TOP STORIES:

ಚಿಲಿಂಬಿ: ಆದರ್ಶ್ ಫ್ರೆಂಡ್ಸ್ ಅಸೋಸಿಯೇಷನ್ ಸ್ಥಾಪಕ ಅಧ್ಯಕ್ಷ ಪಿ.ಕೆ.ಭಾಸ್ಕರ್ ಅಸ್ತಂಗತ


ಚಿಲಿಂಬಿ ಆದರ್ಶನಗರದ ಆದರ್ಶ್ ಫ್ರೆಂಡ್ಸ್ ಅಸೋಸಿಯೇಷನ್(ರಿ) ಇದರ ಸ್ಥಾಪಕ ಅಧ್ಯಕ್ಷ ರಾಗಿದ್ದು ಅಸೋಸಿಯೇಷನ್ ಶಿಕ್ಷಣ ಸಂಘಟನೆ ಅಭಿವೃದ್ಧಿಯ ಮೂಲಕ ಉತ್ತಮ ಸಮಾಜದ ನಿರ್ಮಾಣ ಕ್ಕೆ ಕೆಲಸ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. 1965 -1985 ರ ಮೂರು ದಶಕಗಳ ಕಾಲ ರೈತ ಕಾರ್ಮಿಕ ಕ್ರಾಂತಿಕಾರಿ ಕಮ್ಯುನಿಸ್ಟ್ ಚಳುವಳಿಯಲ್ಲಿ ಭಾಗವಹಿಸಿ ಸಮ ಸಮಾಜದ ನಿರ್ಮಾಣದ ಹೋರಾಟ ದಲ್ಲಿದ್ದರು. ನಂತರ ಪಕ್ಷ ರಾಜಕೀಯ ದಿಂದ ದೂರು ಉಳಿದು ಜನರ ಮೂಲಭೂತ ಅವಶ್ಯಕತೆ ಗಳ ಬಗ್ಗೆ ಸಮಾಜಸೇವೆಯಲ್ಲಿ ಮತ್ತು ಆಧ್ಯಾತ್ಮಿಕ ಸಾಧನೆಯಲ್ಲಿ ತೊಡಗಿಕೊಂಡಿದ್ದರು. ಅಧ್ಯಯನ ಶೀಲರು ಆಗಿದ್ದ ಇವರು ಯಾವುದೇ ವಿಷಯ ಇದ್ದರೂ ಅದನ್ನು ಆಳವಾಗಿ ಅಧ್ಯಯನ ಮಾಡುವವರಾಗಿದ್ದರು.

ಕೇರಳದ ಬ್ರಹ್ಮಶ್ರೀ ನಾರಾಯಣ ಗುರುದೇವರ ಸಮಕಾಲೀನರು ಹಾಗೂ ಶ್ರೀ ನಾರಾಯಣ ಗುರುಗಳಿಂದ ಶಿಷ್ಯತ್ವ ವನ್ನು ಪಡೆದ ಬ್ರಹ್ಮ ಶ್ರೀ ಶುಭಾನಂದ ಗುರುದೇವರು ಸ್ಥಾಪಿಸಿದ ಶುಭಾನಂದ ಆಶ್ರಮದ ಆತ್ಮಭೋಧೋದಯ ಸಂಘದ ಮೂಲಕ ಸತ್ಯ ಉಪದೇಶ, ಜನ್ಮಾಂತರ ಜ್ಞಾನ ಉಪದೇಶವನ್ನು ಪಡೆದುಕೊಂಡು ಜಾತಿ ಮತ ಧರ್ಮ ಲಿಂಗ ಭೇಧವಿಲ್ಲದ ಅದ್ವೈತ ವೇದಾಂತದ ಆಧ್ಯಾತ್ಮಿಕ ಚಳುವಳಿಯಲ್ಲಿ ತೊಡಗಿಸಿಕೊಂಡು ಆತ್ಮಜ್ಞಾನದ ನಾಮಸಂಕೀರ್ತನೆಯ ಮೂಲಕ ಮೋಕ್ಷ ಸಾಧನೆ ಮಾಡುವ ಆಧ್ಯಾತ್ಮಿಕ ಸಾಧನೆ ಯಲ್ಲಿ ತೊಡಗಿಸಿಕೊಂಡಿದ್ದರು.

ಪತ್ನಿ ಕೃಷ್ಣಮ್ಮ, ಮಕ್ಕಳಾದ ರಾಜೇಂದ್ರ ಚಿಲಿಂಬಿ, ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸುಳ್ಯ ತಾಲೂಕು ಯೋಜನಾಧಿಕಾರಿ ಚೆನ್ನಕೇಶವ, ಅಜಿತ, ಅನಿತ, ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

ಸ್ವಗ್ರಹ ಚಿಲಿಂಬಿ ಆದರ್ಶನಗರ ದಲ್ಲಿ ಮಧ್ಯಾಹ್ನ 12.30 ಕ್ಕೆ ಅಂತಿಮ ಯಾತ್ರೆ


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »