TOP STORIES:

ಡಾ. ಯೋಗೀಶ್ ಕೈರೋಡಿ ಎಂಬ ವಿದ್ವತ್ ಪ್ರತಿಭೆ


ಹುಲ್ಲಿನಷ್ಟು ಸಾಧನೆ ಮಾಡಿ ಬೆಟ್ಟದಷ್ಟು ಪ್ರಚಾರ ಪಡೆಯುವ ಕಾಲವಿದು. ಕೊಡುಗೆಗಿಂತ ಪ್ರಚಾರವೇ ಅಧಿಕವಾದರೆ ಬಹಳ ಕಾಲ ಉಳಿಯದು. ಕೆಲವರದ್ದು ಹಾಗಲ್ಲ, ಅವರ ಕೆಲಸವೇ ಮಾತನಾಡುತ್ತದೆ. ಬಹುಕಾಲ ಉಳಿಯುತ್ತದೆ. ಅಂತಹ ಪ್ರತಿಭಾ ಸಂಪನ್ನ ಡಾ. ಯೋಗೀಶ್ ಕೈರೋಡಿರವರು . ನಾನು ಇವರ ಬಗ್ಗೆ ಬಹುಕಾಲದಿಂದ ಬಲ್ಲೆ. ನಿಮ್ಮ ಬಗ್ಗೆ ಬರೆಯುತ್ತೇನೆಂದಾಗ ಮುಗುಳ್ನಕ್ಕು ನಿರಾಕರಿಸುತ್ತಲೇ, ಬಂದರು. ಕೈರೋಡಿಯವರ ಬಗ್ಗೆ ಬರೆಯಲೇಬೇಕೆಂಬ ತುಡಿತದ ಫಲವೇ ಈ ಲೇಖನ.ಬಹುತೇಕ ಎಲ್ಲರಂತೆ ತುಳು ನಾಟಕ ಯಕ್ಷಗಾನ ನೋಡುತ್ತಲೇ, ವಿದ್ಯಾರ್ಥಿ ಜೀವನ ಸಮೃದ್ಧಗೊಳಿಸಿದವರು. ಸಾಂಪ್ರದಾಯಿಕ ಬೇಸಾಯದ ಗದ್ದೆಯ ಪರಿಮಳ ಅನುಭವಿಸುತ್ತಲೇ, ಬಾಲ್ಯದ ಸವಿ ಉಂಡವರು. ಊರ ಹೃದಯ ಭಾಗದಲ್ಲಿದ್ದ. ತನ್ನ ತಂದೆಯ ಹೊಟೇಲಿಗೆ ಬರುವ ವಿವಿಧ ಭಾವಭಂಗಿ, ಮಾತುಕತೆಗಳ ತಿರುಳು ಸ್ವಾರಸ್ಯದ ಜೀವನ ಶಿಕ್ಷಣದ ತಳಹದಿಯಲ್ಲಿ, ಬೆಳೆದ ಕೈರೋಡಿಯವರ ಪ್ರತಿಭೆಯ ವಿಕಾಸಕ್ಕೆ ವಿಸ್ತಾರ ಅವಕಾಶಗಳು ಒದಗಿಬಂತು.

ತುಳು ನಾಟಕಗಳಲ್ಲಿ ಹಾಸ್ಯ ಪಾತ್ರ ನಿರ್ವಹಿಸಿ ಪ್ರೇಕ್ಷಕ ಸಮೂಹವನ್ನು ನಗೆಗಡಲಲ್ಲಿ ತೇಲಿಸಿದರು. ಯಕ್ಷಗಾನದಲ್ಲಿ ಕಿರೀಟ ವೇಷಧಾರಿಯಾಗಿ, ರಾಜಗಾಂಭಿರ್ಯದ ಮಾತುಗಾರಿಕೆಯ ಮೂಲಕ ಕಣ್ಮನ ಸೆಳೆದರು.

ರಂಗಸ್ಥಳದ ನಡೆನುಡಿಯ ಸೊಬಗನ್ನು ಕಂಡವರೆಲ್ಲಾ ಕೈರೋಡಿಯವರು ಮುಂದೊಂದು ದಿನ ನಾಟಕ, ಯಕ್ಷಗಾನದ ಮೇರು ಕಲಾವಿದರಾಗುತ್ತಾರನೆಂದೇ ಭಾವಿಸಿದ್ದರು. ಪದವಿ ವಿದ್ಯಾರ್ಥಿ ಯಾಗಿದ್ದಾಗಲೇ, ಅವರು ಬರೆದ ಬಂಗಾರ್ದ ಬಲೆ ತುಳು ನಾಟಕದ ಸನ್ನಿವೇಶಗಳು ಹಿಂದಿಗೂ ಜನಮನದಲ್ಲಿ ಹಸಿರಾಗಿ ಉಳಿದಿದೆ.ಸಹಕಾರಿ ಮಹಾಮಂಡಳ ಬೆಂಗಳೂರಿನಲ್ಲಿ, ಆಯೋಜಿಸಿದ್ದ ರಾಜ್ಯಮಟ್ಟದ ಚರ್ಚಾಸ್ಪರ್ಧೆಯಲ್ಲಿ ಪುರಸ್ಕಾರ ಪಡೆದವರು.

ಸ್ನಾತಕೋತ್ತರ ಪದವಿ ಪಡೆದ ಯೋಗೀಶ್ ಕೈರೋಡಿಯವರು ಕಾಲೇಜು ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದರು.ತನ್ನ ಕಾರ್ಯ ಕ್ಷೇತ್ರವನ್ನು ತರಗತಿಯ ಕೊಠಡಿಗೆ ಸೀಮಿತಗೊಳಿಸದೆ ಸಾರ್ವಜನಿಕ ಸಭೆ ಸಮಾರಂಭಗಳ ನಿರೂಪಕರಾಗಿ, ಮುಖ್ಯ ಭಾಷಣಕಾರರಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ದಶಕಗಳಕಾಲ ಜಿಲ್ಲೆಯಾದ್ಯಂತ ತೊಡಗಿಸಿಕೊಂಡು ಚಿರಪರಿಚಿತರಾದರು. ಪ್ರಚಲಿತ ವಿಷಯ ಆಧರಿಸಿ ಬರೆದ ಲೇಖನಗಳು ಉದಯವಾಣಿ, ಪ್ರಜಾವಾಣಿಯಲ್ಲಿ, ಪ್ರಕಟವಾಗಿದೆ. ಮಾತು ಮತ್ತು ಬರಹವನ್ನು ತನ್ನ ಅಭಿವ್ಯಕ್ತಿಯ ಪ್ರಧಾನ ಮಾಧ್ಯಮವನ್ನಾಗಿಸಿ
ಬೆಳೆದರು.

ವಿವಿಧ ವಿಷಯ ಮತ್ತು ಪ್ರಕಾರಗಳಿಗೆ ಸಂಬಂಧಿಸಿದ ಆರು ಕೃತಿಗಳು ಪ್ರಕಟಗೊಂಡಿದೆ. ಇವರ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿಯು (2011)ರಲ್ಲಿ ದೊರೆತಿದೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಕಿರು ಸಂಶೋಧನಾ ಯೋಜನೆಗಳನ್ನು ಪೂರ್ಣಗೊಳಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಪದವಿ ಕನ್ನಡ ಹಾಗೂ ತುಳು ಭಾಷಾ ಪಠ್ಯಪುಸ್ತಕಗಳ ಸಂಪಾದಕರಾಗಿಯೂ, ಕಾರ್ಯನಿರ್ವಹಿಸಿದ್ದಾರೆ.ಕೆಲ ಕಾಲ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ, ಸಂಶೋಧನಾ ಸಹಾಯಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಶಿಕ್ಷಣ ಪಡೆದ ಯುವಕರಿಗೆ ಬೇಸಾಯವೆಂದರೆ ಅಲರ್ಜಿ. ಆದರೆ ಕೈರೋಡಿ ಹಾಗಲ್ಲ, ತನ್ನ ಹಿರಿಯರಿಂದ ಬಳುವಳಿಯಾಗಿ ಬಂದ ಕೃಷಿಭೂಮಿಯಲ್ಲಿ ಭತ್ತದ ಬೇಸಾಯ ಮಾಡುತ್ತಾರೆ.ಅಡಿಕೆಯೊಂದಿಗೆ ಮಿಶ್ರ ಬೆಳೆಯ ಕಡೆಗೂ ಆಸಕ್ತಿ ತೋರಿಸಿದ್ದಾರೆ. ಸಾಧ್ಯವಾದಷ್ಟು ಆಹಾರ ಸ್ವಾಲಂಬನೆ ಆಗಬೇಕೆಂಬುದು ಅವರ ಸಂಕಲ್ಪ.

ಕೆಲವು ವರ್ಷಗಳ ಹಿಂದೆ ಸಮಾಜಸೇವಾ ಸಂಘ-ಸಂಸ್ಥೆಗಳ ಚಟುವಟಿಕೆಯಲ್ಲಿ ಕೈರೋಡಿ ಮುಂಚೂಣಿಯಲ್ಲಿ ಕಂಡುಬರುತ್ತಿದ್ದರು.ನೇರ – ನಿರರ್ಗಳ ಸ್ವಾರಸ್ಯಕರ ಮಾತಿನ ಮೋಡಿಯಲ್ಲಿ ಸಭಿಕರನ್ನು ಮಂತ್ರಮುಗ್ಧಗೊಳಿಸುತ್ತಿದರು.

ಸಮಾಜದ ಉನ್ನತಿಗೆ ರಚನಾತ್ಮಕ ಕಾರ್ಯಗಳಾಗಬೇಕು ಚಿಂತನ- ಮಂಥನಗಳಾಗಬೇಕೆಂದು ನಿರ್ಧಾರಕ್ಕೆ ಬಂದ ಕೈರೋಡಿಯವರು ಸಾರ್ವಜನಿಕ ವೈಭವ ಹಾಗೂ ಭಾಷಣದ ಮೇಲಿನ ನಂಬಿಕೆ ಕಳೆದುಕೊಂಡರು. ಆದರೆ ಇವರು ಕೈಕಟ್ಟಿ ಕುಳಿತುಕೊಂಡಿಲ್ಲ. ಸಮಾಜದ ಒಳಿತಿಗೆ ತನ್ನ ಪಾಲಿನ ಕೊಡುಗೆ ನೀಡುತ್ತಲೆ ಇದ್ದಾರೆ. ಯುವಕರು ದಾರಿ ತಪ್ಪಿದ್ದಾರೆ ಎಂದು ಸಾರ್ವಜನಿಕ ವೇದಿಕೆಯಲ್ಲಿ, ಕೂಗಾಡುವುದು ನಿರರ್ಥಕ. ಯುವಕರ ಮನಸ್ಸನ್ನು ಸಕರಾತ್ಮಕವಾಗಿ ರೂಪಿಸುವ ರಚನಾತ್ಮಕ ಕಾರ್ಯಗಳಾಗಬೇಕೆಂದು ಇವರ ನಂಬಿಕೆ. ಆರೋಗ್ಯಪೂರ್ಣ ಮನಸ್ಸು ರೂಪಿಸಿದರೆ ಉಳಿದೆಲ್ಲವೂ ಸಾಧಿತವಾಗುತ್ತದೆ. ಎಂಬುದು ಇವರ ಚಿಂತನೆ. ಇವರು ಮೌನವಾಗಿ ರೂಪಿಸಿದ್ದ ಮದ್ಯಮುಕ್ತ ಮದರಂಗಿ ಜಿಲ್ಲೆಯಲ್ಲಿ ಉಂಟುಮಾಡಿದ ಕ್ರಾಂತಿಕಾರಿ ಬದಲಾವಣೆ ಸದ್ದುಗದ್ದಲವಿಲ್ಲದ ಸಮಾಜಪರ ಕಾಳಜಿಗೆ ಸಾಕ್ಷಿ.

ವಿದ್ಯಾರ್ಥಿಗಳ ಪಾಲಿನ ನೆಚ್ಚಿನ ಉಪನ್ಯಾಸಕ, ಕಲಾವಿದ, ಸಾಹಿತಿ, ಸಂಶೋಧಕ, ಸಮಾಜಪರ ಚಿಂತಕ ಡಾ.ಯೋಗೀಶ್ ಕೈರೋಡಿಯವರ ಸಾಧನೆಯ ಹಾದಿಗೆ ಇವಿಷ್ಟು ಅಕ್ಷರದ ಮಾಲಾರ್ಪಣೆ.

Credits: ಪಟ್ಲ ಯತೀನ್ ಪೂಜಾರಿ ಕಡೇಶಿವಾಲಯ

Email us: billavaswarriors@gmail.com

www.billavaswarriors.com


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »