TOP STORIES:

FOLLOW US

ಚಳಿಗಾಲದಲ್ಲಿ ಸಿಹಿ ಪೊಟಾಟೋ ಪೌಷ್ಟಿಕಾಂಶ ಆಹಾರ


750BC ಯಿಂದಲೂ ಬಳಕೆಯಲ್ಲಿರುವ ಆಹಾರ ಗೆಣಸು. ಆದಿಮಾನವ ಕಾಡಿನಲ್ಲಿ ಹುಡುಕಿ ತಿನ್ನುತ್ತಿದ್ದು ಇದೇ ಗೆಣಸು. ಸಿಹಿ ಪೊಟಾಟೋ ಪೌಷ್ಟಿಕಾಂಶದ ಆಗರ ಎನ್ನುತ್ತಾರೆ ತಜ್ಞರು. ಹಸಿಯಾಗಿಯೂ ಸೇವಿಸಬಹುದಾದ ತರಕಾರಿ ಈ ಗೆಣಸು.

 

ಆದಿ ಮಾನವರೂ ಕೂಡ ಕಾಡುಗಳಲ್ಲಿ ಸಿಗುತ್ತಿದ್ದ ಗಡ್ಡೆಯ ಗೆಣಸನ್ನು ತಿಂದು ಬದುಕು ನಡೆಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಗೆಣಸು ತಿಂದರೆ ಗ್ಯಾಸ್ಟ್ರಿಕ್​ ಸಮಸ್ಯೆ ಕಾಡಬಹುದು ಎಂದು ಗೆಣಸಿನಿಂದ ದೂರ ಓಡುವವರೇ ಹೆಚ್ಚು. ಆದರೆ ಅದನ್ನು ಸರಿಯಾದ ಪ್ರಮಾಣದಲ್ಲಿ, ಸರಿಯಾದ ರೀತಿಯಲ್ಲಿ ಸೇವಸಿದರೆ ಪರಿಪೂರ್ಣ ಆಹಾರವಾಗಿಲಿದೆ. ಚಳಿಗಾಲದಲ್ಲಿ ದೇಹಕ್ಕೆ ಪೌಷ್ಟಿಕಾಂಶ ನೀಡುವ ಆಹಾರದ ಸೇವನೆ ಅಗತ್ಯ. ಹೀಗಾಗಿ ಅದಕ್ಕೆ ಸಿಹಿ ಆಲೂಗಡ್ಡೆ ಅಥವಾ ಗೆಣಸು ಉತ್ತಮ ಆಹಾರವಾಗಿದೆ. ಇದರಲ್ಲಿ ಯಥೇಚ್ಛವಾದ ಕಾರ್ಬೋಹೈಡ್ರೇಟ್​, ಕೊಲೆಸ್ಟ್ರಾಲ್​ ಸೋಡಿಯಮ್​ನಂತಹ ಅಂಶಗಳು ಇರುತ್ತವೆ. ಇವು ದೇಹವನ್ನು ಬೆಚ್ಚಗಿರಿಸಿ, ಚಳಿಗಾಲದಲ್ಲಿ ಕಾಡುವ ಸುಸ್ತು ಹಾಗೂ ಇನ್ನಿತರ ಕಾಯಿಲೆಗಳಿಂದ ರಕ್ಷಿಸುತ್ತದೆ.

 

ಚಳಿಗಾಲದಲ್ಲಿ ಗಡ್ಡೆಗಳ ಬಳಕೆ ದೇಹಕ್ಕೆ ಪೋಷಕಾಂಶವನ್ನು ನೀಡಿ ದೇಹದ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುತ್ತದೆ. ಉದಾಹರಣೆಗೆ ಬಿಟ್ರೂಟ್​, ಕ್ಯಾರೆಟ್​ ಇತ್ಯಾದಿಗಳನ್ನು ಸೇವಿಸುವುದರಿಂದ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಅದರಲ್ಲಿ ಸಿಹಿ ಪೊಟಾಟೋ ಅಥವಾ ಗೆಣಸು ಕೂಡ ಹೌದು. ಈ ಕುರಿತು ಪೌಷ್ಟಿಕ ತಜ್ಞರಾದ ರಜುತಾ ದಿವೇಕರ್​ ಎನ್ನುವವರು ಗೆಣಸಿನ ಉಪಯೋಗಗಳನ್ನು ತಿಳಿಸಿದ್ದಾರೆ. 750BC ಯಿಂದಲೂ ಬಳಕೆಯಲ್ಲಿರುವ ಆಹಾರ ಗೆಣಸು. ಆದಿಮಾನವ ಕಾಡಿನಲ್ಲಿ ಹುಡುಕಿ ತಿನ್ನುತ್ತಿದ್ದು ಇದೇ ಗೆಣಸು. ಸಿಹಿ ಪೊಟಾಟೋ ಪೌಷ್ಟಿಕಾಂಶದ ಆಗರ ಎನ್ನುತ್ತಾರೆ ತಜ್ಞರು. ಹಸಿಯಾಗಿಯೂ ಸೇವಿಸಬಹುದಾದ ತರಕಾರಿ ಈ ಗೆಣಸು. ಅಲ್ಲದೆ ಇದನ್ನು ವಿವಿಧ ರೀತಿಯ ಸಿಹಿತಿನಿಸುಗಳನ್ನು ತಯಾರಿಸಿಯೂ ಸೇವಿಸಬಹುದು. ಆದ್ದರಿಂದ ಸಿಹಿ ಪೊಟಾಟೊ ಒಂದು ಪರಿಪೂರ್ಣ ಆಹಾರವಾಗಿದೆ.

 

ಗೆಣಸಿನ ಉಪಯೋಗಗಳು

ಮಧುಮೇಹಿಗಳಿಗೆ ಗೆಣಸು ಉತ್ತಮ ಆಹಾರವಾಗಿದೆ. ಅಲ್ಲದೆ ಬೊಜ್ಜು, ಪಿಸಿಒಡಿ ಸಮಸ್ಯೆ ಇರುವವರಿಗೆ ಉತ್ತಮ ನಾರಿನ ತರಕಾರಿಯಾಗಿದೆ.

ನೀವು ಜಿಮ್​ಗಳಿಗೆ ಹೋಗುವವರಾದರೆ ಅಥವಾ ಇನ್ನಿತರ ಟ್ರೈನಿಂಗ್​ಗಳಿಗೆ ತೆರಳುವವರಾದರೆ ಸಂಜೆ ಸಮಯದಲ್ಲಿ ಗೆಣಸು ಉತ್ತಮ ಸ್ನಾಕ್ಸ್​ ಆಗಲಿದೆ. ಗೆಣಸಿನ ಪರೋಟ ಅಥವಾ ಅದನ್ನು ಬೇಯಸಿ ಹಾಗೆಯೇ ತಿನ್ನಬಹುದು.

ಗೆಣಸಿನಲ್ಲಿ ಯಥೇಚ್ಛವಾದ ವಿಟಮಿನ್​ ಎ ಅಂಶವಿದೆ. ವಿಟಮಿನ್​ ಎ ರೋಗದ ವಿರುದ್ಧ ಹೋರಾಡಲು ಸಹಾಯಕವಾಗಿದೆ.

ಗೆಣಸು ನಿಮ್ಮ ದೇಹದ ಚರ್ಮವನ್ನು ಮೃದುಗೊಳಿಸುಲು ಸಹಾಯ ಮಾಡುತ್ತದೆ. ದೇಹ ಉಬ್ಬುವಿಕೆ, ಆಮ್ಲೀಯತೆಯಿಂದಲೂ ಇದು ರಕ್ಷಿಸಲಿದೆ.

ಗೆಣಸು ನಿಮಗೆ ನಿದ್ದೆ ಬರಲು ಸಹಾಯ ಮಾಡುತ್ತದೆ. ಹೀಗಾಗಿ ನೀವೇನಾದರೂ ನಿದ್ದೆಗಡುವ ಕೆಲಸವೇನಾದರೂ ಮಾಡಿದ್ದರೆ ಗೆಣಸಿನ ಖಾದ್ಯವನ್ನು ಸೇವಿಸಿ ಮಲಗಿ ನಿದ್ದೆ ಚೆನ್ನಾಗಿ ಬರಲಿದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »