TOP STORIES:

ತನ್ನ ಪ್ರತಿಬೇನ ಜಗತ್ತಿಗೆ ತೋರಿಸುತ್ತಿದ್ದಾರೆ ರಕ್ಷಾ ಪೂಜಾರಿ.


ಮನಸ್ಸಿನ ಭಾವನೆಗಳಿಗೆ ಬಣ್ಣ ತುಂಬಿ ಜೀವ ತುಂಬಾವ ಶಕ್ತಿ ಎಲ್ಲರಲ್ಲಿಯೂ ಇರುವುದಿಲ್ಲ ಇಲ್ಲೊಬಳು ತನ್ನ ಭಾವನೆಗಳಿಗೆ ಬಣ್ಣ ತುಂಬಿ ತನ್ನ ಪ್ರತಿಬೇನ ಜಗತ್ತಿಗೆ ತೋರಿಸುತ್ತಿದ್ದಾರೆ ಅವರೇ ರಕ್ಷಾ ಪೂಜಾರಿ.

ರಮೇಶ್ ಪೂಜಾರಿ ಮತ್ತು ಶಶಿಕಲಾ ಕೋಟ್ಯಾನ್ ದಂಪತಿಗಳ ಇಬ್ಬರು ಮಕ್ಕಳಲ್ಲಿ ಮುದ್ದಿನ ಮಗಳು ರಕ್ಷಾ ಬಡತನ ಇದ್ದರು ತನ್ನ ಪ್ರತಿಭೆಗೆ ಬಡತನ ಇರಲಿಲ್ಲ. ಪ್ರಸ್ತುತ ಬಾಡಿಗೆ ಮನೆಯಲ್ಲಿ ವಾಸಿಸುವ ರಕ್ಷಾರ ತಂದೆ ಅಂಗವಿಕಲತೆಯಿಂದ ಮನೆಯಲಿಯೇ ತಾಯಿಯ ದುಡಿಮೆಯಿಂದ ಜೀವನ ಸಾಗಿಸುವ ಬಡ ಕುಟುಂಬ, ತಮ್ಮ ಪಿ ಯು ಸಿ ಕಲಿಯುತ್ತಿದ್ದಾರೆ. ಇವರು ಪ್ರಾಥಮಿಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು, ಪ್ರೌಢ ಶಿಕ್ಷಣ ಮಹಾದೇವಿ ಪ್ರೌಢ ಶಾಲೆ ಕಾಪು,ಪಿ ಯು ಸಿ ಮತ್ತು ಕಾಲೇಜ್ ಶಿಕ್ಷಣವನ್ನು ದಂಡತೀರ್ಥ ಉಳಿಯರ ಗೋಳಿ ಯಲ್ಲಿ ಪೂರ್ಣಗೊಳಿಸಿದ ರಕ್ಷಾ ಚಿತ್ರ ಕಲೆಯಲ್ಲಿ ದೊಡ್ಡ ಸಾಧನೆ ಮಾಡಬೇಕು ಎನ್ನುವ ಉದ್ದೇಶದಿಂದ ವಿಶುವಲ್ ಆರ್ಟ್ಸ್ ಕಲಿಯಲು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಗೆ ಸೇರಿದರು.

ವಾರ್ಲಿ ಆರ್ಟ್ಸ್, ವಾರ್ಲಿ ವಾಲ್ ಪೈಂಟಿಂಗ್, ಟ್ರೇಡಿಷನಲ್ ಪೈಟಿಂಗ್, ಪಾಟ್ ಪೈಟಿಂಗ್, ಪಾಟ್ರೈಟ್ ಪೈಟಿಂಗ್, ಪಾಟ್ರೈಟ್ ಸ್ಕೆಚ್, ಮತ್ತು ಆಯಿಲ್ ಕಲರ್ ಪೈಟಿಂಗ್ ಮತ್ತು ಎಲ್ಲಾ ತರಹದ ಕ್ಯಾನವಸ್ ಪೈಟಿಂಗ್ ಮಾಡಿ ತನ್ನ ಅದ್ಭುತ ಪ್ರತಿಭೇನ ಜಗತ್ತಿಗೆ ತೋರಿಸಿದ್ದಾರೆ.

ಹಾಗೆಯೇ ಉಡುಪಿಯಲ್ಲಿ ನಡೆದ ಪವರ್ ಪರ್ಬ ಎನ್ನುವ ಎಕ್ಸಿಬಿಷನ್ನಲ್ಲಿ ಪಾಲ್ಗೊಂಡಿದ್ದಾರೆ ಮತ್ತು ಅನೇಕ ಕ್ಯಾಂಪ್ ಗಳಲ್ಲಿ ಹಾಜರಾಗಿದ್ದಾರೆ ಮತ್ತು ಮುಕ್ತ ಟಿವಿ ಯ ಅನ್ವೇಷಣೆ ಕಾರ್ಯಕ್ರಮದಲ್ಲಿಯೂ ಭಾಗವಹಿಸಿದ್ದಾರೆ

ಇವರ ಈ ಸಾಧನೆಗೆ ಮನೋಜ್ ಶೆಟ್ಟಿ ಮತ್ತು ಅಸ್ವಿನಿ ಶೆಟ್ಟಿ ,ಅಶೋಕ್ ದೇವಾಡಿಗ, ಮತ್ತು ಡಾ ಸುರೇಶ ಹಾಗೆಯೇ ಇವರು ಇರುವ ಬಾಡಿಗೆ ಮನೆಯ ಯಜಮಾನರ ಮಗ ಹೀಗೆ ಇವರ ಸಂಪೂರ್ಣ ಪ್ರೋತ್ಸಾಹ ಇದೆ ಇವರಿಗೆ

ಇವರ ಈ ಸಾಧನೆಗೆ ರಾಜ್ಯ ಮಟ್ಟದ ಪ್ರಶಸ್ತಿಕೂಡ ಇವರ ಮುಡಿಗೇರಿದೆ, ಫೆಬ್ರವರಿ 23ರಂದು ಕಲಾಬ್ದಿ ಎನ್ನುವ ರಾಷ್ಟ್ರ ಮಟ್ಟದ ಪೈಟಿಂಗ್ ಸ್ಪರ್ಧೆ ಗೆ ಆಯ್ಕೆ ಯಾಗಿರುವುದು ನಮ್ಮ ತುಳುನಾಡಿಗೆ ಹೆಮ್ಮೆಯ ವಿಷಯ ಇವರು ಈ ಸ್ಪರ್ಧೆಯಲ್ಲಿ ಗೆದ್ದು ಬರಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಅವಕಾಶ ಸಿಗಲಿ.

ಇವರ ಕನಸು ರಕ್ಷಾ ಆರ್ಟ್ ಎಂಬ ಆರ್ಟ್ ಗ್ಯಾಲರಿ ಮಾಡಿ ಸಣ್ಣ ಸಣ್ಣ ಕ್ಯಾಂಪ್ ಮಾಡಿ ಮಕ್ಕಳಿಗೆ ಆರ್ಟ್ ಕಲಿಸುವ ಇವರ ಕನಸು ನನಸಾಗಲಿ ಇನ್ನಷ್ಟು ಸಾಧನೆ ಮಾಡುವಂತಾಗಲಿ ತುಳುನಾಡ ದೈವ ದೇವರುಗಳ ಅನುಗ್ರಹ ಸದಾ ಇರಲಿ ಒಳ್ಳೆಯದಾಗಲಿ ಎಂದು ಹಾರೈಸುವ

 

ಬರಹ : ✍️ ಪ್ರಶಾಂತ್ ಅಂಚನ್ ಮಸ್ಕತ್ತ್

 


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »