TOP STORIES:

FOLLOW US

ಜೇನು ಕೃಷಿ ಯಶಸ್ಸು ಕಂಡ, ‘ಹನಿ ವರ್ಲ್ಡ್’ ಬ್ರಾಂಡ್‌ನ ಸ್ಥಾಪಕ ಬಿಲ್ಲವ ಮನಮೋಹನ


ಇವರು ಬೆಟ್ಟಂಪಾಡಿಯ ಯುವಕ. ಹೆಸರು ಮನಮೋಹನ.‌ ಕಾಯಕ ಜೇನು ಕೃಷಿ. ಆರಂಭಿಸಿದ್ದು‌ 8ನೇ ಕ್ಲಾಸಿನಲ್ಲಿರುವಾಗ – ಕೇವಲ ಒಂದು ಪೆಟ್ಟಿಗೆಯಿಂದ. ಈಗ ಇರುವ ಜೇನುಪೆಟ್ಟಿಗೆಗಳ‌ ಸಂಖ್ಯೆ ಎರಡು‌ ಸಾವಿರ. ಒಂದು ಪೆಟ್ಟಿಗೆಯಿಂದ ಗರಿಷ್ಠ 48.6 ಕೆ.ಜಿ. ಜೇನು ಸಂಗ್ರಹಿಸಿದ್ದೂ ಇದೆ.ಬೆಟ್ಟಂಪಾಡಿಯಿಂದ ಮೈಸೂರುವರೆಗೆ 75 ಕಡೆ ಪೆಟ್ಟಿಗೆ ಇಟ್ಟಿದ್ದಾರೆ. ಇವರ ಜಾಗದಲ್ಲಿ ಅಲ್ಲ, ಯಾರದ್ದೋ ಜಮೀನಿನಲ್ಲಿ. ಸ್ಥಳ ಬಾಡಿಗೆಯಾಗಿ ಮಾಲೀಕನಿಗೆ ಒಂದಷ್ಟು‌ ಜೇನು ಮತ್ತು ಪರಾಗಸ್ಪರ್ಶದಿಂದ ಫಸಲು ಹೆಚ್ಚಳದ ಖುಷಿ.

ವಾರ್ಷಿಕವಾಗಿ 16000 ಕೆ. ಜಿ. ಜೇನು, 250 ಕೆ. ಜಿ. ಮೇಣ ಸಂಗ್ರಹ, 2000 ಜೇನುಕುಟುಂಬ ಮಾರಾಟ ಮನಮೋಹನರ‌ ಸಾಧನೆ. ‘ಹನಿ ವರ್ಲ್ಡ್’ ಇವರ ಬ್ರಾಂಡ್‌. ಜೇನು ಕುಟುಂಬ ಮಾರಾಟ ಮಾಡುವ , ಅಧಿಕ ಶುದ್ಧ ಜೇನು ಸಂಗ್ರಹಿಸುವ ಕರ್ನಾಟಕದ ಏಕೈಕ ಯುವ ಕೃಷಿಕ.ಜೇನು ನಿರ್ವಹಣೆಗಾಗಿ ಒಂದಷ್ಟು ಮಂದಿಗೆ ಕೆಲಸ ಕೊಟ್ಟ‌ ಉದ್ಯೋಗದಾತ. ಪ್ರತಿ ವರ್ಷ ಸಾವಿರಕ್ಕೂ ಅಧಿಕ ಮಂದಿಗೆ ಇವರ ಮನೆಯಲ್ಲಿ ತರಬೇತಿಯಾಗುತ್ತದೆ. ಅದೆಷ್ಟೋ ಮಂದಿಯನ್ನು‌ ಸ್ವಾವಲಂಬಿಯಾಗಿಸಿದ್ದಾರೆ.

ಜೇನು‌‌ನಿರ್ವಹಣೆ ಬಗ್ಗೆ ಯಾವುದೇ ಹೊತ್ತಿನಲ್ಲಿ ‌ಕರೆ ಮಾಡಿದರೂ ಆತ್ಮೀಯವಾಗಿ ತಿಳಿಹೇಳುವರು. ಹೊಸಬರಿಗೆ ಸಂಪೂರ್ಣ ಪ್ರಾತ್ಯಕ್ಷಿಕೆ ಇದ್ದೇ ಇದೆ. ಇವರಲ್ಲಿ ಪೆಟ್ಟಿಗೆ ಖರೀದಿಸಿದರೆ, ಒಂದರಿಂದ ಸಾವಿರವಾಗಲಿ ಎಂದು ದೇವರನ್ನು ಪ್ರಾರ್ಥಿಸಿಯೇ ಹಸ್ತಾಂತರಿಸುವುದು.

ಹಮ್ಮುಬಿಮ್ಮಿಲ್ಲದ ಮುಕ್ತ ಮನಸ್ಸು, ನನ್ನಂತೆ ಇನ್ನೊಬ್ಬರು ಬೆಳೆಯವೇಕೆಂಬ ಚಿಂತನೆ ಮನಮೋಹನರನ್ನು ಯಶಸ್ವಿ ರೈತೋದ್ಯಮಿಯನ್ನಾಗಿಸಿದೆ ಎನ್ನುವುದು ಸತ್ಯ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »