿಯಾಗಿಯೂ ಸೇವಿಸಬಹುದಾದ ತರಕಾರಿ ಈ ಗೆಣಸು.

 

ಆದಿ ಮಾನವರೂ ಕೂಡ ಕಾಡುಗಳಲ್ಲಿ ಸಿಗುತ್ತಿದ್ದ ಗಡ್ಡೆಯ ಗೆಣಸನ್ನು ತಿಂದು ಬದುಕು ನಡೆಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಗೆಣಸು ತಿಂದರೆ ಗ್ಯಾಸ್ಟ್ರಿಕ್​ ಸಮಸ್ಯೆ ಕಾಡಬಹುದು ಎಂದು ಗೆಣಸಿನಿಂದ ದೂರ ಓಡುವವರೇ ಹೆಚ್ಚು. ಆದರೆ ಅದನ್ನು ಸರಿಯಾದ ಪ್ರಮಾಣದಲ್ಲಿ, ಸರಿಯಾದ ರೀತಿಯಲ್ಲಿ ಸೇವಸಿದರೆ ಪರಿಪೂರ್ಣ ಆಹಾರವಾಗಿಲಿದೆ. ಚಳಿಗಾಲದಲ್ಲಿ ದೇಹಕ್ಕೆ ಪೌಷ್ಟಿಕಾಂಶ ನೀಡುವ ಆಹಾರದ ಸೇವನೆ ಅಗತ್ಯ. ಹೀಗಾಗಿ ಅದಕ್ಕೆ ಸಿಹಿ ಆಲೂಗಡ್ಡೆ ಅಥವಾ ಗೆಣಸು ಉತ್ತಮ ಆಹಾರವಾಗಿದೆ. ಇದರಲ್ಲಿ ಯಥೇಚ್ಛವಾದ ಕಾರ್ಬೋಹೈಡ್ರೇಟ್​, ಕೊಲೆಸ್ಟ್ರಾಲ್​ ಸೋಡಿಯಮ್​ನಂತಹ ಅಂಶಗಳು ಇರುತ್ತವೆ. ಇವು ದೇಹವನ್ನು ಬೆಚ್ಚಗಿರಿಸಿ, ಚಳಿಗಾಲದಲ್ಲಿ ಕಾಡುವ ಸುಸ್ತು ಹಾಗೂ ಇನ್ನಿತರ ಕಾಯಿಲೆಗಳಿಂದ ರಕ್ಷಿಸುತ್ತದೆ.

 

ಚಳಿಗಾಲದಲ್ಲಿ ಗಡ್ಡೆಗಳ ಬಳಕೆ ದೇಹಕ್ಕೆ ಪೋಷಕಾಂಶವನ್ನು ನೀಡಿ ದೇಹದ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುತ್ತದೆ. ಉದಾಹರಣೆಗೆ ಬಿಟ್ರೂಟ್​, ಕ್ಯಾರೆಟ್​ ಇತ್ಯಾದಿಗಳನ್ನು ಸೇವಿಸುವುದರಿಂದ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಅದರಲ್ಲಿ ಸಿಹಿ ಪೊಟಾಟೋ ಅಥವಾ ಗೆಣಸು ಕೂಡ ಹೌದು. ಈ ಕುರಿತು ಪೌಷ್ಟಿಕ ತಜ್ಞರಾದ ರಜುತಾ ದಿವೇಕರ್​ ಎನ್ನುವವರು ಗೆಣಸಿನ ಉಪಯೋಗಗಳನ್ನು ತಿಳಿಸಿದ್ದಾರೆ. 750BC ಯಿಂದಲೂ ಬಳಕೆಯಲ್ಲಿರುವ ಆಹಾರ ಗೆಣಸು. ಆದಿಮಾನವ ಕಾಡಿನಲ್ಲಿ ಹುಡುಕಿ ತಿನ್ನುತ್ತಿದ್ದು ಇದೇ ಗೆಣಸು. ಸಿಹಿ ಪೊಟಾಟೋ ಪೌಷ್ಟಿಕಾಂಶದ ಆಗರ ಎನ್ನುತ್ತಾರೆ ತಜ್ಞರು. ಹಸಿಯಾಗಿಯೂ ಸೇವಿಸಬಹುದಾದ ತರಕಾರಿ ಈ ಗೆಣಸು. ಅಲ್ಲದೆ ಇದನ್ನು ವಿವಿಧ ರೀತಿಯ ಸಿಹಿತಿನಿಸುಗಳನ್ನು ತಯಾರಿಸಿಯೂ ಸೇವಿಸಬಹುದು. ಆದ್ದರಿಂದ ಸಿಹಿ ಪೊಟಾಟೊ ಒಂದು ಪರಿಪೂರ್ಣ ಆಹಾರವಾಗಿದೆ.

 

ಗೆಣಸಿನ ಉಪಯೋಗಗಳು

ಮಧುಮೇಹಿಗಳಿಗೆ ಗೆಣಸು ಉತ್ತಮ ಆಹಾರವಾಗಿದೆ. ಅಲ್ಲದೆ ಬೊಜ್ಜು, ಪಿಸಿಒಡಿ ಸಮಸ್ಯೆ ಇರುವವರಿಗೆ ಉತ್ತಮ ನಾರಿನ ತರಕಾರಿಯಾಗಿದೆ.

ನೀವು ಜಿಮ್​ಗಳಿಗೆ ಹೋಗುವವರಾದರೆ ಅಥವಾ ಇನ್ನಿತರ ಟ್ರೈನಿಂಗ್​ಗಳಿಗೆ ತೆರಳುವವರಾದರೆ ಸಂಜೆ ಸಮಯದಲ್ಲಿ ಗೆಣಸು ಉತ್ತಮ ಸ್ನಾಕ್ಸ್​ ಆಗಲಿದೆ. ಗೆಣಸಿನ ಪರೋಟ ಅಥವಾ ಅದನ್ನು ಬೇಯಸಿ ಹಾಗೆಯೇ ತಿನ್ನಬಹುದು.

ಗೆಣಸಿನಲ್ಲಿ ಯಥೇಚ್ಛವಾದ ವಿಟಮಿನ್​ ಎ ಅಂಶವಿದೆ. ವಿಟಮಿನ್​ ಎ ರೋಗದ ವಿರುದ್ಧ ಹೋರಾಡಲು ಸಹಾಯಕವಾಗಿದೆ.

ಗೆಣಸು ನಿಮ್ಮ ದೇಹದ ಚರ್ಮವನ್ನು ಮೃದುಗೊಳಿಸುಲು ಸಹಾಯ ಮಾಡುತ್ತದೆ. ದೇಹ ಉಬ್ಬುವಿಕೆ, ಆಮ್ಲೀಯತೆಯಿಂದಲೂ ಇದು ರಕ್ಷಿಸಲಿದೆ.

ಗೆಣಸು ನಿಮಗೆ ನಿದ್ದೆ ಬರಲು ಸಹಾಯ ಮಾಡುತ್ತದೆ. ಹೀಗಾಗಿ ನೀವೇನಾದರೂ ನಿದ್ದೆಗಡುವ ಕೆಲಸವೇನಾದರೂ ಮಾಡಿದ್ದರೆ ಗೆಣಸಿನ ಖಾದ್ಯವನ್ನು ಸೇವಿಸಿ ಮಲಗಿ ನಿದ್ದೆ ಚೆನ್ನಾಗಿ ಬರಲಿದೆ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »