TOP STORIES:

ಜೇನು ಕೃಷಿ ಯಶಸ್ಸು ಕಂಡ, ‘ಹನಿ ವರ್ಲ್ಡ್’ ಬ್ರಾಂಡ್‌ನ ಸ್ಥಾಪಕ ಬಿಲ್ಲವ ಮನಮೋಹನ


ಇವರು ಬೆಟ್ಟಂಪಾಡಿಯ ಯುವಕ. ಹೆಸರು ಮನಮೋಹನ.‌ ಕಾಯಕ ಜೇನು ಕೃಷಿ. ಆರಂಭಿಸಿದ್ದು‌ 8ನೇ ಕ್ಲಾಸಿನಲ್ಲಿರುವಾಗ – ಕೇವಲ ಒಂದು ಪೆಟ್ಟಿಗೆಯಿಂದ. ಈಗ ಇರುವ ಜೇನುಪೆಟ್ಟಿಗೆಗಳ‌ ಸಂಖ್ಯೆ ಎರಡು‌ ಸಾವಿರ. ಒಂದು ಪೆಟ್ಟಿಗೆಯಿಂದ ಗರಿಷ್ಠ 48.6 ಕೆ.ಜಿ. ಜೇನು ಸಂಗ್ರಹಿಸಿದ್ದೂ ಇದೆ.ಬೆಟ್ಟಂಪಾಡಿಯಿಂದ ಮೈಸೂರುವರೆಗೆ 75 ಕಡೆ ಪೆಟ್ಟಿಗೆ ಇಟ್ಟಿದ್ದಾರೆ. ಇವರ ಜಾಗದಲ್ಲಿ ಅಲ್ಲ, ಯಾರದ್ದೋ ಜಮೀನಿನಲ್ಲಿ. ಸ್ಥಳ ಬಾಡಿಗೆಯಾಗಿ ಮಾಲೀಕನಿಗೆ ಒಂದಷ್ಟು‌ ಜೇನು ಮತ್ತು ಪರಾಗಸ್ಪರ್ಶದಿಂದ ಫಸಲು ಹೆಚ್ಚಳದ ಖುಷಿ.

ವಾರ್ಷಿಕವಾಗಿ 16000 ಕೆ. ಜಿ. ಜೇನು, 250 ಕೆ. ಜಿ. ಮೇಣ ಸಂಗ್ರಹ, 2000 ಜೇನುಕುಟುಂಬ ಮಾರಾಟ ಮನಮೋಹನರ‌ ಸಾಧನೆ. ‘ಹನಿ ವರ್ಲ್ಡ್’ ಇವರ ಬ್ರಾಂಡ್‌. ಜೇನು ಕುಟುಂಬ ಮಾರಾಟ ಮಾಡುವ , ಅಧಿಕ ಶುದ್ಧ ಜೇನು ಸಂಗ್ರಹಿಸುವ ಕರ್ನಾಟಕದ ಏಕೈಕ ಯುವ ಕೃಷಿಕ.ಜೇನು ನಿರ್ವಹಣೆಗಾಗಿ ಒಂದಷ್ಟು ಮಂದಿಗೆ ಕೆಲಸ ಕೊಟ್ಟ‌ ಉದ್ಯೋಗದಾತ. ಪ್ರತಿ ವರ್ಷ ಸಾವಿರಕ್ಕೂ ಅಧಿಕ ಮಂದಿಗೆ ಇವರ ಮನೆಯಲ್ಲಿ ತರಬೇತಿಯಾಗುತ್ತದೆ. ಅದೆಷ್ಟೋ ಮಂದಿಯನ್ನು‌ ಸ್ವಾವಲಂಬಿಯಾಗಿಸಿದ್ದಾರೆ.

ಜೇನು‌‌ನಿರ್ವಹಣೆ ಬಗ್ಗೆ ಯಾವುದೇ ಹೊತ್ತಿನಲ್ಲಿ ‌ಕರೆ ಮಾಡಿದರೂ ಆತ್ಮೀಯವಾಗಿ ತಿಳಿಹೇಳುವರು. ಹೊಸಬರಿಗೆ ಸಂಪೂರ್ಣ ಪ್ರಾತ್ಯಕ್ಷಿಕೆ ಇದ್ದೇ ಇದೆ. ಇವರಲ್ಲಿ ಪೆಟ್ಟಿಗೆ ಖರೀದಿಸಿದರೆ, ಒಂದರಿಂದ ಸಾವಿರವಾಗಲಿ ಎಂದು ದೇವರನ್ನು ಪ್ರಾರ್ಥಿಸಿಯೇ ಹಸ್ತಾಂತರಿಸುವುದು.

ಹಮ್ಮುಬಿಮ್ಮಿಲ್ಲದ ಮುಕ್ತ ಮನಸ್ಸು, ನನ್ನಂತೆ ಇನ್ನೊಬ್ಬರು ಬೆಳೆಯವೇಕೆಂಬ ಚಿಂತನೆ ಮನಮೋಹನರನ್ನು ಯಶಸ್ವಿ ರೈತೋದ್ಯಮಿಯನ್ನಾಗಿಸಿದೆ ಎನ್ನುವುದು ಸತ್ಯ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »