TOP STORIES:

ಚುಕ್ಕಿ ಚಿತ್ತಾರದಲ್ಲಿ ಮೂಡಿಬಂದ ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕ ಉದಯ್ ಪೂಜಾರಿ


ರಂಗೋಲಿ ಎಂಬುದು ಕಲೆ. ರಂಗೋಲಿ ರಂಗು ಇದ್ದರೇನೇ ಹಬ್ಬದ ಸಂಭ್ರಮಕ್ಕೆ ವಿಶೇಷ ಮೆರುಗು, ಚುಕ್ಕಿಗಳ ಮೂಲಕ ರಂಗೋಲಿ ಬಿಡಿಸುವುದು ಒಬ್ಬ ವ್ಯಕ್ತಿಗೆ ತಾಳ್ಮೆ ಇದ್ದರೆ ಮಾತ್ರ ಮನಸ್ಸಲ್ಲಿ ಹೂಹಿಸಿದ ಚಿತ್ರ ಬಿಡಿಸಲು ಸಾದ್ಯ. ರಂಗೋಲಿ ಬಿಡಿಸುವುದು ಮಹಿಳೆಯರಿಗಷ್ಟೇ ಸೀಮಿತವಾಗಿತ್ತು, ಆದರೆ ಈಗ ಪುರುಷರೂ ದೇವರ ಪೂಜೆ, ಹಬ್ಬ, ಇನ್ನಿತರ ಶುಭ ಸಂದರ್ಭಗಳಲ್ಲಿ ರಂಗೋಲಿ ಹಾಕಿ ಅಲಂಕಾರ ಮಾಡುತ್ತಾರೆ. ಭಿನ್ನವಾಗಿ ಯೋಚಿಸಿ, ರಂಗೋಲಿ ಕೇವಲ ಚುಕ್ಕಿ ಚಿತ್ತಾರವಲ್ಲ, ಅದರೊಳಗೊಂದು ಅಧ್ಯಾತ್ಮದ ಸಂದೇಶವಿದೆ. ರಂಗೋಲಿ ಚಿತ್ರ ಬರೆದ ಪ್ರತಿಭೆ ರಾಜೇಶ್ ಎಸ್ ಬಂಗೆರ, ಈ ಅಧ್ಯಾತ್ಮದ ಸಂದೇಶವಿರುವ ರಂಗೋಲಿ ಚಿತ್ತಾರದಲ್ಲಿ ಮೂಡಿಬಂದ ಚಿತ್ರ ಉದಯ್ ಪೂಜಾರಿ.ಕರ್ನಾಟಕದ ಕರಾವಳಿ, ಬೆಂಗಳೂರು, ಮುಂಬೈ ಮಹಾನಗರ ಹಾಗೂ ದುಬೈ ನಗರಗಳಲ್ಲಿ ಮನೆಮಾತಾಗಿರುವ ಬಲಿಷ್ಠ ಯುವಪಡೆಯ ಬಿರುವೆರ್ ಕುಡ್ಲ ಸಂಘಟನೆಯನ್ನು ಸಮರ್ಥ ರೀತಿಯಲ್ಲಿ ಮುನ್ನಡೆಸಿ, ಯುವಜನಾಂಗಕ್ಕೆ ಸೂಕ್ತ ಮಾರ್ಗದರ್ಶನ ಮತ್ತು ಪ್ರೋತ್ಸಾಹಕೊಟ್ಟು, ಸಮಾಜದ ಕಷ್ಟದಲ್ಲಿರುವ ಜನತೆಯ ಕೈಹಿಡಿಯುತ್ತಿರುವ ಸಂಘಟನೆಯಾಗಿದ್ದು ಇದನ್ನು ಉತ್ತಮ ರೀತಿಯಲ್ಲಿ ನಡೆಸುವಂತ ಸಾರಥಿ ಉದಯ್ ಪೂಜಾರಿ.ರಂಗೋಲಿ ಚುಕ್ಕಿ ಚಿತ್ತಾರ ಮಾಡಿದ ಪ್ರತಿಭೆ ರಾಜೇಶ್ ಎಸ್ ಬಂಗೆರ ಮೂಲತಃ ಪೂಂಜಾಲ್ ಕಟ್ಟೆ ನಿವಾಸಿ. ಸದ್ಯಕ್ಕೆ ದೇವರ ಪೂಜೆಯ ಕೆಲಸ ಮಾಡುತ್ತಿರುವ ಇವರು, ರಂಗೋಲಿ ಬಿಡಿಸುವುದು ಕಲಿತು, ಬಿಡುವಿನ ಸಮಯದಲ್ಲಿ ವಿಭಿನ್ನ ರೀತಿಯಲ್ಲಿ ರಂಗೋಲಿ ಬಿಡಿಸುತ್ತಾ ತನ್ನ ಪ್ರತೀಭೆಯನ್ನು ತೋರಿಸುತ್ತಿದ್ದಾರೆ. ಈಗಾಗಲೇ ಇವರು ರಾಮ ಮಂದಿರ, ಶ್ರೀ. ನಾರಾಯಣ ಗುರು, ಉದಯ್ ಪೂಜಾರಿ ಹಾಗು ಮೊದಲಾದವರ ದೇವರ ಚಿತ್ರಗಳನ್ನು ಬರೆದು ಎಲ್ಲರಿಂದ ಭೇಷ್‌ ಎನ್ನಿಸಿಕೊಂಡಿದ್ದಾರೆ. ರಂಗೋಲಿ ಬಿಡಿಸುವುದನ್ನು ಹವ್ಯಾಸವಾಗಿದೆ.

ಬರಹ: ಪುಷ್ಪರಾಜ್ ಪೂಜಾರಿ – Billavaswarriors.com


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »