TOP STORIES:

ಜೀವನದ ಸುದೀರ್ಘ ವರ್ಷಗಳನ್ನು ಕಾರಿನಲ್ಲಿ ಚಾಲಕನಾಗಿ ಕಳೆದ ವೇಣೂರಿನ ಭೈರಣ್ಣನಿಗೊಂದು ನುಡಿ ನಮನ…


ಹುಟ್ಟಿದ್ದು ಗುರುಪುರದಲ್ಲಿ. ಜೀವನದ ಸುದೀರ್ಘ ವರ್ಷಗಳನ್ನು  ಚಾಲಕನಾಗಿ ಕಳೆದದ್ದು ವೇಣೂರಿನಲ್ಲಿ. ಸರಿ ಸುಮಾರು 56 ವರ್ಷಗಳ ನಿರಂತರ ಚಾಲಕನಾಗಿ ಸೇವೆ ಸಲ್ಲಿಸಿದ್ದು ವೇಣೂರಿನ ಮಹಾಜನತೆಗೆ !

ಭೈರಣ್ಣನೇ ಹೇಳುವಂತೆ ಅವರು ವೇಣೂರಿಗೆ ಬಂದದ್ದು ಎಪ್ರಿಲ್ 9 , 1967 ರಂದು.  ವೇಣೂರಿನ ಖ್ಯಾತ ವರ್ತಕರಾದ   ಕಿಟ್ಟೆರ್  ಎಂದೇ ಖ್ಯಾತರಾದ  ಶ್ರೀ ಖಂಡಿಗ ನರಸಿಂಹ ಪೈ ( ಕೆ.ಎನ್. ಪೈ)ಯವರ ಚಾಲಕನಾಗಿ. ವೇಣೂರಿಗೆ ಬಂದ ಮೇಲೆ ಮತ್ತೆ ಗುರುಪುರಕ್ಕೆಮರಳಲು ಮನಸಾಗದೆ ವೇಣೂರಿನಲ್ಲೇ ಕಾರು ಚಾಲಕನಾಗಿ ನೆಲೆಯಾದವರು ಭೈರಣ್ಣ.

ಕಿಟ್ಟರ ಕಾರಿನ ಬಳಿಕ ಶ್ರೀ ನಾರಾಯಣ ಹೆಗ್ಡೆಯವರ ಕಾರಿನಲ್ಲಿ ಡ್ರೈವರ್ ಆಗಿ, ನಂತರ 1970 ರಿಂದ 1974 ವರೆಗೆ  ಕೆಳಗಿನಪೇಟೆಯ ಸಹನಾ ಟೆಕ್ಸ್ ಟೈಲ್ಸ್   ಮಾಲೀಕರಾದ ಶ್ರೀಸಂಜೀವ ಸಾಲ್ಯಾನ್ ಚಾಲಕರಾಗಿದ್ದ ಭೈರಣ್ಣ ನಂತರ ಸ್ವಂತ ಕಾರು ಖರೀದಿಸಿಬಾಡಿಗೆಗೆ ಕಾರು ಓಡಿಸಲು ಆರಂಭಿಸಿದರು.

ಭೈರಣ್ಣ ಕಲಿತದ್ದು ಎರಡನೇ ತರಗತಿಯವರೆಗೆ ಮಾತ್ರ. ಮನೆಯಲ್ಲಿ ಬಡತನವಿದ್ದ ಕಾರಣ ಮೊದಲು ಕೂಲಿ ಕೆಲಸ, ಬಳಿಕವಾಮಂಜೂರಿನಲ್ಲಿ ಸ್ವಲ್ಪ ಸಮಯ ಜೊಕಿಂ ಸೆರಾವೊ ಅವರಲ್ಲಿ ಕೆಲಸ, ಮಂಗಳೂರಿನ ಕೊಟ್ಟಾರದಲ್ಲಿ ಮಾಲಿಂಗ ಶೆಟ್ಟಿಯವರಮನೆಯಲ್ಲಿ ಕಾರು ತೊಳೆದು ಅದನ್ನು ಓಡಿಸಲು ಅಭ್ಯಾಸ ಮಾಡಿ ಪರಿಣತಿ ಪಡೆದವರು.

ಭೈರಣ್ಣ ಹೇಳುವಂತೆ ಅವರು ಹುಟ್ಟಿದ್ದು 1938ನೇ ವರ್ಷದ ಮಾಯಿಡ್ ಪದಿಮೂಜಿ ಪೋಯಿನಾನಿ. ತಂದೆ ಫಕೀರ ಪೂಜಾರಿ. ತಾಯಿ ಗೌರಿ. ದಂಪತಿಗಳ ನಾಲ್ವರು ಮಕ್ಕಳಲ್ಲಿ ಭೈರಣ್ಣ ಒಬ್ಬರು.  ಗುರುಪುರದಲ್ಲಿ ಒಂದೂಕಾಲು ಎಕರೆ ಜಾಗ ಅವರ ತಂದೆಗಿದ್ದಆಸ್ತಿ.

ಭೈರಣ್ಣ ವೇಣೂರಿಗೆ ಬಂದ ಮೇಲೆ ಅನೇಕ ಮಂದಿಯ ಪ್ರಾಣವನ್ನು ಉಳಿಸಿದ ಕೀರ್ತಿ ಅವರದು. 1970 ರಿಂದ 1990   ಕಾಲದಲ್ಲಿವೇಣೂರಿನಲ್ಲಿ ಬಾಡಿಗೆ ಕಾರು ಅಂದರೆ ಅದು ಭೈರಣ್ಣನ ಕಾರು ಅನ್ನುವಷ್ಟು ಪ್ರಸಿದ್ಧರಾಗಿದ್ದವರು ಅವರು. ಅತ್ಯಂತ ವಿನಯಶೀಲ, ದಿನದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಯಾವುದೇ ಹೊತ್ತಿನಲ್ಲಿ ಹೋಗಿ ಕರೆದರೂ ಸೇವೆಗೆ ಸದಾ ಸಿದ್ಧರಾಗಿದ್ದ ಭೈರಣ್ಣ ಯಾರೊಂದಿಗೂಸಿಡುಕಿದವರಲ್ಲ. ಎಷ್ಟೋ ಮಂದಿಯ ಮದುವೆ ದಿಬ್ಬಣ, ಆಫೀಸು ಕೆಲಸ, ಪುಣ್ಯಕ್ಷೇತ್ರ ದರ್ಶನ, ಕಾಜೂರು ಉರೂಸ್, ಅತ್ತೂರುಚರ್ಚ್ ಜಾತ್ರೆಗೆ ಜನರನ್ನು ಕರೆದೊಯ್ಯುವ ಕಾರ್ಯ,ಹಲವಾರು ಮಂದಿ ಗರ್ಭಿಣಿಯರನ್ನು ಹಾಗೂ ಅನಾರೋಗ್ಯ ಪೀಡಿತರನ್ನುಸಕಾಲಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಕಾಪಾಡಿದ ಕೀರ್ತಿ ಭೈರಣ್ಣನದ್ದು.

ಕೆಲವೊಮ್ಮೆ ಭೈರಣ್ಣನ ಅಂಬಾಸಿಡರ್ ಕಾರ್ ನಿಧಾನವಾಗಿ ಹೋಗುತ್ತಿದೆಯೆಂದರೆ ಯಾರಿಗೋ ಏನೋ ಆಗಿದೆಯೆಂದೋ, ಮಣಿಪಾಲ ಆಸ್ಪತ್ರೆಗೆ ಹೊರಟಿದೆಯೆಂದೋ ಒಂದು ರೀತಿಯ ಅನೂಹ್ಯ ಭಯವೂ ಅಗುವುದಿತ್ತು!

ಕಳೆದ ಕೆಲವು ವರ್ಷಗಳಿಂದ ಕುಟುಂಬದವರು ಬಂದು ವಾರ್ಧಕ್ಯದ  ಸಮಯದಲ್ಲಿ ಗುರುಪುರದ ಮನೆಗೆ ಬರುವಂತೆಕೇಳಿಕೊಂಡರೂ ಅತ್ತ ಹೋಗಲು ಮನಸಾಗದೇ ವೇಣೂರಿನಲ್ಲಿ  ಶ್ರೀ ಕೇಶವ ಕಾಮತರ ಅಂಗಡಿಯ ಮೇಲಿದ್ದ ರೂಮಿನಲ್ಲೇವಾಸವಿದ್ದರು. ಶ್ರೀ ಕೇಶವ ಕಾಮತರ ಸುಪುತ್ರ ಶ್ರೀ ವೆಂಕಟರಮಣ ಕಾಮತರು ಕೊನೆಯವರೆಗೂ ಅವರಿಗೆ ಆಶ್ರಯವಿತ್ತುಸಹೃದಯತೆಯನ್ನು ತೋರಿದವರು. ಭೈರಣ್ಣನ ಶಿಷ್ಯರಾದ ಇಬ್ರಾಹಿಂರವರು ಭೈರಣ್ಣನನ್ನು ಅನಾರೋಗ್ಯದ ಸಮಯದಲ್ಲಿನೋಡಿಕೊಂಡು ಗುರುಭಕ್ತಿಯನ್ನು ಮೆರೆದಿದ್ದಾರೆ.

ಅವಿವಾಹಿತರಾಗಿಯೇ ಉಳಿದಿದ್ದ ಭೈರಣ್ಣ ಕೊನೆಯ ತನಕವೂ ವೇಣೂರಿನಲ್ಲಿಯೇ ಯಾರಿಗೂ ಹೊರೆಯಾಗದಂತೆ ಉಳಿದು   ಜೂನ್ 9, 2023ರಂದು ತಮ್ಮ 85 ನೇ ವಯಸ್ಸಿನಲ್ಲಿ ಭಗವಂತನ ಪಾದವನ್ನು ಸೇರಿದರು.

ವೇಣೂರಿನಲ್ಲಿ 56 ವರ್ಷಗಳ ಕಾಲ ಜನರಿಗೆ ಕಾರಿನ ಮೂಲಕ ಸೇವೆಯನ್ನು ನೀಡಿದ ಭೈರಣ್ಣನನ್ನು ಯಾವುದೇ ಸಂಘಸಂಸ್ಥೆಗಳಾಗಲೀ, ಶಾರದೋತ್ಸವ, ಗಣೇಶೋತ್ಸವ ಸಮಿತಿಯವರಾಗಲೀ ಗುರುತಿಸಿ ಗೌರವಿಸದೇ ಇದ್ದುದ್ದು ಮಾತ್ರ ವಿಷಾದನೀಯ.

ವೇಣೂರಿನ ಸ್ಮರಣೀಯ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಭೈರಣ್ಣನಿಗೆ ಭಾವಪೂರ್ಣ ಶ್ರದ್ಧಾಂಜಲಿ.

ಡಾ. ಸುಬ್ರಹ್ಮಣ್ಯ ಭಟ್, ಕಜೆ ಮನೆ ವೇಣೂರು

ಮಾಹಿತಿ ಆಧಾರ:

. 23-09-2022 ರಂದು ನಾನು ನಡೆಸಿದ ಮೌಖಿಕ ಸಂದರ್ಶನದ ದಾಖಲಾತಿ

. ಶ್ರೀಮತಿ ಶಶಿಪ್ರಭಾ ಟೀಚರ್ ಅವರ ಮೌ


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »