TOP STORIES:

ತುಳುನಾಡಿನ ದೈವಾರಾಧನೆ, ಭೂತಾರಾಧನೆ ಫೋಟೋ ವಿಡಿಯೋ ತೆಗೆಯುವವರೇ ಎಚ್ಚರ


ಮಂಗಳೂರು (ಜ. 12):  ತುಳುನಾಡಿನ ದೈವಾರಾಧನೆ ಮತ್ತು ಭೂತಾರಾಧನೆ ವೇಳೆ ಫೋಟೋ ವಿಡಿಯೋ ತೆಗೆಯುವವರೇ ಎಚ್ಚರ. ಇನ್ನು ಮುಂದೆ ಕರಾವಳಿಯ ದೈವ-ದೇವರುಗಳ ಆರಾಧನೆಯ ವೇಳೆ ಚಿತ್ರೀಕರಣ ನಡೆಸದಂತೆ ಹೊಸ ನಿಯಮ ಜಾರಿಗೆ ಬರಲಿದೆ!ಮಂಗಳೂರಿನಲ್ಲಿ ದೈವಗಳ ಅವಹೇಳನದ ಬೆನ್ನಲ್ಲೇ ಹಿಂದೂಪರ ಸಂಘಟನೆಗಳು ಈ ನಿಯಮ ಜಾರಿಗೆ ಒತ್ತಾಯಿಸಿದ್ದು, ಸದ್ಯದಲ್ಲೇ ದೇವಸ್ಥಾನಗಳ ಆಡಳಿತ ಮಂಡಳಿ ಮೂಲಕ ನಿಯಮ ಜಾರಿಗೆ ತರಲು ಸಿದ್ಧತೆ ನಡೆಸಿದೆ.

ಸದ್ಯ ಕರಾವಳಿ ಭಾಗದಲ್ಲಿ ಫೇಸ್ಬುಕ್, ವಾಟ್ಸಾಪ್ ತೆರೆದರೆ ಸಾಕು ಮೊದಲಿಗೆ ಕಣ್ಣಿಗೆ ಬೀಳುವುದೇ ತುಳುನಾಡಿನ ಅತ್ಯಂತ ನಂಬಿಕೆಯ ದೈವಾರಾಧನೆ ಮತ್ತು ಹತ್ತಾರು ದೈವಗಳ ಫೋಟೋಗಳು. ಇದರ ಜೊತೆಗೆ ತುಳುನಾಡಿನ ನಂಬಿಕೆಯ ನೂರಾರು ದೈವಗಳ ಹೆಸರಲ್ಲಿ ಸಾವಿರಾರು ಫೇಸ್ಬುಕ್ ಪೇಜ್ ಗಳು, ಗ್ರೂಪ್ ಸೇರಿದಂತೆ ಒಂದಷ್ಟು ಖಾತೆಗಳು ಚಾಲ್ತಿಯಲ್ಲಿವೆ. ದಿನ ಬೆಳಗಾದರೆ ಸಾಕು ಸೋಶಿಯಲ್ ಮೀಡಿಯಾದಲ್ಲಿ ತುಳುನಾಡಿನ ದೈವಗಳನ್ನು ಚಿತ್ರವಿಚಿತ್ರವಾಗಿ ಸಂಬಂಧವಿಲ್ಲದ ಮ್ಯೂಸಿಕ್ ಗಳನ್ನು ಸೇರಿಸಿ ಸಾಮಾಜಿಕ ತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಇದರ ಜೊತೆಗೆ ಒಂದಿಷ್ಟು ಟ್ರೋಲ್ ಪೇಜ್ ಗಳಲ್ಲಿ ತಮಾಷೆಯ ವಸ್ತುವಾಗಿಯೂ ಈ ದೈವದ ಫೋಟೋ ಮತ್ತು ವಿಡಿಯೋಗಳು ಬಳಕೆಯಾಗ್ತಿದೆ. ಈ ಮಧ್ಯೆ ಇದನ್ನೇ ಬಳಸಿಕೊಂಡ ಅನ್ಯ ಧರ್ಮೀಯರು ಕೂಡ ದೈವಗಳ ಅವಹೇಳನಕ್ಕೆ ಇಳಿದಿದ್ದು, ವಿಟ್ಲದ ಸಾಲೆತ್ತೂರಿನಲ್ಲಿ ನಡೆದ ಕೊರಗಜ್ಜ ದೈವದ ವೇಷ ಹಾಕಿದ ಘಟನೆ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಹೊಸತಾಗಿ ಮದುವೆಯಾದ ಯುವಕ ಸಾಲೆತ್ತೂರಿನ ಹೆಣ್ಣಿನ ಮನೆಗೆ ಬರುವಾಗ ಕೊರಗಜ್ಜನ ವೇಷ ತೊಟ್ಟು ಅಸಭ್ಯವಾಗಿ ವರ್ತಿಸೋ ಮೂಲಕ ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ. ಸದ್ಯ ಈ ವಿಚಾರ ಕರಾವಳಿಯಲ್ಲಿ ಎರಡು ಧರ್ಮಗಳ ಮಧ್ಯೆ ಸಂಘರ್ಷಕ್ಕೆ ಕಾರಣವಾಗಿದ್ದರೂ ಸ್ವತಃ ಮುಸ್ಲಿಂ ಧರ್ಮಗುರುಗಳೇ ಇದನ್ನ ಖಂಡಿಸಿದ್ದಾರೆ. ಅಲ್ಲದೇ ಅನ್ಯಧರ್ಮೀಯರೂ ತುಳುನಾಡಿನ ಆರಾಧ್ಯ ದೈವಗಳನ್ನ ಈ ರೀತಿ ಚಿತ್ರಿಸೋಕೆ ಕಾರಣ ಕೆಲ ಹಿಂದೂಗಳೇ ದೈವಗಳ ಹೆಸರಲ್ಲಿ ಅನಗತ್ಯ ಫೋಟೋ, ವಿಡಿಯೋ ಎಡಿಟ್ ಮಾಡ್ತಿರೋದು ಅನ್ನೋ ಆರೋಪವೂ ಇದೆ. ತುಳುನಾಡಿನಲ್ಲಿ ನಡೆಯೋ ಭೂತ ಕೋಲ, ನೇಮೋತ್ಸವ, ದೈವಾರಾಧನೆ ವೇಳೆ ದೈವಗಳ ಕುಣಿತ, ಆರಾಧನಾ ಕ್ರಮ, ನುಡಿಗಳನ್ನ ವಿಡಿಯೋ ಅಥವಾ ಫೋಟೋ ತೆಗೆದು ಹಲವರು ಸೋಶಿಯಲ್ ಮೀಡಿಯಾಗಳಲ್ಲಿ ಹರಿ ಬಿಡ್ತಿದಾರೆ.

ರೂಪವೇ ಇಲ್ಲದ. ದೈವಗಳಿಗೆ ಆರಾಧನೆ ವೇಳೆ ಪಾತ್ರಿಗಳು ಕಟ್ಟುವ ರೂಪಗಳನ್ನೇ ದೈವದ ಹೆಸರಿನಲ್ಲಿ ಸೋಶಿಯಲ್ ಮೀಡಿಯಾಗಳ ಮೂಲಕ ಮ್ಯೂಸಿಕ್ ಸೇರಿಸಿ ಹರಿ ಬಿಡಲಾಗ್ತಿದೆ. ಹಲವು ವರ್ಷಗಳ ಹಿಂದೆ ದೈವಗಳ ರೂಪ, ಆಕಾರಗಳ ಹೊರತಾಗಿಯೂ ಹಿಂದಿನ ಸಂಪ್ರದಾಯದಂತೆ ಆರಾಧನೆ ನಡೆಯುತ್ತಿತ್ತು. ಆದರೆ ಇದೀಗ ಮೊಬೈಲ್ ಫೋಟೋ, ವಿಡಿಯೋಗಳ ಮೂಲಕ ಕೆಟ್ಟ ಪರಿಪಾಠ ಬೆಳೆದಿದೆ. ಇದರಿಂದಲೇ ಅವುಗಳನ್ನು ನೋಡಿ ಅನ್ಯ ಧರ್ಮದವರು ಕೂಡ ಅಸಭ್ಯವಾಗಿ ವ್ಯಂಗ್ಯ ‌ಮಾಡಿ ಕೊರಗಜ್ಜ ಸೇರಿ ಇತರೆ ದೈವಗಳನ್ನ ಹಾಸ್ಯಕ್ಕೆ ಬಳಸೋ ಆರೋಪವಿದೆ. ಇದೇ ಕಾರಣಕ್ಕೆ ವಿಶ್ವಹಿಂದೂ ಪರಿಷತ್ ಬಜರಂಗದಳ ದೇವಸ್ಥಾನಗಳಲ್ಲಿ ಫೋಟೋ ಮತ್ತು ವಿಡಿಯೋ ನಿಷೇಧಿಸುವ ನಿಯಮ ತರಲು ಆಗ್ರಹಿಸಿದ್ದು,ಎಲ್ಲಾ ಸಿದ್ದತೆ ‌ನಡೆಸಿದೆ..

ಸದ್ಯ ಕರಾವಳಿಯ ಕೆಲ ದೈವಸ್ಥಾನ ಮತ್ತು ದೇವಸ್ಥಾನಗಳಲ್ಲಿ ಫೋಟೋ ಮತ್ತ್ತು ವಿಡಿಯೋ ನಿಷೇಧವಿದ್ದರೂ ಹಲವೆಡೆ ಇದಕ್ಕೆ ನಿರ್ಬಂಧ ಇಲ್ಲ. ದೈವಾರಾಧನೆ ಹಾಗೂ ನೇಮೋತ್ಸವದ ವೇಳೆ ಚಿತ್ರೀಕರಣದ ಅವಕಾಶ ಇದೆ. ಆದರೆ ವಿಟ್ಲದ ಘಟನೆ ಬಳಿಕ ಹಿಂದೂ ಪರ ಸಂಘಟನೆಗಳು ಎಚ್ಚೆತ್ತುಕೊಂಡಿದ್ದು, ಕರಾವಳಿಯ ಸಾವಿರಕ್ಕೂ ಹೆಚ್ಚು ದೈವಸ್ಥಾನಗಳಲ್ಲಿ ಚಿತ್ರೀಕರಣ ನಿಷೇಧದ ನಿಯಮ ರೂಪಿಸಲು ಒತ್ತಾಯಿಸಿದೆ. ಅದರ ಮುಂದಿನ ಭಾಗವಾಗಿ ಸದ್ಯ ಸಂಘಟನೆ ಜಾಗೃತಿ ಕಾರ್ಯಕ್ಕೆ ಮುಂದಾಗಿದ್ದು, ಎಲ್ಲಾ ದೈವಸ್ಥಾನಗಳ ಆಡಳಿತ ಮಂಡಳಿಯನ್ನ ಸಂಪರ್ಕಿಸಿದೆ.

ಅದರಂತೆ ಭೂತ, ನೇಮ ನಡೆಯುವಾಗ ಮತ್ತು ಉಳಿದ ಸಮಯದಲ್ಲೂ ದೈವಸ್ಥಾನಗಳ ಎದುರು ಬ್ಯಾನರ್ ಅಳವಡಿಸಿ ಚಿತ್ರೀಕರಣ ನಿಷೇಧಿಸಲು ನಿಯಮ ರೂಪಿಸಲು ಮುಂದಾಗಿದೆ. ಬಹುತೇಕ ಎಲ್ಲಾ ದೈವಸ್ಥಾನಗಳ ಆಡಳಿತ ಮಂಡಳಿಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದು, ಮುಂದಿನ ತಿಂಗಳಿನಿಂದ ಜಾರಿಗೆ ಬರೋ ಸಾಧ್ಯತೆಯಿದೆ. ಈ ಮೂಲಕ ದೈವಾರಾಧನೆ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿ ಮತ್ತೊಬ್ಬರ ಹಾಸ್ಯದ ವಸ್ತುವಾಗುವುದನ್ನ ತಪ್ಪಿಸಲು ಹಿಂದೂ ಪರ ಸಂಘಟನೆಗಳು ಮುಂದಾಗಿದೆ.

ಇದಕ್ಕೂ ಮೊದಲು ತುಳುನಾಡಿನ ಸಂಘಟನೆಯೊಂದು ದೈವಾರಾಧನೆ ಪ್ರಚಾರ ಮಾಡುವ 72  ಸೋಶಿಯಲ್ ಮೀಡಿಯಾ ಪೇಜ್ ಗಳ ವಿರುಧ್ಧ ಪ್ರಕರಣ ದಾಖಲಿಸಿತ್ತು. ಇಷ್ಟಾದರೂ ಕೆಲವರು ದೈವ ನರ್ತನದ ವಿಡಿಯೋ ಮಾಡಿ ಅದಕ್ಕೆ ಬೇರೆ ಸಿನಿಮಾ ಹಾಡುಗಳನ್ನ ಬಳಸಿ ಎಡಿಟ್ ಮಾಡಿ ಸಾಮಾಜಿಕ ತಾಣಗಳಲ್ಲಿ ಕೆಟ್ಟದಾಗಿ ಚಿತ್ರಿಸುತ್ತಿದ್ದರು. ಇದರ ಪರಿಣಾಮವೇ ಅನ್ಯ ಧರ್ಮೀಯರು ಹಾಗೂ ಬೇರೆ ಜಿಲ್ಲೆಯ ಜನರು ಕೂಡ ತುಳುನಾಡಿನ ಆರಾಧ್ಯ ದೈವಗಳನ್ನ ಕೆಟ್ಟದಾಗಿ ಚಿತ್ರಿಸುತ್ತಿದ್ದಾರೆ ಅನ್ನೋದು ಸಂಘಟನೆಗಳ ವಾದ. ಇನ್ನು ಸಂಘಟನೆಗಳ ಈ ನಡೆಯ ಬಗ್ಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಸಹಮತ ವ್ಯಕ್ತಪಡಿಸಿದ್ದು, ಆದ್ರೆ ಈ‌ ನಿಷೇಧ ವಿಚಾರ ಆಯಾ ದೈವಸ್ಥಾನದ ಆಡಳಿತ ಮಂಡಳಿಗೆ ಬಿಟ್ಟದ್ದು ಅಂದಿದ್ದಾರೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »