TOP STORIES:

FOLLOW US

ಚಿಲಿಂಬಿ: ಆದರ್ಶ್ ಫ್ರೆಂಡ್ಸ್ ಅಸೋಸಿಯೇಷನ್ ಸ್ಥಾಪಕ ಅಧ್ಯಕ್ಷ ಪಿ.ಕೆ.ಭಾಸ್ಕರ್ ಅಸ್ತಂಗತ


ಚಿಲಿಂಬಿ ಆದರ್ಶನಗರದ ಆದರ್ಶ್ ಫ್ರೆಂಡ್ಸ್ ಅಸೋಸಿಯೇಷನ್(ರಿ) ಇದರ ಸ್ಥಾಪಕ ಅಧ್ಯಕ್ಷ ರಾಗಿದ್ದು ಅಸೋಸಿಯೇಷನ್ ಶಿಕ್ಷಣ ಸಂಘಟನೆ ಅಭಿವೃದ್ಧಿಯ ಮೂಲಕ ಉತ್ತಮ ಸಮಾಜದ ನಿರ್ಮಾಣ ಕ್ಕೆ ಕೆಲಸ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. 1965 -1985 ರ ಮೂರು ದಶಕಗಳ ಕಾಲ ರೈತ ಕಾರ್ಮಿಕ ಕ್ರಾಂತಿಕಾರಿ ಕಮ್ಯುನಿಸ್ಟ್ ಚಳುವಳಿಯಲ್ಲಿ ಭಾಗವಹಿಸಿ ಸಮ ಸಮಾಜದ ನಿರ್ಮಾಣದ ಹೋರಾಟ ದಲ್ಲಿದ್ದರು. ನಂತರ ಪಕ್ಷ ರಾಜಕೀಯ ದಿಂದ ದೂರು ಉಳಿದು ಜನರ ಮೂಲಭೂತ ಅವಶ್ಯಕತೆ ಗಳ ಬಗ್ಗೆ ಸಮಾಜಸೇವೆಯಲ್ಲಿ ಮತ್ತು ಆಧ್ಯಾತ್ಮಿಕ ಸಾಧನೆಯಲ್ಲಿ ತೊಡಗಿಕೊಂಡಿದ್ದರು. ಅಧ್ಯಯನ ಶೀಲರು ಆಗಿದ್ದ ಇವರು ಯಾವುದೇ ವಿಷಯ ಇದ್ದರೂ ಅದನ್ನು ಆಳವಾಗಿ ಅಧ್ಯಯನ ಮಾಡುವವರಾಗಿದ್ದರು.

ಕೇರಳದ ಬ್ರಹ್ಮಶ್ರೀ ನಾರಾಯಣ ಗುರುದೇವರ ಸಮಕಾಲೀನರು ಹಾಗೂ ಶ್ರೀ ನಾರಾಯಣ ಗುರುಗಳಿಂದ ಶಿಷ್ಯತ್ವ ವನ್ನು ಪಡೆದ ಬ್ರಹ್ಮ ಶ್ರೀ ಶುಭಾನಂದ ಗುರುದೇವರು ಸ್ಥಾಪಿಸಿದ ಶುಭಾನಂದ ಆಶ್ರಮದ ಆತ್ಮಭೋಧೋದಯ ಸಂಘದ ಮೂಲಕ ಸತ್ಯ ಉಪದೇಶ, ಜನ್ಮಾಂತರ ಜ್ಞಾನ ಉಪದೇಶವನ್ನು ಪಡೆದುಕೊಂಡು ಜಾತಿ ಮತ ಧರ್ಮ ಲಿಂಗ ಭೇಧವಿಲ್ಲದ ಅದ್ವೈತ ವೇದಾಂತದ ಆಧ್ಯಾತ್ಮಿಕ ಚಳುವಳಿಯಲ್ಲಿ ತೊಡಗಿಸಿಕೊಂಡು ಆತ್ಮಜ್ಞಾನದ ನಾಮಸಂಕೀರ್ತನೆಯ ಮೂಲಕ ಮೋಕ್ಷ ಸಾಧನೆ ಮಾಡುವ ಆಧ್ಯಾತ್ಮಿಕ ಸಾಧನೆ ಯಲ್ಲಿ ತೊಡಗಿಸಿಕೊಂಡಿದ್ದರು.

ಪತ್ನಿ ಕೃಷ್ಣಮ್ಮ, ಮಕ್ಕಳಾದ ರಾಜೇಂದ್ರ ಚಿಲಿಂಬಿ, ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸುಳ್ಯ ತಾಲೂಕು ಯೋಜನಾಧಿಕಾರಿ ಚೆನ್ನಕೇಶವ, ಅಜಿತ, ಅನಿತ, ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

ಸ್ವಗ್ರಹ ಚಿಲಿಂಬಿ ಆದರ್ಶನಗರ ದಲ್ಲಿ ಮಧ್ಯಾಹ್ನ 12.30 ಕ್ಕೆ ಅಂತಿಮ ಯಾತ್ರೆ


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »