TOP STORIES:

FOLLOW US

ತಲೆ ತಿರುಗುವ ಸಮಸ್ಯೆ ಇದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿ


ಸಾಮಾನ್ಯವಾಗಿ ಹಲವಾರು ಜನರಿಗೆ ಆಗಾಗ ತಲೆತಿರುಗುತ್ತದೆ. ವಯಸ್ಸಾದಂತೆ ಇಂತಹ ಸಮಸ್ಯೆಗಳು ಉಂಟಾಗುತ್ತದೆ. ಆದರೆ ಹದಿಹರೆಯದವರಲ್ಲ ಸಹ ಈ ಸಮಸ್ಯೆಗಳು ಉಂಟಾಗುತ್ತದೆ. ಇದು ಯಾವುದೇ ಚಲನೆಯಿಲ್ಲದೆ ಸಂಭವಿಸುತ್ತದೆ. ನಿಮ್ಮ ದೇಹವು ಸಮತೋಲನದಲ್ಲಿ ಇದ್ದರೂ ಸಹ, ನಿಮ್ಮ ಇಂದ್ರಿಯಗಳ ಕಾರಣದಿಂದ ಈ ಸಮಸ್ಯೆ ಉಂಟಾಗುತ್ತದೆ. ಇದ್ದಕ್ಕಿದ್ದಂತೆ ತಲೆಸುತ್ತು ಬಂದಂತಾಗುವುದು, ಸುತ್ತಮುತ್ತಲಿನ ವಾತಾವರಣ ಸಂಪೂರ್ಣ ತಿರುಗಿದಂತೆ ಕಾಣುವುದು ಇದರ ಜೊತೆಗೆ ವಾಕರಿಕೆ, ವಾಂತಿ, ತಾತ್ಕಾಲಿಕವಾಗಿ ಕಿವಿ ಕೇಳಿಸದಿರುವುದು, ಈ ಎಲ್ಲಾ ಸಮಸ್ಯೆಗಳು ವರ್ಟಿಗೋ ರೋಗಲಕ್ಷಣಗಳಲ್ಲಿ ಒಂದಾಗಿವೆ. ಕೆಲವು ಬಾರಿ ಈ ಸಮಸ್ಯೆಗೆ ಮನೆಯಲ್ಲಿ ಚಿಕಿತ್ಸೆ ಪಡೆಯಬಹುದು. ಆದರೆ ಕಲೆವೊಮ್ಮೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.


ಹಾಗಾದ್ರೆ ಈ ಸಮಸ್ಯೆಗೆ ಮನೆಯಲ್ಲಿಯೇ ಪರಿಹಾರ ಕಂಡುಕೊಳ್ಳುವುದು ಹೇಗೆ ಎಂಬುದು ಇಲ್ಲಿದೆ.

ಒತ್ತಡ ನಿರ್ವಹಣೆ ಮಾಡಬೇಕು

ಮೆನಿಯರ್ ಕಾಯಿಲೆ ಸೇರಿದಂತೆ ತಲೆತಿರುಗಲು ಕಾರಣವಾಗುವ ಕೆಲವು ಸಮಸ್ಯೆಗಳು ಒತ್ತಡದಿಂದ ಉಂಟಾಗಬಹುದು. ಒತ್ತಡದ ಸಂದರ್ಭಗಳನ್ನು ಸರಿಯಾಗಿ ನಿರ್ವಹಣೆ ಮಾಡುವುದರಿಂದ ತಲೆತಿರುಗುವುದನ್ನ ಕಡಿಮೆ ಮಾಡಬಹುದು.ಮೊದಲು ನಿಮ್ಮ ಒತ್ತಡಕ್ಕೆ ಕಾರಣವೇನು ಎಂಬುದನ್ನ ತಿಳಿದುಕೊಂಡು ಅದನ್ನು ಹೋಗಲಾಡಿಸಲು ಪ್ರಯತ್ನಿಸಿ.

ಲೆಮೆನ್ ಬಾಮ್

ಲೆಮೆನ್​ ಬಾಮ್​ನಲ್ಲಿರುವ ಆ್ಯಂಟಿ ವೈರಲ್ ಅಂಶಗಳು ಮಾನಸಿಕ ಖಿನ್ನತೆ, ಮಾನಸಿಕ ಆತಂಕ, ಅಧಿಕ ರಕ್ತದ ಒತ್ತಡ, ಮೈಗ್ರೇನ್, ಇನ್ಸೋಮ್ನಿಯಾ, ದೌರ್ಬಲ್ಯ, ವರ್ಟಿಗೊ ಇತ್ಯಾದಿ ಸಮಸ್ಯೆಗಳನ್ನು ಹೋಗಲಾಡಿಸಲು ಸಹಕಾರಿ ಎನ್ನಲಾಗುತ್ತದೆ. ಅಲ್ಲದೇ ನಿಂಬೆಯ ನೀರನ್ನು ಸೇವನೆ ಮಾಡುವುದು ಸಹ ಈ ಸಮಸ್ಯೆಗೆ ಪರಿಹಾರ ನೀಡುತ್ತದೆ ಎನ್ನಲಾಗುತ್ತದೆ. ಹಾಗಾಗಿ ವರ್ಟಿಗೋ ಸಮಸ್ಯೆಯನ್ನು ಅನುಭವಿಸುತ್ತಿರುವವರು ಪ್ರತಿದಿನ ನಿಂಬೆಯ ನೀರನ್ನು ಸೇವನೆ ಮಾಡುವುದು ಉತ್ತಮ.

ಮದ್ಯಪಾನ ಮಾಡಬೇಡಿ

ವೆಸ್ಟಿಬುಲರ್ ಡಿಸಾರ್ಡರ್ಸ್ ಅಸೋಸಿಯೇಷನ್ ​​ಪ್ರಕಾರ, ಕುಡಿಯುವಾಗ ನೀವು ಅನುಭವಿಸುವ ತಲೆತಿರುಗುವಿಕೆಯನ್ನು ಮೀರಿ, ಆಲ್ಕೋಹಾಲ್ ನಿಮ್ಮ ಒಳಗಿನ ಕಿವಿಯಲ್ಲಿ ದ್ರವದ ಸಂಯೋಜನೆಯನ್ನು ಬದಲಾಯಿಸಬಹುದು. ಆಲ್ಕೋಹಾಲ್ ಕೂಡ ನಿಮ್ಮನ್ನು ನಿರ್ಜಲೀಕರಣಗೊಳಿಸುತ್ತದೆ. ಈ ವಿಷಯಗಳು ನಿಮ್ಮ ಸಮತೋಲನದ ಮೇಲೆ ಪರಿಣಾಮ ಬೀರಬಹುದು. ಆಲ್ಕೋಹಾಲ್ ಸೇವನೆಯನ್ನು ಕಡಿಮೆ ಮಾಡುವುದು ಅಥವಾ ಸಂಪೂರ್ಣವಾಗಿ ನಿಲ್ಲಿಸುವುದು ನಿಮ್ಮ ವರ್ಟಿಗೋ ಸಮಸ್ಯೆಗೆ ಪರಿಹಾರ ನೀಡಬಹುದು.

ಹೆಚ್ಚು ನೀರು ಕುಡಿಯಿರಿ

ಕೆಲವೊಮ್ಮೆ ವರ್ಟಿಗೋ ನಿರ್ಜಲೀಕರಣದಿಂದ ಉಂಟಾಗುತ್ತದೆ. ಇದು ನೀವು ಸೋಡಿಯಂ ಸೇವನೆಯನ್ನು ಕಡಿಮೆ ಮಾಡಿದರೆ ಸಹಾಯ ಮಾಡಬಹುದು. ಆದರೆ ಹೈಡ್ರೇಟೆಡ್ ಆಗಿ ಉಳಿಯಲು ಉತ್ತಮ ಮಾರ್ಗವೆಂದರೆ ಸಾಕಷ್ಟು ನೀರು ಕುಡಿಯುವುದು. ನಿಮ್ಮ ನೀರಿನ ಸೇವನೆಯನ್ನು ಮಾಡಿ. ನೀವು ಎಷ್ಟು ನೀರು ಕುಡಿಯುತ್ತಿದ್ದೀರಿ ಎಂಬುದರ ಮೇಲೆ ನಿಮ್ಮ ತಲೆ ತಿರುಗುವಿಕೆ ಕಡಿಮೆಯಾಗುತ್ತದೆ.

ಶುಂಠಿ ತಿನ್ನಿ

ಶುಂಠಿ ತಿನ್ನುದರಿಂದ ಈ ಸಮಸ್ಯೆಗೆ ಮುಕ್ತಿ ಲಭಿಸುತ್ತದೆ. ಇದು ತಲೆಸುತ್ತು ಬರುವಿಕೆ, ಮೈಗ್ರೇನ್ ಸಮಸ್ಯೆ ಹಾಗೂ ಇನ್ನಿತರ ತೊಂದರೆಗಳನ್ನು ಶುಂಠಿ ಚಹಾ ನಿಯಮಿತವಾಗಿ ಸೇವನೆ ಮಾಡುವುದರಿಂದ ಪರಿಹಾರ ಸಿಗುತ್ತದೆ ಎನ್ನಲಾಗುತ್ತದೆ. ಅಲ್ಲದೇ ಕೆಲವು ಬಾರೀ ಲವಂಗ ಮತ್ತು ಕೊತ್ತಂಬರಿ ಬೀಜಗಳ ಬಳಕೆ ಈ ಸಮಸ್ಯೆಗೆ ಪರಿಹಾರ ಎನ್ನಲಾಗುತ್ತದೆ. ಆದರೆ ನಿಮ್ಮ ಸಮಸ್ಯೆ ಹೆಚ್ಚಾಗುತ್ತಿದೆ ಅನಿಸಿದ್ದಲ್ಲಿ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಸಾಕಷ್ಟು ಪ್ರಮಾಣದಲ್ಲಿ ನಿದ್ರೆ ಮಾಡಿ

ನಿದ್ರೆ ಕಡಿಮೆ ಆದಲ್ಲಿ ತಲೆತಿರುಗುವುದು ಹೆಚ್ಚಾಗುತ್ತದೆ. ನೀವು ಮೊದಲ ಬಾರಿಗೆ ವರ್ಟಿಗೋ ಸಮಸ್ಯೆಯನ್ನು ಅನುಭವಿಸುತ್ತಿದ್ದರೆ, ಅದು ಒತ್ತಡ ಅಥವಾ ನಿದ್ರೆಯ ಕೊರತೆಯ ಪರಿಣಾಮವಾಗಿರಬಹುದು. ಹಾಗಾಗಿ ಸರಿಯಾಗಿ ನಿದ್ರೆ ಮಾಡುವುದು ಬಹಳ ಮುಖ್ಯವಾಗುತ್ತದೆ.


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »