TOP STORIES:

FOLLOW US

ಜೇನು ಕೃಷಿ ಯಶಸ್ಸು ಕಂಡ, ‘ಹನಿ ವರ್ಲ್ಡ್’ ಬ್ರಾಂಡ್‌ನ ಸ್ಥಾಪಕ ಬಿಲ್ಲವ ಮನಮೋಹನ


ಇವರು ಬೆಟ್ಟಂಪಾಡಿಯ ಯುವಕ. ಹೆಸರು ಮನಮೋಹನ.‌ ಕಾಯಕ ಜೇನು ಕೃಷಿ. ಆರಂಭಿಸಿದ್ದು‌ 8ನೇ ಕ್ಲಾಸಿನಲ್ಲಿರುವಾಗ – ಕೇವಲ ಒಂದು ಪೆಟ್ಟಿಗೆಯಿಂದ. ಈಗ ಇರುವ ಜೇನುಪೆಟ್ಟಿಗೆಗಳ‌ ಸಂಖ್ಯೆ ಎರಡು‌ ಸಾವಿರ. ಒಂದು ಪೆಟ್ಟಿಗೆಯಿಂದ ಗರಿಷ್ಠ 48.6 ಕೆ.ಜಿ. ಜೇನು ಸಂಗ್ರಹಿಸಿದ್ದೂ ಇದೆ.ಬೆಟ್ಟಂಪಾಡಿಯಿಂದ ಮೈಸೂರುವರೆಗೆ 75 ಕಡೆ ಪೆಟ್ಟಿಗೆ ಇಟ್ಟಿದ್ದಾರೆ. ಇವರ ಜಾಗದಲ್ಲಿ ಅಲ್ಲ, ಯಾರದ್ದೋ ಜಮೀನಿನಲ್ಲಿ. ಸ್ಥಳ ಬಾಡಿಗೆಯಾಗಿ ಮಾಲೀಕನಿಗೆ ಒಂದಷ್ಟು‌ ಜೇನು ಮತ್ತು ಪರಾಗಸ್ಪರ್ಶದಿಂದ ಫಸಲು ಹೆಚ್ಚಳದ ಖುಷಿ.

ವಾರ್ಷಿಕವಾಗಿ 16000 ಕೆ. ಜಿ. ಜೇನು, 250 ಕೆ. ಜಿ. ಮೇಣ ಸಂಗ್ರಹ, 2000 ಜೇನುಕುಟುಂಬ ಮಾರಾಟ ಮನಮೋಹನರ‌ ಸಾಧನೆ. ‘ಹನಿ ವರ್ಲ್ಡ್’ ಇವರ ಬ್ರಾಂಡ್‌. ಜೇನು ಕುಟುಂಬ ಮಾರಾಟ ಮಾಡುವ , ಅಧಿಕ ಶುದ್ಧ ಜೇನು ಸಂಗ್ರಹಿಸುವ ಕರ್ನಾಟಕದ ಏಕೈಕ ಯುವ ಕೃಷಿಕ.ಜೇನು ನಿರ್ವಹಣೆಗಾಗಿ ಒಂದಷ್ಟು ಮಂದಿಗೆ ಕೆಲಸ ಕೊಟ್ಟ‌ ಉದ್ಯೋಗದಾತ. ಪ್ರತಿ ವರ್ಷ ಸಾವಿರಕ್ಕೂ ಅಧಿಕ ಮಂದಿಗೆ ಇವರ ಮನೆಯಲ್ಲಿ ತರಬೇತಿಯಾಗುತ್ತದೆ. ಅದೆಷ್ಟೋ ಮಂದಿಯನ್ನು‌ ಸ್ವಾವಲಂಬಿಯಾಗಿಸಿದ್ದಾರೆ.

ಜೇನು‌‌ನಿರ್ವಹಣೆ ಬಗ್ಗೆ ಯಾವುದೇ ಹೊತ್ತಿನಲ್ಲಿ ‌ಕರೆ ಮಾಡಿದರೂ ಆತ್ಮೀಯವಾಗಿ ತಿಳಿಹೇಳುವರು. ಹೊಸಬರಿಗೆ ಸಂಪೂರ್ಣ ಪ್ರಾತ್ಯಕ್ಷಿಕೆ ಇದ್ದೇ ಇದೆ. ಇವರಲ್ಲಿ ಪೆಟ್ಟಿಗೆ ಖರೀದಿಸಿದರೆ, ಒಂದರಿಂದ ಸಾವಿರವಾಗಲಿ ಎಂದು ದೇವರನ್ನು ಪ್ರಾರ್ಥಿಸಿಯೇ ಹಸ್ತಾಂತರಿಸುವುದು.

ಹಮ್ಮುಬಿಮ್ಮಿಲ್ಲದ ಮುಕ್ತ ಮನಸ್ಸು, ನನ್ನಂತೆ ಇನ್ನೊಬ್ಬರು ಬೆಳೆಯವೇಕೆಂಬ ಚಿಂತನೆ ಮನಮೋಹನರನ್ನು ಯಶಸ್ವಿ ರೈತೋದ್ಯಮಿಯನ್ನಾಗಿಸಿದೆ ಎನ್ನುವುದು ಸತ್ಯ.


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »