TOP STORIES:

FOLLOW US

ಜೀವನದ ಸುದೀರ್ಘ ವರ್ಷಗಳನ್ನು ಕಾರಿನಲ್ಲಿ ಚಾಲಕನಾಗಿ ಕಳೆದ ವೇಣೂರಿನ ಭೈರಣ್ಣನಿಗೊಂದು ನುಡಿ ನಮನ…


ಹುಟ್ಟಿದ್ದು ಗುರುಪುರದಲ್ಲಿ. ಜೀವನದ ಸುದೀರ್ಘ ವರ್ಷಗಳನ್ನು  ಚಾಲಕನಾಗಿ ಕಳೆದದ್ದು ವೇಣೂರಿನಲ್ಲಿ. ಸರಿ ಸುಮಾರು 56 ವರ್ಷಗಳ ನಿರಂತರ ಚಾಲಕನಾಗಿ ಸೇವೆ ಸಲ್ಲಿಸಿದ್ದು ವೇಣೂರಿನ ಮಹಾಜನತೆಗೆ !

ಭೈರಣ್ಣನೇ ಹೇಳುವಂತೆ ಅವರು ವೇಣೂರಿಗೆ ಬಂದದ್ದು ಎಪ್ರಿಲ್ 9 , 1967 ರಂದು.  ವೇಣೂರಿನ ಖ್ಯಾತ ವರ್ತಕರಾದ   ಕಿಟ್ಟೆರ್  ಎಂದೇ ಖ್ಯಾತರಾದ  ಶ್ರೀ ಖಂಡಿಗ ನರಸಿಂಹ ಪೈ ( ಕೆ.ಎನ್. ಪೈ)ಯವರ ಚಾಲಕನಾಗಿ. ವೇಣೂರಿಗೆ ಬಂದ ಮೇಲೆ ಮತ್ತೆ ಗುರುಪುರಕ್ಕೆಮರಳಲು ಮನಸಾಗದೆ ವೇಣೂರಿನಲ್ಲೇ ಕಾರು ಚಾಲಕನಾಗಿ ನೆಲೆಯಾದವರು ಭೈರಣ್ಣ.

ಕಿಟ್ಟರ ಕಾರಿನ ಬಳಿಕ ಶ್ರೀ ನಾರಾಯಣ ಹೆಗ್ಡೆಯವರ ಕಾರಿನಲ್ಲಿ ಡ್ರೈವರ್ ಆಗಿ, ನಂತರ 1970 ರಿಂದ 1974 ವರೆಗೆ  ಕೆಳಗಿನಪೇಟೆಯ ಸಹನಾ ಟೆಕ್ಸ್ ಟೈಲ್ಸ್   ಮಾಲೀಕರಾದ ಶ್ರೀಸಂಜೀವ ಸಾಲ್ಯಾನ್ ಚಾಲಕರಾಗಿದ್ದ ಭೈರಣ್ಣ ನಂತರ ಸ್ವಂತ ಕಾರು ಖರೀದಿಸಿಬಾಡಿಗೆಗೆ ಕಾರು ಓಡಿಸಲು ಆರಂಭಿಸಿದರು.

ಭೈರಣ್ಣ ಕಲಿತದ್ದು ಎರಡನೇ ತರಗತಿಯವರೆಗೆ ಮಾತ್ರ. ಮನೆಯಲ್ಲಿ ಬಡತನವಿದ್ದ ಕಾರಣ ಮೊದಲು ಕೂಲಿ ಕೆಲಸ, ಬಳಿಕವಾಮಂಜೂರಿನಲ್ಲಿ ಸ್ವಲ್ಪ ಸಮಯ ಜೊಕಿಂ ಸೆರಾವೊ ಅವರಲ್ಲಿ ಕೆಲಸ, ಮಂಗಳೂರಿನ ಕೊಟ್ಟಾರದಲ್ಲಿ ಮಾಲಿಂಗ ಶೆಟ್ಟಿಯವರಮನೆಯಲ್ಲಿ ಕಾರು ತೊಳೆದು ಅದನ್ನು ಓಡಿಸಲು ಅಭ್ಯಾಸ ಮಾಡಿ ಪರಿಣತಿ ಪಡೆದವರು.

ಭೈರಣ್ಣ ಹೇಳುವಂತೆ ಅವರು ಹುಟ್ಟಿದ್ದು 1938ನೇ ವರ್ಷದ ಮಾಯಿಡ್ ಪದಿಮೂಜಿ ಪೋಯಿನಾನಿ. ತಂದೆ ಫಕೀರ ಪೂಜಾರಿ. ತಾಯಿ ಗೌರಿ. ದಂಪತಿಗಳ ನಾಲ್ವರು ಮಕ್ಕಳಲ್ಲಿ ಭೈರಣ್ಣ ಒಬ್ಬರು.  ಗುರುಪುರದಲ್ಲಿ ಒಂದೂಕಾಲು ಎಕರೆ ಜಾಗ ಅವರ ತಂದೆಗಿದ್ದಆಸ್ತಿ.

ಭೈರಣ್ಣ ವೇಣೂರಿಗೆ ಬಂದ ಮೇಲೆ ಅನೇಕ ಮಂದಿಯ ಪ್ರಾಣವನ್ನು ಉಳಿಸಿದ ಕೀರ್ತಿ ಅವರದು. 1970 ರಿಂದ 1990   ಕಾಲದಲ್ಲಿವೇಣೂರಿನಲ್ಲಿ ಬಾಡಿಗೆ ಕಾರು ಅಂದರೆ ಅದು ಭೈರಣ್ಣನ ಕಾರು ಅನ್ನುವಷ್ಟು ಪ್ರಸಿದ್ಧರಾಗಿದ್ದವರು ಅವರು. ಅತ್ಯಂತ ವಿನಯಶೀಲ, ದಿನದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಯಾವುದೇ ಹೊತ್ತಿನಲ್ಲಿ ಹೋಗಿ ಕರೆದರೂ ಸೇವೆಗೆ ಸದಾ ಸಿದ್ಧರಾಗಿದ್ದ ಭೈರಣ್ಣ ಯಾರೊಂದಿಗೂಸಿಡುಕಿದವರಲ್ಲ. ಎಷ್ಟೋ ಮಂದಿಯ ಮದುವೆ ದಿಬ್ಬಣ, ಆಫೀಸು ಕೆಲಸ, ಪುಣ್ಯಕ್ಷೇತ್ರ ದರ್ಶನ, ಕಾಜೂರು ಉರೂಸ್, ಅತ್ತೂರುಚರ್ಚ್ ಜಾತ್ರೆಗೆ ಜನರನ್ನು ಕರೆದೊಯ್ಯುವ ಕಾರ್ಯ,ಹಲವಾರು ಮಂದಿ ಗರ್ಭಿಣಿಯರನ್ನು ಹಾಗೂ ಅನಾರೋಗ್ಯ ಪೀಡಿತರನ್ನುಸಕಾಲಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಕಾಪಾಡಿದ ಕೀರ್ತಿ ಭೈರಣ್ಣನದ್ದು.

ಕೆಲವೊಮ್ಮೆ ಭೈರಣ್ಣನ ಅಂಬಾಸಿಡರ್ ಕಾರ್ ನಿಧಾನವಾಗಿ ಹೋಗುತ್ತಿದೆಯೆಂದರೆ ಯಾರಿಗೋ ಏನೋ ಆಗಿದೆಯೆಂದೋ, ಮಣಿಪಾಲ ಆಸ್ಪತ್ರೆಗೆ ಹೊರಟಿದೆಯೆಂದೋ ಒಂದು ರೀತಿಯ ಅನೂಹ್ಯ ಭಯವೂ ಅಗುವುದಿತ್ತು!

ಕಳೆದ ಕೆಲವು ವರ್ಷಗಳಿಂದ ಕುಟುಂಬದವರು ಬಂದು ವಾರ್ಧಕ್ಯದ  ಸಮಯದಲ್ಲಿ ಗುರುಪುರದ ಮನೆಗೆ ಬರುವಂತೆಕೇಳಿಕೊಂಡರೂ ಅತ್ತ ಹೋಗಲು ಮನಸಾಗದೇ ವೇಣೂರಿನಲ್ಲಿ  ಶ್ರೀ ಕೇಶವ ಕಾಮತರ ಅಂಗಡಿಯ ಮೇಲಿದ್ದ ರೂಮಿನಲ್ಲೇವಾಸವಿದ್ದರು. ಶ್ರೀ ಕೇಶವ ಕಾಮತರ ಸುಪುತ್ರ ಶ್ರೀ ವೆಂಕಟರಮಣ ಕಾಮತರು ಕೊನೆಯವರೆಗೂ ಅವರಿಗೆ ಆಶ್ರಯವಿತ್ತುಸಹೃದಯತೆಯನ್ನು ತೋರಿದವರು. ಭೈರಣ್ಣನ ಶಿಷ್ಯರಾದ ಇಬ್ರಾಹಿಂರವರು ಭೈರಣ್ಣನನ್ನು ಅನಾರೋಗ್ಯದ ಸಮಯದಲ್ಲಿನೋಡಿಕೊಂಡು ಗುರುಭಕ್ತಿಯನ್ನು ಮೆರೆದಿದ್ದಾರೆ.

ಅವಿವಾಹಿತರಾಗಿಯೇ ಉಳಿದಿದ್ದ ಭೈರಣ್ಣ ಕೊನೆಯ ತನಕವೂ ವೇಣೂರಿನಲ್ಲಿಯೇ ಯಾರಿಗೂ ಹೊರೆಯಾಗದಂತೆ ಉಳಿದು   ಜೂನ್ 9, 2023ರಂದು ತಮ್ಮ 85 ನೇ ವಯಸ್ಸಿನಲ್ಲಿ ಭಗವಂತನ ಪಾದವನ್ನು ಸೇರಿದರು.

ವೇಣೂರಿನಲ್ಲಿ 56 ವರ್ಷಗಳ ಕಾಲ ಜನರಿಗೆ ಕಾರಿನ ಮೂಲಕ ಸೇವೆಯನ್ನು ನೀಡಿದ ಭೈರಣ್ಣನನ್ನು ಯಾವುದೇ ಸಂಘಸಂಸ್ಥೆಗಳಾಗಲೀ, ಶಾರದೋತ್ಸವ, ಗಣೇಶೋತ್ಸವ ಸಮಿತಿಯವರಾಗಲೀ ಗುರುತಿಸಿ ಗೌರವಿಸದೇ ಇದ್ದುದ್ದು ಮಾತ್ರ ವಿಷಾದನೀಯ.

ವೇಣೂರಿನ ಸ್ಮರಣೀಯ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಭೈರಣ್ಣನಿಗೆ ಭಾವಪೂರ್ಣ ಶ್ರದ್ಧಾಂಜಲಿ.

ಡಾ. ಸುಬ್ರಹ್ಮಣ್ಯ ಭಟ್, ಕಜೆ ಮನೆ ವೇಣೂರು

ಮಾಹಿತಿ ಆಧಾರ:

. 23-09-2022 ರಂದು ನಾನು ನಡೆಸಿದ ಮೌಖಿಕ ಸಂದರ್ಶನದ ದಾಖಲಾತಿ

. ಶ್ರೀಮತಿ ಶಶಿಪ್ರಭಾ ಟೀಚರ್ ಅವರ ಮೌ


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »