TOP STORIES:

ಜೋಡು ನಂದಾದೀಪ ತಂಡಕ್ಕೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಗೌರವ ಅರ್ಪಣೆ.


ತುಳುನಾಡಿನ ಗರಡಿಗಳಲ್ಲಿ ಆರಾಧನೆ ಪಡೆವ ಕಾರಣಿಕ ಪುರುಷರಾದ ಕೋಟಿ ಚೆನ್ನಯರು ಬಾಳಿಬೆಳಗಿದ ಪುಣ್ಯದ ಮಣ್ಣು, ಗುರುಸಾಯನ ಬೈದ್ಯರಿಂದ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿಯಾಗಿ ಪುನರ್ಜನ್ಮ ಪಡೆದ ಪರಮಪಾವನ ಭೂಮಿ. ವೈದ್ಯೆ ವಿದ್ಯೆಕಲಿತ ನೆಲದಚಾರಿತ್ರಿಕ ಹಿನ್ನೆಲೆಯಲ್ಲಿ ರಚನೆಗೊಂಡ ಬಿಡುಗಡೆಯಾದ ಕೂಡಲೇ ತುಳುನಾಡಿನ ಸಂಗೀತ ಪ್ರೇಮಿಗಳ ಮನೆಸೂರುಗೊಂಡುಸಮಾಜಿಕ ಜಾಲ ತಾಣಗಳಲ್ಲಿ ಬಾರಿ ಸಂಚಲನವನ್ನು ಸೃಷ್ಟಿಸಿದ, ಅರ್ಥಗರ್ಭಿತವಾಗಿ ತಮ್ಮ ಸಾಹಿತ್ಯದ ಮೂಲಕ ಶ್ರೀ ಕ್ಷೇತ್ರಗೆಜ್ಜೆಗಿರಿಯ ಮಣ್ಣಿನ ಕಂಪನ್ನು ವಿಶ್ವವ್ಯಾಪ್ತಿಯ ಕೋಟಿ ಚೆನ್ನಯರ ಭಕ್ತರಿಗೆಲ್ಲಾ ಪಸರಿಸಿದ ರೇಣುಕಾ ಕಣಿಯೂರು ಸಾಹಿತ್ಯರಚನೆಯಲ್ಲಿ ಮೂಡಿಬಂದ ಅತ್ಯುತ್ತಮವಾದ ಭಕ್ತಿಗೀತೆ ಜೋಡು ನಂದಾದೀಪ.

ಜಿಪಿ ಕ್ರಿಯೇಷನ್ಸ್ ಲಾಂಛನದಲ್ಲಿ ಈಗಾಗಲೇ  ಐತಿಹಾಸಿಕ ದಾಖಲೆ ನಿರ್ಮಾಣವಾದ  ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿಎರಾಜೆಬರ್ಕೆ ಮನೆತನದ ಗೆಜ್ಜೆಗಿರಿತ ಬ್ರಹ್ಮಲಶಯೆ ಮತ್ತು ಕಟೀಲಿನ ಭಕ್ತಿಗೀತೆ ಮೈನಿಲಿಕೆ ಮಲ್ಲಿಗೆದ ಅಲಂಕಾರೊನೆ ತುಳುನಾಡಿನಖ್ಯಾತ ಉದಯೋನ್ಮುಖ ಯುವ ಗಾಯಕ ಗುರುಪ್ರಸಾದ್ ಮತ್ತು ಕಟೀಲಿನ ಪುರವಾಸಿನಿ ಭ್ರಮರಾಂಬಿಕೆ ಗೀತೆ ಮತ್ತು ಹಲವು ಪುಣ್ಯಕ್ಷೇತ್ರದ ಭಕ್ತಿಗೀತೆಗಳನ್ನು ಹಾಡಿರುವ ಗಾಯಕಿ ಗ್ರೀಷ್ಮ ಕಟೀಲ್ ಗಾಯನದಲ್ಲಿ ಮೂಡಿಬಂದ ಗೆಜ್ಜೆಗಿರಿ ಕ್ಷೇತ್ರದ ಭಕ್ತಿಗೀತೆಗೆಕೈಜೋಡಿಸಿದ ತಂಡದ ಪ್ರಮುಖರನ್ನು ಕ್ಷೇತ್ರದ ವತಿಯಿಂದ ಶುಭ ಹಾರೈಸಿ ತಂಡದಿಂದ ಇನ್ನಷ್ಟು ಕ್ಷೇತ್ರದ ಸೇವೆಗೆ ಸರ್ವಶಕ್ತಿವರ್ಯರು ಚೈತನ್ಯ ತುಂಬಲೆಂದು ಪ್ರಾರ್ಥಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂದರ್ಭದಲ್ಲಿ ಕೋಶಾಧಿಕಾರಿ ದೀಪಕ್ಕೋಟ್ಯಾನ್, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಟ್ರಸ್ಟಿ ಚಂದ್ರಹಾಸ್ ಉಚ್ಚಿಲ್, ಪ್ರಮುಖರಾದ ಮಂಜುನಾಥ್ ಸಾಲ್ಯಾನ್, ಗಣೇಶ್ ಪೂಜಾರಿ ಕಲ್ಲಡ್ಕ, ಜನಾರ್ಧನ ಪೂಜಾರಿ ಪಾದಡ್ಕ,ಚರಣ್ ಉಳ್ಳಾಲ್, ಕುಮಾರ್ ಇರುವೈಲ್,ಹರೀಶ್ ಬಾಕಿಲಗುತ್ತು  ದೀಪಕ್ ಸಜಿಪ ಮತ್ತಿತರರು ಉಪಸ್ಥಿತರಿದ್ದರು.


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »