TOP STORIES:

ತನ್ನ ಇರುವಿಕೆ ತೋರಿದ ತುಳುನಾಡಿನ ದೈವಿಶಕ್ತಿ: ಉಗ್ರನನ್ನು ನಗರ ಪ್ರವೇಶಿಸಲು ಬಿಡದೇ ದಾರಿಯಲ್ಲೇ ಬಾಂಬ್ ಸ್ಪೋಟಿಸಿ ಜನರ ರಕ್ಷಿಸಿದ ಕಂಕನಾಡಿ ಗರಡಿಯ ಅವಳಿ ವೀರರು..!


ಮಂಗಳೂರು: ಕಳೆದ ಕೆಲವು ದಶಕಗಳಿಂದ ಕೋಮುದಳ್ಳೂರಿಯಲ್ಲಿ ಬೆಂದು ಹೋಗಿದ್ದ ಕರಾವಳಿಯ ವಾಣಿಜ್ಯ ನಗರಿ ಮಂಗಳೂರುಇತ್ತೀಚಿನ ವರ್ಷಗಳಲ್ಲಿ ಅದ್ಯಾಕೋ ಸ್ಥಬ್ಧವಾಗಿತ್ತು. ಸಂತೃಪ್ತಿಯ ಮಧ್ಯೆ ಶನಿವಾರ ಮಂಗಳೂರು ನಗರದ ಕಂಕನಾಡಿ ಪೊಲೀಸ್ಠಾಣೆ ಬಳಿ ಆಟೋ ಕುಕ್ಕರ್ ಬಾಂಬ್ ಸ್ಫೋಟ ಜನರನ್ನು ಮತ್ತೆ ಆತಂಕಕ್ಕೀಡು ಮಾಡಿದೆ. ಆದರೆ ಇದೆಲ್ಲದರ ನಡುವೆ ಘಟನೆಯಲ್ಲೂ ತುಳುನಾಡಿನ ಕಾರ್ಣಿಕ ಶಕ್ತಿಗಳು ಪವಾಡ ಮೆರೆದಿರುವುದು ಗೋಚರವಾಗುತ್ತಿದೆ.

ಶನಿವಾರ ಮಂಗಳೂರು ನಗರದ ಕಂಕನಾಡಿ ಕಪಿತಾನಿಯೋ ಶಾಲೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾ ಒಂದರಲ್ಲಿ ಸ್ಪೋಟ ಸಂಭವಿಸಿದ್ದುಘಟನೆಯಲ್ಲಿ ಚಾಲಕ ಸೇರಿದಂತೆ ಪ್ರಯಾಣಿಕನು ಗಂಭೀರವಾಗಿ ಗಾಯಗೊಂಡಿದ್ದರು. ಪ್ರಕರಣ ಅನೇಕ ಆಯಾಮಗಳನ್ನುಪಡೆದುಕೊಂಡರೂ ಕೊನೆಗೂ ಒಂದು ನಿರ್ದಿಷ್ಟ ಸ್ವರೂಪವನ್ನು ಪಡೆದುಕೊಂಡಿದೆ.

ಭಯೋತ್ಪಾದನೆ ಸಂಚು ರೂಪಿಸಿದ್ದ ಶಾರೀಕ್ ಕುಕ್ಕರ್‌ನಲ್ಲಿ ಅನೇಕ ಸ್ಫೋಟಕ ವಸ್ತುಗಳನ್ನು ತೆಗೆದುಕೊಂಡು ಪ್ರೀ ಪ್ಲಾನ್ ಎಂಬಂತೆಯೋಜನೆ ಹಾಕಿಕೊಂಡಿದ್ದ.

ಈತ ಮೈಸೂರಿನಿಂದ ಬಸ್ಸಿನಲ್ಲಿ ಬಂದು ಪಡೀಲ್‌ನ ಹತ್ತಿರ ಇಳಿದು ಪುರುಷೋತ್ತಮ್ ಎಂಬವರ ರಿಕ್ಷಾದಲ್ಲಿ ಕೂತು ಪಂಪ್‌ವೆಲ್‌ಗೆಹೋಗಬೇಕು ಎಂದಿದ್ದಾನೆ.

ಆದರೆ ಚಾಲಕ ರಿಕ್ಷಾ ಚಲಾಯಿಸುತ್ತಾ ಸಾಗುತ್ತಿರುವಾಗಲೇ ಕಂಕನಾಡಿ ನಗರ ಪೊಲೀಸ್ ಠಾಣೆ  ಬಳಿ ಆತ ಹೊತ್ತೊಯ್ಯುತ್ತಿದ್ದ ಬ್ಯಾಗ್‌ನಲ್ಲಿದ್ದ ಕುಕ್ಕರ್ ಅಚಾನಕ್ ಆಗಿ ಸ್ಫೋಟಗೊಂಡಿದೆ. ಸ್ಫೋಟದ ಪರಿಣಾಮವಾಗಿ ಇಬ್ಬರೂ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ.

ಈತನ ಕೃತ್ಯದ ಬಗ್ಗೆ ಅನೇಕ ಪ್ರಶ್ನೆಗಳು, ಅನುಮಾನಗಳು, ಆತಂಕಗಳು ಸೃಷ್ಠಿಯಾಗುತ್ತಿದ್ದರೂ ಆತ ಸ್ಪೋಟಕ ತುಂಬಿದ್ದ ಕುಕ್ಕರನ್ನುತೆಗೆದುಕೊಂಡು ಜನರು ನಂಬಿಕೊಂಡು ಬಂದಿರುವ ತುಳುನಾಡ ಕಾರ್ಣಿಕ ಪುರುಷರ ದೈವಸ್ಥಾನವಾದ ಕೋಟಿ ಚೆನ್ನಯ್ಯ ಗರೋಡಿತನ್ನ ಗಡಿಯನ್ನೂ ದಾಟಲು ಬಿಡದೆ ಮುಂಚಿತವಾಗಿಯೇ ಅವಘಡ ನಡೆದಿರುವುದು ಎಲ್ಲೋ ಒಂದು ಕಡೆ ಜನ ಇದು ಮಣ್ಣಿನಪವಾಡ ಪುರುಷರ ಶಕ್ತಿಎಂದು ಮಾತಾಡಿಕೊಳ್ಳುತ್ತಿದ್ದಾರೆ.

ಘಟನೆಯ ಭೀಕರತೆ ಅದೆಷ್ಟಿತ್ತೋ ತಿಳಿದಿಲ್ಲ. ಆದರೆ ದುರಂತವನ್ನು ಇಷ್ಟರಲ್ಲಿಯೇ ಮುಗಿಸಿದ್ದು ಮಾತ್ರ ನಾವು ನಂಬಿಕೊಂಡುಬಂದಿರುವ ಜಾಗದ ಶಕ್ತಿಗಳು ಎನ್ನುತಾರೆ ಸ್ಥಳೀಯರು.ಇನ್ನು ದುರಾದೃಷ್ಟವಶಾತ್ ಅಂದುಪ್ರತಿದಿನದಂತೆ ಇದು ಕೂಡಾ ಬಾಡಿಗೆಎಂದುಕೊಂಡಿದ್ದ ಪ್ರಮಾಣಿಕ ಆಟೋ ಚಾಲಕಪುರುಷೋತ್ತಮ ಅವರಿಗೆ ಮಾತ್ರ ಕಾದಿತ್ತು ಆಶ್ಚರ್ಯ.

ತನ್ನ ರಿಕ್ಷಾದಲ್ಲಿ ಪ್ರಯಾಣಿಕನನ್ನು ಕರೆದುಕೊಂಡು ಚಲಾಯಿಸುತ್ತಿರುವಾಗಲೇ ದುರಂತ ನಡೆದಿದ್ದು ಅವರನ್ನಷ್ಟೇ ಅಲ್ಲದೆ ಅಲ್ಲಿದ್ದವರನ್ನುಒಂದು ಕ್ಷಣ ದಿಗ್ಭ್ರಮೆಗೊಳಿಸಿತ್ತು. ಕರಾವಳಿಯಲ್ಲಿ ಏನು ಆಗುತ್ತೆ ಅಂತ ಭಯ ಇತ್ತೋ ಅದು ಘಟಿಸಿತ್ತು.

ಆದರೆ ಕುಕ್ಕರ್ ಬಾಂಬ್ ಮಂಗಳೂರು ನಗರ ಪ್ರವೇಶಿಸಿ ಯಾವುದೋ ಜನ ನಿಬಿಡ ಪ್ರದೇಶ, ಶಾಲೆಗಳ ಪ್ರದೇಶಗಳಲ್ಲಿ ಶಾಕೀರಕೊಂಡಿ ಹೋಗಿ ಸ್ಪೋಟಿಸಿದ್ದರೆ ಅದರ ಪರಿಣಾಮ ಬಹುಷ ಯಾರು ಕೂಡ ಊಹಿಸಲಸಾಧ್ಯ.

ಅಂತಹ ಸಜೀವ ಸ್ಪೋಟಕಗಳಿಂದ ತುಂಬಿದ್ದ ಟೈಮರ್ ಫಿಕ್ಸ್ ಮಾಡಿದ್ದ ಕುಕ್ಕರ್ ಬಾಂಬ್ ಜೊತೆಯಲ್ಲಿ ಶಾಕಿರನನ್ನು ಕಾರಣಿಕದ ಗರಡಿಕ್ಷೇತ್ರದ ಅವಳಿ ವೀರರು ಆಚೆಗೆ ದಾಟಿ ಬರಲು ಬಿಡದೇ ಮೊದಲೇ ಸ್ಪೋಟಗೊಂಡಿದ್ದು ದೈವ ಸಂಕಲ್ಪವಾಗಿತ್ತು.

ಎರಡು ವರ್ಷಗಳ ಹಿಂದೆಯಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ, ಮುಂದಿನ ದಿನಗಳಲ್ಲಿ ಮಗಳ ಮದುವೆಯನ್ನು ಎದುರುನೋಡುತ್ತಿದ್ದ ಪುರುಷೋತ್ತಮರ ಸ್ಥಿತಿ ಅವರ ಕುಟುಂಬಸ್ಥರ ಮನಸ್ಸನ್ನು ತಲ್ಲಣಗೊಳಿಸಿದೆ.

ಸಂಸಾರಕ್ಕೆ ಆರ್ಥಿಕ ಬೆನ್ನೆಲುಬಾಗಿದ್ದ ಪುರುಷೋತ್ತಮರು ಇದೀಗ ಸ್ಪೋಟಗಳ ಗಾಯಗಳಿಂದ ಆಸ್ಪತ್ರೆಯ ಹಾಸಿಗೆ ಮೇಲೆಮಲಗಿದ್ದಾರೆ.

ಆಟೋ ಚಾಲಕ ಪುರುಷೋತ್ತಮ್ ಅವರು ವೃತ್ತಿಯಲ್ಲಿ ಚಾಲಕರಾಗಿದ್ದರೂ ಅಪಾರ ದೈವಭಕ್ತ. ಮಹಾಕಾಳಿ ಮತ್ತು ಕೊರಗಜ್ಜ ದೈವದಭಕ್ತ ಕೂಡಾ. ದೈವಕ್ಕೆ ಬೂಳ್ಯ ಕೊಡುವ ಸಂಪ್ರದಾಯವನ್ನು ಬಹಳ ಹಿಂದಿನಿಂದಲೂ ಪಾಲಿಸಿಕೊಂಡು ಬರುತ್ತಿದ್ದಾರೆ.

ವಿಶೇಷ ದಿನಗಳು, ಸಂಕ್ರಾಂತಿ, ವಾರ್ಷಿಕ ದೇವರಾದನೆಯ ಸಂದರ್ಭದಲ್ಲಿ ದೈವದ ಚಾಕರಿಯನ್ನು ಮಾಡಿಕೊಂಡು ಬರುತ್ತಿದ್ದಾರೆ.

ದೈವಕ್ಕೆ ಸಲ್ಲಿಸಿದ ನಿಸ್ವಾರ್ಥ ಸೇವೆ ಪುರುಷೋತ್ತಮ್ ಜೀವ ಉಳಿಸಿದೆ. ಇವರು ದುರಂತದಲ್ಲಿ ಪಾರಾಗಲು ಉಜ್ಜೋಡಿಯ ಮಹಾಕಾಳಿಕೊರಗಜ್ಜ ದೈವಗಳೇ ಕಾರಣ ಅಂತಪತ್ನಿ ಚಿತ್ರಾಕ್ಷಿ ಕಣ್ಣೀರಿಟ್ಟಿದ್ದಾರೆ.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »