TOP STORIES:

FOLLOW US

ತನ್ನ 8ನೇ ವಯಸ್ಸಿನಲ್ಲಿಯೇ ಕಲಾ ಮಾತೆಯನ್ನು ಒಲಿಸಿಕೊಂಡ ಪುಟಾಣಿ ಧೃತಿ ಅಂಚನ್


ತನ್ನ 8ನೇ ವಯಸ್ಸಿನಲ್ಲಿಯೇ ಕಲಾ ಮಾತೆಯನ್ನು ಒಲಿಸಿಕೊಂಡ ಪುಟಾಣಿ ಧೃತಿ ಅಂಚನ್. ಪ್ರಸಾದ್ ಮತ್ತು ಶ್ವೇತಾ ದಂಪತಿಗಳ ಮೊದಲನೆ ಮಗಳು.

ಸಾಧನೆ ಮಾಡಲು ಆತ್ಮ ವಿಶ್ವಾಸ ಬಹಳ ಮುಖ್ಯ. ಆತ್ಮ ವಿಶ್ವಾಸ ಇಲ್ಲದಿದ್ದರೆ ಸಾಧನೆಯ ಗುರಿ ಸೇರಲು ಸಾಧ್ಯವಿಲ್ಲ. ಏನೇ ಅಡ್ಡಿ ಬಂದರು ಎದುರಿಸಿ ನಿಲ್ಲುತ್ತೇವೆ ಎನ್ನುವ ಛಲ ಇದ್ದರೆ ಮಾತ್ರ ಸಾಧನೆಯ ಹಾದಿಯಲ್ಲಿ ನಡೆಯಲು ಸಾಧ್ಯ.ಹೀಗೆ ತನ್ನ ಆತ್ಮ ವಿಶ್ವಾಸದಿಂದ ಸಾಧನೆಯ ಹಾದಿಯಲ್ಲಿ ನಡೆಯುತ್ತಿರುವ ಪುಟಾಣಿ ಪ್ರತಿಭೆ ಧೃತಿ ಅಂಚನ್

ಇವರು ತನ್ನ ವಿದ್ಯಾಭ್ಯಾಸವನ್ನು ಪರಿಜ್ಞಾನ ವಿದ್ಯಾಲಯ ಸೋಮೇಶ್ವರ್ ಉಳ್ಳಾಲ ಇಲ್ಲಿ ಮಾಡುತ್ತಿದ್ದಾರೆ. ಸಣ್ಣ ಪ್ರಾಯದಲ್ಲಿಯೇ ಕ್ಯಾನ್ವಾಸ್ ಪೈಂಟಿಂಗ್ನಲ್ಲಿ ಆಸಕ್ತಿ ಹೊಂದಿರುವ ಇವರಿಗೆ ಯಾವುದೇ ಪ್ರೋತ್ಸಾಹ ಇರಲಿಲ್ಲ ಆದರೂ ಪೈಂಟಿಂಗ್ ಮಾಡುವುದು ಬಿಡಲಿಲ್ಲ. ಇವರ ಈ ಆಸಕ್ತಿ ಗೆ ತಂದೆ ತಾಯಿ ಬೆನ್ನೆಲುಬಾಗಿ ನಿಂತರು.

ಲಾಕ್ಡೌನ್ ಟೈಮ್ ನ ಬಿಡುವಿನ ವೇಳೆಯಲ್ಲಿ ತನ್ನದೇ ರೀತಿಯಲ್ಲಿ ಅನೇಕ ಚಿತ್ರಕಲೆ ಬಿಡಿಸುತ್ತಿದ್ದರು.ಆ ಸಮಯದಲ್ಲಿ ಹಂನ್ಸಲ್ ಡಿಸೋಜ ಇವರು ಧೃತಿ ಕ್ಯಾನ್ವಾಸ್ ಪೈಂಟಿಂಗ್ ತುಂಬಾ ಚೆನ್ನಾಗಿ ಮಾಡುತ್ತಾಳೆ ಅವರತ್ರ ಒಂದು ಕ್ಯಾನ್ವಾಸ್ ಪೈಂಟಿಂಗ್ ಮಾಡಿಸಿ ಎಂದಾಗ,ಅವಾಗ ಧೃತಿಯ ತಾಯಿ ಅವಳು ಯಾವುದೇ ತರಬೇತಿ ಪಡೆದಿಲ್ಲ ಎಂದರು. ಅವರೇ ತರಬೇತಿ ನೀಡುತ್ತೇವೆ ಎಂದು ಧೃತಿಯ ಬೆನ್ನು ತಟ್ಟಿ ಪ್ರೋತ್ಸಾಹ ನೀಡಿದರು. ನಂತರ ಇವರ ಪಯಣ ಹೀಗೆಯೇ ಮುಂದುವರಿಯಿತು ಮೊದಲನೆಯದಾಗಿ ಮಂತ್ರ ದೇವತೆ ಅಪ್ಪೆನ ಪೈಂಟಿಂಗ್ ಮಾಡಿದ ಇವರಿಗೆ ಡ್ಯಾನ್ಸ್ ಟೀಚರ್ ಸೂರಜ್ ಸನಿಲ್ ರವರ ಒಳ್ಳೆಯ ಪ್ರಶಂಸೆ ಪ್ರೋತ್ಸಾಹ ದೊರಕಿತು. ಈ ಪೈಂಟಿಂಗನ್ನು ಅಕ್ಷಯ ಕಲಶರಿಗೆ ತೋರಿಸಿದಾಗ ಅವರು ಅದನ್ನು ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ಲಿ ಹಾಕಿ ಎಲ್ಲರ ಮನ ಮುಟ್ಟುವಂತೆ ಮಾಡಿದರು. ಮತ್ತು ನಮ್ಮ ಬಿಲ್ಲವೆರ್ ಪೇಜ್ ನ ವಿಜೇತ್ ಅಣ್ಣ ಅನೇಕ ಪೇಜ್ ನಲ್ಲಿ ಹಾಕಿದಾಗ ಇನ್ನಷ್ಟು ಪ್ರೇರಣೆ ಧೃತಿಗೆ ದೊರಕಿತು.

ಕೊರಗಜ್ಜ, ಕೋಟಿ ಚೆನ್ನಯ, ಅಪ್ಪೆ ಮಂತ್ರ ದೇವತೆ,ಅಪ್ಪೆ ಉಲ್ಲಾಲ್ದಿ ನ, ನಾರಾಯಣ ಗುರುಗಳ, ಅನೇಕ ಪ್ರಾಣಿ ಪಕ್ಷಿ ಗಳ ಚಿತ್ರವನ್ನು ಬಿಡಿಸಿ ತನ್ನ ಪ್ರತಿಭೆಯನ್ನು ಬೆಳೆಸುತ್ತಿದ್ದಾರೆ. ಇವರು ಬಿಡಿಸಿದ ಅನೇಕ ದೇವರುಗಳ ಚಿತ್ರವನ್ನು ನೋಡಿ ಮನಸೋತು ಅನೇಕರು ಖರೀದಿವನ್ನು ಮಾಡಿದ್ದಾರೆ.

ಹೀಗೆ ಈ ಪುಟಾಣಿಗೆ ಕಲೆಯ ಮೇಲಿರುವ ಆಸಕ್ತಿ ಹೀಗೆಯೇ ಮುಂದುವರಿಯಲಿ ಇನ್ನಷ್ಟು ಒಳ್ಳೆಯ ಚಿತ್ರ ಇವರ ಕೈಯಲ್ಲಿ ಮೂಡಿ ಬರಲಿ ಸರಸ್ವತಿ ದೇವಿಯ ಕೃಪೆ ಯಾವಾಗಲು ಧೃತಿಯ ಮೇಲಿರಲಿ ಇವರ ಕನಸು ನನಸಾಗಲಿ ಎಂದು ಹಾರೈಸುವ.

✍️ :ಪ್ರಶಾಂತ್ ಅಂಚನ್ ಮಸ್ಕತ್ತ್.


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »