TOP STORIES:

ತಲೆ ತಿರುಗುವ ಸಮಸ್ಯೆ ಇದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿ


ಸಾಮಾನ್ಯವಾಗಿ ಹಲವಾರು ಜನರಿಗೆ ಆಗಾಗ ತಲೆತಿರುಗುತ್ತದೆ. ವಯಸ್ಸಾದಂತೆ ಇಂತಹ ಸಮಸ್ಯೆಗಳು ಉಂಟಾಗುತ್ತದೆ. ಆದರೆ ಹದಿಹರೆಯದವರಲ್ಲ ಸಹ ಈ ಸಮಸ್ಯೆಗಳು ಉಂಟಾಗುತ್ತದೆ. ಇದು ಯಾವುದೇ ಚಲನೆಯಿಲ್ಲದೆ ಸಂಭವಿಸುತ್ತದೆ. ನಿಮ್ಮ ದೇಹವು ಸಮತೋಲನದಲ್ಲಿ ಇದ್ದರೂ ಸಹ, ನಿಮ್ಮ ಇಂದ್ರಿಯಗಳ ಕಾರಣದಿಂದ ಈ ಸಮಸ್ಯೆ ಉಂಟಾಗುತ್ತದೆ. ಇದ್ದಕ್ಕಿದ್ದಂತೆ ತಲೆಸುತ್ತು ಬಂದಂತಾಗುವುದು, ಸುತ್ತಮುತ್ತಲಿನ ವಾತಾವರಣ ಸಂಪೂರ್ಣ ತಿರುಗಿದಂತೆ ಕಾಣುವುದು ಇದರ ಜೊತೆಗೆ ವಾಕರಿಕೆ, ವಾಂತಿ, ತಾತ್ಕಾಲಿಕವಾಗಿ ಕಿವಿ ಕೇಳಿಸದಿರುವುದು, ಈ ಎಲ್ಲಾ ಸಮಸ್ಯೆಗಳು ವರ್ಟಿಗೋ ರೋಗಲಕ್ಷಣಗಳಲ್ಲಿ ಒಂದಾಗಿವೆ. ಕೆಲವು ಬಾರಿ ಈ ಸಮಸ್ಯೆಗೆ ಮನೆಯಲ್ಲಿ ಚಿಕಿತ್ಸೆ ಪಡೆಯಬಹುದು. ಆದರೆ ಕಲೆವೊಮ್ಮೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.


ಹಾಗಾದ್ರೆ ಈ ಸಮಸ್ಯೆಗೆ ಮನೆಯಲ್ಲಿಯೇ ಪರಿಹಾರ ಕಂಡುಕೊಳ್ಳುವುದು ಹೇಗೆ ಎಂಬುದು ಇಲ್ಲಿದೆ.

ಒತ್ತಡ ನಿರ್ವಹಣೆ ಮಾಡಬೇಕು

ಮೆನಿಯರ್ ಕಾಯಿಲೆ ಸೇರಿದಂತೆ ತಲೆತಿರುಗಲು ಕಾರಣವಾಗುವ ಕೆಲವು ಸಮಸ್ಯೆಗಳು ಒತ್ತಡದಿಂದ ಉಂಟಾಗಬಹುದು. ಒತ್ತಡದ ಸಂದರ್ಭಗಳನ್ನು ಸರಿಯಾಗಿ ನಿರ್ವಹಣೆ ಮಾಡುವುದರಿಂದ ತಲೆತಿರುಗುವುದನ್ನ ಕಡಿಮೆ ಮಾಡಬಹುದು.ಮೊದಲು ನಿಮ್ಮ ಒತ್ತಡಕ್ಕೆ ಕಾರಣವೇನು ಎಂಬುದನ್ನ ತಿಳಿದುಕೊಂಡು ಅದನ್ನು ಹೋಗಲಾಡಿಸಲು ಪ್ರಯತ್ನಿಸಿ.

ಲೆಮೆನ್ ಬಾಮ್

ಲೆಮೆನ್​ ಬಾಮ್​ನಲ್ಲಿರುವ ಆ್ಯಂಟಿ ವೈರಲ್ ಅಂಶಗಳು ಮಾನಸಿಕ ಖಿನ್ನತೆ, ಮಾನಸಿಕ ಆತಂಕ, ಅಧಿಕ ರಕ್ತದ ಒತ್ತಡ, ಮೈಗ್ರೇನ್, ಇನ್ಸೋಮ್ನಿಯಾ, ದೌರ್ಬಲ್ಯ, ವರ್ಟಿಗೊ ಇತ್ಯಾದಿ ಸಮಸ್ಯೆಗಳನ್ನು ಹೋಗಲಾಡಿಸಲು ಸಹಕಾರಿ ಎನ್ನಲಾಗುತ್ತದೆ. ಅಲ್ಲದೇ ನಿಂಬೆಯ ನೀರನ್ನು ಸೇವನೆ ಮಾಡುವುದು ಸಹ ಈ ಸಮಸ್ಯೆಗೆ ಪರಿಹಾರ ನೀಡುತ್ತದೆ ಎನ್ನಲಾಗುತ್ತದೆ. ಹಾಗಾಗಿ ವರ್ಟಿಗೋ ಸಮಸ್ಯೆಯನ್ನು ಅನುಭವಿಸುತ್ತಿರುವವರು ಪ್ರತಿದಿನ ನಿಂಬೆಯ ನೀರನ್ನು ಸೇವನೆ ಮಾಡುವುದು ಉತ್ತಮ.

ಮದ್ಯಪಾನ ಮಾಡಬೇಡಿ

ವೆಸ್ಟಿಬುಲರ್ ಡಿಸಾರ್ಡರ್ಸ್ ಅಸೋಸಿಯೇಷನ್ ​​ಪ್ರಕಾರ, ಕುಡಿಯುವಾಗ ನೀವು ಅನುಭವಿಸುವ ತಲೆತಿರುಗುವಿಕೆಯನ್ನು ಮೀರಿ, ಆಲ್ಕೋಹಾಲ್ ನಿಮ್ಮ ಒಳಗಿನ ಕಿವಿಯಲ್ಲಿ ದ್ರವದ ಸಂಯೋಜನೆಯನ್ನು ಬದಲಾಯಿಸಬಹುದು. ಆಲ್ಕೋಹಾಲ್ ಕೂಡ ನಿಮ್ಮನ್ನು ನಿರ್ಜಲೀಕರಣಗೊಳಿಸುತ್ತದೆ. ಈ ವಿಷಯಗಳು ನಿಮ್ಮ ಸಮತೋಲನದ ಮೇಲೆ ಪರಿಣಾಮ ಬೀರಬಹುದು. ಆಲ್ಕೋಹಾಲ್ ಸೇವನೆಯನ್ನು ಕಡಿಮೆ ಮಾಡುವುದು ಅಥವಾ ಸಂಪೂರ್ಣವಾಗಿ ನಿಲ್ಲಿಸುವುದು ನಿಮ್ಮ ವರ್ಟಿಗೋ ಸಮಸ್ಯೆಗೆ ಪರಿಹಾರ ನೀಡಬಹುದು.

ಹೆಚ್ಚು ನೀರು ಕುಡಿಯಿರಿ

ಕೆಲವೊಮ್ಮೆ ವರ್ಟಿಗೋ ನಿರ್ಜಲೀಕರಣದಿಂದ ಉಂಟಾಗುತ್ತದೆ. ಇದು ನೀವು ಸೋಡಿಯಂ ಸೇವನೆಯನ್ನು ಕಡಿಮೆ ಮಾಡಿದರೆ ಸಹಾಯ ಮಾಡಬಹುದು. ಆದರೆ ಹೈಡ್ರೇಟೆಡ್ ಆಗಿ ಉಳಿಯಲು ಉತ್ತಮ ಮಾರ್ಗವೆಂದರೆ ಸಾಕಷ್ಟು ನೀರು ಕುಡಿಯುವುದು. ನಿಮ್ಮ ನೀರಿನ ಸೇವನೆಯನ್ನು ಮಾಡಿ. ನೀವು ಎಷ್ಟು ನೀರು ಕುಡಿಯುತ್ತಿದ್ದೀರಿ ಎಂಬುದರ ಮೇಲೆ ನಿಮ್ಮ ತಲೆ ತಿರುಗುವಿಕೆ ಕಡಿಮೆಯಾಗುತ್ತದೆ.

ಶುಂಠಿ ತಿನ್ನಿ

ಶುಂಠಿ ತಿನ್ನುದರಿಂದ ಈ ಸಮಸ್ಯೆಗೆ ಮುಕ್ತಿ ಲಭಿಸುತ್ತದೆ. ಇದು ತಲೆಸುತ್ತು ಬರುವಿಕೆ, ಮೈಗ್ರೇನ್ ಸಮಸ್ಯೆ ಹಾಗೂ ಇನ್ನಿತರ ತೊಂದರೆಗಳನ್ನು ಶುಂಠಿ ಚಹಾ ನಿಯಮಿತವಾಗಿ ಸೇವನೆ ಮಾಡುವುದರಿಂದ ಪರಿಹಾರ ಸಿಗುತ್ತದೆ ಎನ್ನಲಾಗುತ್ತದೆ. ಅಲ್ಲದೇ ಕೆಲವು ಬಾರೀ ಲವಂಗ ಮತ್ತು ಕೊತ್ತಂಬರಿ ಬೀಜಗಳ ಬಳಕೆ ಈ ಸಮಸ್ಯೆಗೆ ಪರಿಹಾರ ಎನ್ನಲಾಗುತ್ತದೆ. ಆದರೆ ನಿಮ್ಮ ಸಮಸ್ಯೆ ಹೆಚ್ಚಾಗುತ್ತಿದೆ ಅನಿಸಿದ್ದಲ್ಲಿ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಸಾಕಷ್ಟು ಪ್ರಮಾಣದಲ್ಲಿ ನಿದ್ರೆ ಮಾಡಿ

ನಿದ್ರೆ ಕಡಿಮೆ ಆದಲ್ಲಿ ತಲೆತಿರುಗುವುದು ಹೆಚ್ಚಾಗುತ್ತದೆ. ನೀವು ಮೊದಲ ಬಾರಿಗೆ ವರ್ಟಿಗೋ ಸಮಸ್ಯೆಯನ್ನು ಅನುಭವಿಸುತ್ತಿದ್ದರೆ, ಅದು ಒತ್ತಡ ಅಥವಾ ನಿದ್ರೆಯ ಕೊರತೆಯ ಪರಿಣಾಮವಾಗಿರಬಹುದು. ಹಾಗಾಗಿ ಸರಿಯಾಗಿ ನಿದ್ರೆ ಮಾಡುವುದು ಬಹಳ ಮುಖ್ಯವಾಗುತ್ತದೆ.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »