TOP STORIES:

FOLLOW US

ತನ್ನ ಇರುವಿಕೆ ತೋರಿದ ತುಳುನಾಡಿನ ದೈವಿಶಕ್ತಿ: ಉಗ್ರನನ್ನು ನಗರ ಪ್ರವೇಶಿಸಲು ಬಿಡದೇ ದಾರಿಯಲ್ಲೇ ಬಾಂಬ್ ಸ್ಪೋಟಿಸಿ ಜನರ ರಕ್ಷಿಸಿದ ಕಂಕನಾಡಿ ಗರಡಿಯ ಅವಳಿ ವೀರರು..!


ಮಂಗಳೂರು: ಕಳೆದ ಕೆಲವು ದಶಕಗಳಿಂದ ಕೋಮುದಳ್ಳೂರಿಯಲ್ಲಿ ಬೆಂದು ಹೋಗಿದ್ದ ಕರಾವಳಿಯ ವಾಣಿಜ್ಯ ನಗರಿ ಮಂಗಳೂರುಇತ್ತೀಚಿನ ವರ್ಷಗಳಲ್ಲಿ ಅದ್ಯಾಕೋ ಸ್ಥಬ್ಧವಾಗಿತ್ತು. ಸಂತೃಪ್ತಿಯ ಮಧ್ಯೆ ಶನಿವಾರ ಮಂಗಳೂರು ನಗರದ ಕಂಕನಾಡಿ ಪೊಲೀಸ್ಠಾಣೆ ಬಳಿ ಆಟೋ ಕುಕ್ಕರ್ ಬಾಂಬ್ ಸ್ಫೋಟ ಜನರನ್ನು ಮತ್ತೆ ಆತಂಕಕ್ಕೀಡು ಮಾಡಿದೆ. ಆದರೆ ಇದೆಲ್ಲದರ ನಡುವೆ ಘಟನೆಯಲ್ಲೂ ತುಳುನಾಡಿನ ಕಾರ್ಣಿಕ ಶಕ್ತಿಗಳು ಪವಾಡ ಮೆರೆದಿರುವುದು ಗೋಚರವಾಗುತ್ತಿದೆ.

ಶನಿವಾರ ಮಂಗಳೂರು ನಗರದ ಕಂಕನಾಡಿ ಕಪಿತಾನಿಯೋ ಶಾಲೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾ ಒಂದರಲ್ಲಿ ಸ್ಪೋಟ ಸಂಭವಿಸಿದ್ದುಘಟನೆಯಲ್ಲಿ ಚಾಲಕ ಸೇರಿದಂತೆ ಪ್ರಯಾಣಿಕನು ಗಂಭೀರವಾಗಿ ಗಾಯಗೊಂಡಿದ್ದರು. ಪ್ರಕರಣ ಅನೇಕ ಆಯಾಮಗಳನ್ನುಪಡೆದುಕೊಂಡರೂ ಕೊನೆಗೂ ಒಂದು ನಿರ್ದಿಷ್ಟ ಸ್ವರೂಪವನ್ನು ಪಡೆದುಕೊಂಡಿದೆ.

ಭಯೋತ್ಪಾದನೆ ಸಂಚು ರೂಪಿಸಿದ್ದ ಶಾರೀಕ್ ಕುಕ್ಕರ್‌ನಲ್ಲಿ ಅನೇಕ ಸ್ಫೋಟಕ ವಸ್ತುಗಳನ್ನು ತೆಗೆದುಕೊಂಡು ಪ್ರೀ ಪ್ಲಾನ್ ಎಂಬಂತೆಯೋಜನೆ ಹಾಕಿಕೊಂಡಿದ್ದ.

ಈತ ಮೈಸೂರಿನಿಂದ ಬಸ್ಸಿನಲ್ಲಿ ಬಂದು ಪಡೀಲ್‌ನ ಹತ್ತಿರ ಇಳಿದು ಪುರುಷೋತ್ತಮ್ ಎಂಬವರ ರಿಕ್ಷಾದಲ್ಲಿ ಕೂತು ಪಂಪ್‌ವೆಲ್‌ಗೆಹೋಗಬೇಕು ಎಂದಿದ್ದಾನೆ.

ಆದರೆ ಚಾಲಕ ರಿಕ್ಷಾ ಚಲಾಯಿಸುತ್ತಾ ಸಾಗುತ್ತಿರುವಾಗಲೇ ಕಂಕನಾಡಿ ನಗರ ಪೊಲೀಸ್ ಠಾಣೆ  ಬಳಿ ಆತ ಹೊತ್ತೊಯ್ಯುತ್ತಿದ್ದ ಬ್ಯಾಗ್‌ನಲ್ಲಿದ್ದ ಕುಕ್ಕರ್ ಅಚಾನಕ್ ಆಗಿ ಸ್ಫೋಟಗೊಂಡಿದೆ. ಸ್ಫೋಟದ ಪರಿಣಾಮವಾಗಿ ಇಬ್ಬರೂ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ.

ಈತನ ಕೃತ್ಯದ ಬಗ್ಗೆ ಅನೇಕ ಪ್ರಶ್ನೆಗಳು, ಅನುಮಾನಗಳು, ಆತಂಕಗಳು ಸೃಷ್ಠಿಯಾಗುತ್ತಿದ್ದರೂ ಆತ ಸ್ಪೋಟಕ ತುಂಬಿದ್ದ ಕುಕ್ಕರನ್ನುತೆಗೆದುಕೊಂಡು ಜನರು ನಂಬಿಕೊಂಡು ಬಂದಿರುವ ತುಳುನಾಡ ಕಾರ್ಣಿಕ ಪುರುಷರ ದೈವಸ್ಥಾನವಾದ ಕೋಟಿ ಚೆನ್ನಯ್ಯ ಗರೋಡಿತನ್ನ ಗಡಿಯನ್ನೂ ದಾಟಲು ಬಿಡದೆ ಮುಂಚಿತವಾಗಿಯೇ ಅವಘಡ ನಡೆದಿರುವುದು ಎಲ್ಲೋ ಒಂದು ಕಡೆ ಜನ ಇದು ಮಣ್ಣಿನಪವಾಡ ಪುರುಷರ ಶಕ್ತಿಎಂದು ಮಾತಾಡಿಕೊಳ್ಳುತ್ತಿದ್ದಾರೆ.

ಘಟನೆಯ ಭೀಕರತೆ ಅದೆಷ್ಟಿತ್ತೋ ತಿಳಿದಿಲ್ಲ. ಆದರೆ ದುರಂತವನ್ನು ಇಷ್ಟರಲ್ಲಿಯೇ ಮುಗಿಸಿದ್ದು ಮಾತ್ರ ನಾವು ನಂಬಿಕೊಂಡುಬಂದಿರುವ ಜಾಗದ ಶಕ್ತಿಗಳು ಎನ್ನುತಾರೆ ಸ್ಥಳೀಯರು.ಇನ್ನು ದುರಾದೃಷ್ಟವಶಾತ್ ಅಂದುಪ್ರತಿದಿನದಂತೆ ಇದು ಕೂಡಾ ಬಾಡಿಗೆಎಂದುಕೊಂಡಿದ್ದ ಪ್ರಮಾಣಿಕ ಆಟೋ ಚಾಲಕಪುರುಷೋತ್ತಮ ಅವರಿಗೆ ಮಾತ್ರ ಕಾದಿತ್ತು ಆಶ್ಚರ್ಯ.

ತನ್ನ ರಿಕ್ಷಾದಲ್ಲಿ ಪ್ರಯಾಣಿಕನನ್ನು ಕರೆದುಕೊಂಡು ಚಲಾಯಿಸುತ್ತಿರುವಾಗಲೇ ದುರಂತ ನಡೆದಿದ್ದು ಅವರನ್ನಷ್ಟೇ ಅಲ್ಲದೆ ಅಲ್ಲಿದ್ದವರನ್ನುಒಂದು ಕ್ಷಣ ದಿಗ್ಭ್ರಮೆಗೊಳಿಸಿತ್ತು. ಕರಾವಳಿಯಲ್ಲಿ ಏನು ಆಗುತ್ತೆ ಅಂತ ಭಯ ಇತ್ತೋ ಅದು ಘಟಿಸಿತ್ತು.

ಆದರೆ ಕುಕ್ಕರ್ ಬಾಂಬ್ ಮಂಗಳೂರು ನಗರ ಪ್ರವೇಶಿಸಿ ಯಾವುದೋ ಜನ ನಿಬಿಡ ಪ್ರದೇಶ, ಶಾಲೆಗಳ ಪ್ರದೇಶಗಳಲ್ಲಿ ಶಾಕೀರಕೊಂಡಿ ಹೋಗಿ ಸ್ಪೋಟಿಸಿದ್ದರೆ ಅದರ ಪರಿಣಾಮ ಬಹುಷ ಯಾರು ಕೂಡ ಊಹಿಸಲಸಾಧ್ಯ.

ಅಂತಹ ಸಜೀವ ಸ್ಪೋಟಕಗಳಿಂದ ತುಂಬಿದ್ದ ಟೈಮರ್ ಫಿಕ್ಸ್ ಮಾಡಿದ್ದ ಕುಕ್ಕರ್ ಬಾಂಬ್ ಜೊತೆಯಲ್ಲಿ ಶಾಕಿರನನ್ನು ಕಾರಣಿಕದ ಗರಡಿಕ್ಷೇತ್ರದ ಅವಳಿ ವೀರರು ಆಚೆಗೆ ದಾಟಿ ಬರಲು ಬಿಡದೇ ಮೊದಲೇ ಸ್ಪೋಟಗೊಂಡಿದ್ದು ದೈವ ಸಂಕಲ್ಪವಾಗಿತ್ತು.

ಎರಡು ವರ್ಷಗಳ ಹಿಂದೆಯಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ, ಮುಂದಿನ ದಿನಗಳಲ್ಲಿ ಮಗಳ ಮದುವೆಯನ್ನು ಎದುರುನೋಡುತ್ತಿದ್ದ ಪುರುಷೋತ್ತಮರ ಸ್ಥಿತಿ ಅವರ ಕುಟುಂಬಸ್ಥರ ಮನಸ್ಸನ್ನು ತಲ್ಲಣಗೊಳಿಸಿದೆ.

ಸಂಸಾರಕ್ಕೆ ಆರ್ಥಿಕ ಬೆನ್ನೆಲುಬಾಗಿದ್ದ ಪುರುಷೋತ್ತಮರು ಇದೀಗ ಸ್ಪೋಟಗಳ ಗಾಯಗಳಿಂದ ಆಸ್ಪತ್ರೆಯ ಹಾಸಿಗೆ ಮೇಲೆಮಲಗಿದ್ದಾರೆ.

ಆಟೋ ಚಾಲಕ ಪುರುಷೋತ್ತಮ್ ಅವರು ವೃತ್ತಿಯಲ್ಲಿ ಚಾಲಕರಾಗಿದ್ದರೂ ಅಪಾರ ದೈವಭಕ್ತ. ಮಹಾಕಾಳಿ ಮತ್ತು ಕೊರಗಜ್ಜ ದೈವದಭಕ್ತ ಕೂಡಾ. ದೈವಕ್ಕೆ ಬೂಳ್ಯ ಕೊಡುವ ಸಂಪ್ರದಾಯವನ್ನು ಬಹಳ ಹಿಂದಿನಿಂದಲೂ ಪಾಲಿಸಿಕೊಂಡು ಬರುತ್ತಿದ್ದಾರೆ.

ವಿಶೇಷ ದಿನಗಳು, ಸಂಕ್ರಾಂತಿ, ವಾರ್ಷಿಕ ದೇವರಾದನೆಯ ಸಂದರ್ಭದಲ್ಲಿ ದೈವದ ಚಾಕರಿಯನ್ನು ಮಾಡಿಕೊಂಡು ಬರುತ್ತಿದ್ದಾರೆ.

ದೈವಕ್ಕೆ ಸಲ್ಲಿಸಿದ ನಿಸ್ವಾರ್ಥ ಸೇವೆ ಪುರುಷೋತ್ತಮ್ ಜೀವ ಉಳಿಸಿದೆ. ಇವರು ದುರಂತದಲ್ಲಿ ಪಾರಾಗಲು ಉಜ್ಜೋಡಿಯ ಮಹಾಕಾಳಿಕೊರಗಜ್ಜ ದೈವಗಳೇ ಕಾರಣ ಅಂತಪತ್ನಿ ಚಿತ್ರಾಕ್ಷಿ ಕಣ್ಣೀರಿಟ್ಟಿದ್ದಾರೆ.


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »