TOP STORIES:

FOLLOW US

ಡ್ರೆಸ್‌ಕೋಡ್‌ಗೆ 9 ದಿನಗಳ ಕಾಲ ಬ್ರೇಕ್ ನೀಡಿ ನವರಂಗ್ ಬಣ್ಣದ ವಸ್ತ್ರಗಳನ್ನು ಧರಿಸಲು ಅವಕಾಶ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ


ದಕ್ಷಿಣ ಕನ್ನಡ ಜಿಲ್ಲೆಯ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತಮ್ಮ ಬ್ಯಾಂಕ್‌ನ ಸಿಬ್ಬಂದಿ, ಅಧಿಕಾರಿಗಳಿಗೆ ಸಂಘದ ಡ್ರೆಸ್‌ಕೋಡ್‌ಗೆ 9 ದಿನಗಳ ಕಾಲ ಬ್ರೇಕ್ ನೀಡಿ ನವರಂಗ್ ಬಣ್ಣದ ವಸ್ತ್ರಗಳನ್ನು ಧರಿಸಲು ಅವಕಾಶ ನೀಡಿದೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತ್ಮಶಕ್ತಿ ಸಹಕಾರಿ ಸಂಘದ ಪ್ರಧಾನ ಕಚೇರಿ ಮತ್ತು 19 ವಹಿವಾಟು ಶಾಖೆಗಳಿವೆ. ಇದರಲ್ಲಿ 100ಕ್ಕೂ ಅಧಿಕ ಮಂದಿ ಅಧಿಕಾರಿ, ಸಿಬ್ಬಂದಿ ಕರ್ತವ್ಯನಿರ್ವಹಿಸುತ್ತಿದ್ದಾರೆ. ಇವರೆಲ್ಲರಿಗೂ ನವರಾತ್ರಿಯ ಒಂಬತ್ತು ದಿನ ಆಯಾಯ ದಿನದ ಬಣ್ಣದ ವಸ್ತ್ರ ಧರಿಸಲು ಬ್ಯಾಂಕ್‌ನ ಆಡಳಿತ ಮಂಡಳಿ ಸೂಚನೆ ನೀಡಿದೆ. ಅದರಂತೆ ಗುರುವಾರದಿಂದ ನವರಂಗ್‌ನಲ್ಲಿ ಸಿಬ್ಬಂದಿ ಪಾಲ್ಗೊಳ್ಳುತ್ತಿದ್ದಾರೆ.
ಈ ಬಗ್ಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ, ನವರಂಗ್ ನವರಾತ್ರಿ ಹಬ್ಬದ ಉತ್ಸವವನ್ನು ನಾಲ್ಕು ಪಟ್ಟು ಜಾಸ್ತಿಗೊಳಿಸಿದ್ದು, ಇಂತಹ ವಿಭಿನ್ನ ಪರಿಕಲ್ಪ ಆಯೋಜನೆಗೆ ಅಭಿನಂದನೆಗಳು. ಕಳೆದ ವರ್ಷವೇ ನಾವು ಡ್ರೆಸ್‌ಕೋಡ್ ಬ್ರೇಕ್ ನೀಡಲು ಯೋಜಿಸಿದ್ದೆವು. ಆದರೆ ಕೊನೇಕ್ಷಣದಲ್ಲಿ ಅದು ಸಾಧ್ಯವಾಗದ ಕಾರಣ ಈ ಬಾರಿ ಅದನ್ನು ಪ್ರಾರಂಭದಿಂದಲೇ ಅನುಸರಿಸುತ್ತಿದ್ದೇವೆ. ಬ್ಯಾಂಕ್ ದಶಮಾನೋತ್ಸವ ಆಚರಿಸುವ ಈ ಸುಸಂದರ್ಭದಲ್ಲಿ ಈ ಸಂಭ್ರಮ ಮತ್ತಷ್ಟು ಖುಷಿ ನೀಡಿದೆ. ಸಿಬ್ಬಂದಿಗಳಲ್ಲೂ ನವರಾತ್ರಿ ಉತ್ಸವದ ಸಂಭ್ರಮ ಹೆಚ್ಚಿಸುವುದರ ಜತೆ ಕರ್ತವ್ಯಕ್ಕೆ ಮತ್ತಷ್ಟು ಹುರುಪು ನೀಡುವ ಉದ್ದೇಶದೊಂದಿಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಿಬ್ಬಂದಿ ಕೂಡಾ ಭಾರೀ ಆಸಕ್ತಿಯಿಂದ ಭಾಗವಹಿಸುತ್ತಿದ್ದಾರೆ ಎಂದರು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »