TOP STORIES:

ತನ್ನ ಪ್ರತಿಬೇನ ಜಗತ್ತಿಗೆ ತೋರಿಸುತ್ತಿದ್ದಾರೆ ರಕ್ಷಾ ಪೂಜಾರಿ.


ಮನಸ್ಸಿನ ಭಾವನೆಗಳಿಗೆ ಬಣ್ಣ ತುಂಬಿ ಜೀವ ತುಂಬಾವ ಶಕ್ತಿ ಎಲ್ಲರಲ್ಲಿಯೂ ಇರುವುದಿಲ್ಲ ಇಲ್ಲೊಬಳು ತನ್ನ ಭಾವನೆಗಳಿಗೆ ಬಣ್ಣ ತುಂಬಿ ತನ್ನ ಪ್ರತಿಬೇನ ಜಗತ್ತಿಗೆ ತೋರಿಸುತ್ತಿದ್ದಾರೆ ಅವರೇ ರಕ್ಷಾ ಪೂಜಾರಿ.

ರಮೇಶ್ ಪೂಜಾರಿ ಮತ್ತು ಶಶಿಕಲಾ ಕೋಟ್ಯಾನ್ ದಂಪತಿಗಳ ಇಬ್ಬರು ಮಕ್ಕಳಲ್ಲಿ ಮುದ್ದಿನ ಮಗಳು ರಕ್ಷಾ ಬಡತನ ಇದ್ದರು ತನ್ನ ಪ್ರತಿಭೆಗೆ ಬಡತನ ಇರಲಿಲ್ಲ. ಪ್ರಸ್ತುತ ಬಾಡಿಗೆ ಮನೆಯಲ್ಲಿ ವಾಸಿಸುವ ರಕ್ಷಾರ ತಂದೆ ಅಂಗವಿಕಲತೆಯಿಂದ ಮನೆಯಲಿಯೇ ತಾಯಿಯ ದುಡಿಮೆಯಿಂದ ಜೀವನ ಸಾಗಿಸುವ ಬಡ ಕುಟುಂಬ, ತಮ್ಮ ಪಿ ಯು ಸಿ ಕಲಿಯುತ್ತಿದ್ದಾರೆ. ಇವರು ಪ್ರಾಥಮಿಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು, ಪ್ರೌಢ ಶಿಕ್ಷಣ ಮಹಾದೇವಿ ಪ್ರೌಢ ಶಾಲೆ ಕಾಪು,ಪಿ ಯು ಸಿ ಮತ್ತು ಕಾಲೇಜ್ ಶಿಕ್ಷಣವನ್ನು ದಂಡತೀರ್ಥ ಉಳಿಯರ ಗೋಳಿ ಯಲ್ಲಿ ಪೂರ್ಣಗೊಳಿಸಿದ ರಕ್ಷಾ ಚಿತ್ರ ಕಲೆಯಲ್ಲಿ ದೊಡ್ಡ ಸಾಧನೆ ಮಾಡಬೇಕು ಎನ್ನುವ ಉದ್ದೇಶದಿಂದ ವಿಶುವಲ್ ಆರ್ಟ್ಸ್ ಕಲಿಯಲು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಗೆ ಸೇರಿದರು.

ವಾರ್ಲಿ ಆರ್ಟ್ಸ್, ವಾರ್ಲಿ ವಾಲ್ ಪೈಂಟಿಂಗ್, ಟ್ರೇಡಿಷನಲ್ ಪೈಟಿಂಗ್, ಪಾಟ್ ಪೈಟಿಂಗ್, ಪಾಟ್ರೈಟ್ ಪೈಟಿಂಗ್, ಪಾಟ್ರೈಟ್ ಸ್ಕೆಚ್, ಮತ್ತು ಆಯಿಲ್ ಕಲರ್ ಪೈಟಿಂಗ್ ಮತ್ತು ಎಲ್ಲಾ ತರಹದ ಕ್ಯಾನವಸ್ ಪೈಟಿಂಗ್ ಮಾಡಿ ತನ್ನ ಅದ್ಭುತ ಪ್ರತಿಭೇನ ಜಗತ್ತಿಗೆ ತೋರಿಸಿದ್ದಾರೆ.

ಹಾಗೆಯೇ ಉಡುಪಿಯಲ್ಲಿ ನಡೆದ ಪವರ್ ಪರ್ಬ ಎನ್ನುವ ಎಕ್ಸಿಬಿಷನ್ನಲ್ಲಿ ಪಾಲ್ಗೊಂಡಿದ್ದಾರೆ ಮತ್ತು ಅನೇಕ ಕ್ಯಾಂಪ್ ಗಳಲ್ಲಿ ಹಾಜರಾಗಿದ್ದಾರೆ ಮತ್ತು ಮುಕ್ತ ಟಿವಿ ಯ ಅನ್ವೇಷಣೆ ಕಾರ್ಯಕ್ರಮದಲ್ಲಿಯೂ ಭಾಗವಹಿಸಿದ್ದಾರೆ

ಇವರ ಈ ಸಾಧನೆಗೆ ಮನೋಜ್ ಶೆಟ್ಟಿ ಮತ್ತು ಅಸ್ವಿನಿ ಶೆಟ್ಟಿ ,ಅಶೋಕ್ ದೇವಾಡಿಗ, ಮತ್ತು ಡಾ ಸುರೇಶ ಹಾಗೆಯೇ ಇವರು ಇರುವ ಬಾಡಿಗೆ ಮನೆಯ ಯಜಮಾನರ ಮಗ ಹೀಗೆ ಇವರ ಸಂಪೂರ್ಣ ಪ್ರೋತ್ಸಾಹ ಇದೆ ಇವರಿಗೆ

ಇವರ ಈ ಸಾಧನೆಗೆ ರಾಜ್ಯ ಮಟ್ಟದ ಪ್ರಶಸ್ತಿಕೂಡ ಇವರ ಮುಡಿಗೇರಿದೆ, ಫೆಬ್ರವರಿ 23ರಂದು ಕಲಾಬ್ದಿ ಎನ್ನುವ ರಾಷ್ಟ್ರ ಮಟ್ಟದ ಪೈಟಿಂಗ್ ಸ್ಪರ್ಧೆ ಗೆ ಆಯ್ಕೆ ಯಾಗಿರುವುದು ನಮ್ಮ ತುಳುನಾಡಿಗೆ ಹೆಮ್ಮೆಯ ವಿಷಯ ಇವರು ಈ ಸ್ಪರ್ಧೆಯಲ್ಲಿ ಗೆದ್ದು ಬರಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಅವಕಾಶ ಸಿಗಲಿ.

ಇವರ ಕನಸು ರಕ್ಷಾ ಆರ್ಟ್ ಎಂಬ ಆರ್ಟ್ ಗ್ಯಾಲರಿ ಮಾಡಿ ಸಣ್ಣ ಸಣ್ಣ ಕ್ಯಾಂಪ್ ಮಾಡಿ ಮಕ್ಕಳಿಗೆ ಆರ್ಟ್ ಕಲಿಸುವ ಇವರ ಕನಸು ನನಸಾಗಲಿ ಇನ್ನಷ್ಟು ಸಾಧನೆ ಮಾಡುವಂತಾಗಲಿ ತುಳುನಾಡ ದೈವ ದೇವರುಗಳ ಅನುಗ್ರಹ ಸದಾ ಇರಲಿ ಒಳ್ಳೆಯದಾಗಲಿ ಎಂದು ಹಾರೈಸುವ

 

ಬರಹ : ✍️ ಪ್ರಶಾಂತ್ ಅಂಚನ್ ಮಸ್ಕತ್ತ್

 


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »