TOP STORIES:

FOLLOW US

ತುಳುನಾಡಿನ ಸೇವಾ ಮಾಣಿಕ್ಯ ಸತೀಶ್ ಉಳ್ಳಾಲ್ ದುಬೈ


 

ನಮ್ಮ ತುಳುನಾಡಿನಲ್ಲಿ ಅದೆಷ್ಟೋ ಸೇವಾ ಸಾಧಕರಿದ್ದಾರೆ. ಇವತ್ತು ನಾವು ಪರಿಚಯ ಮಾಡುವ ಸೇವಾ ಮಾಣಿಕ್ಯ ಸತೀಶ್ ಉಳ್ಳಾಲ್ ದುಬೈ.

ಶ್ರೀ ಬಂಟಪ್ಪ ಪೂಜಾರಿ ಮತ್ತು ಶ್ರೀಮತಿ ಮುತ್ತು ಪೂಜಾರಿ ದಂಪತಿಗಳ ಮುದ್ದಿನ ಮೂರನೇ ಮಗ ಸತೀಶ್ ಉಳ್ಳಾಲ್, ಇವರು ಪ್ರಾಥಮಿಕ ಶಿಕ್ಷಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳ್ಳಾಲ ಮತ್ತು ಪ್ರೌಢ ಶಿಕ್ಷಣವನ್ನು ಭಾರತ್ ಪ್ರೌಢ ಶಾಲೆಯಲ್ಲಿ ಉನ್ನತ ಶ್ರೇಣಿಯಲ್ಲಿ ಮುಗಿಸಿರುವರು,ವೃತ್ತಿ ಶಿಕ್ಷಣವನ್ನು (ಡ್ರಾಫ್ಟ್ ಮೆಕ್ಯಾನಿಕ್ )ಕೈಗಾರಿಕ ತರಬೇತಿ ಕೇಂದ್ರ ಕದ್ರಿಯಲ್ಲಿ ಮಾಡಿದರು, 1988ರಲ್ಲಿ ಆಂಗ್ಲ ಭಾಷೆ ಬೆರಳಚ್ಚು ಪರೀಕ್ಷೆಯಲ್ಲಿ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡರು, ಅದಲ್ಲದೆ ಭಾರತನಾಟ್ಯ ಕಲಾವಿದರು ಆಗಿರುವರು. 1994 ರಲ್ಲಿ ಜ್ಯೋತಿ ಕಾಲೇಜ್ ನಲ್ಲಿ ನಡೆದ ಜೂನಿಯರ್ ವಿಭಾಗದ ಪರೀಕ್ಷೆಯನ್ನು ಬರೆದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ, ಮಂಗಳೂರಿನ ಪುರಭವನ, ಹಾಗೂ ಉಡುಪಿಯ ಹಲವಾರು ಕಡೆ ಪ್ರದರ್ಶನ ನೀಡಿ ಜನ ಮೆಚ್ಚುಗೆ ಗಳಿಸಿದ್ದಾರೆ.

ಇವರು ತನ್ನ ವಿದ್ಯಾಭ್ಯಾಸ ಮುಗಿಸಿದ ನಂತರ ಜೀವನಕ್ಕಾಗಿ ಪ್ರೈವೇಟ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡರು, ನಂತರ “ಮಝಗಾಂ ಡಾಕ ” 11ವರ್ಷ ಸೇವೆಯನ್ನು ಸಲ್ಲಿಸಿದ ಇವರು 1995ರಲ್ಲಿ ಅಮೇರಿಕಾ ಮೂಲದ “ಮೆಕ್ಡರ್ ಮೋಟ್ ” ಎಂಬ ಸಂಸ್ಥೆಯಲ್ಲಿ ಸೀನಿಯರ್ ಪ್ರಿನ್ಸಿಪಾಲ್ ಡಿಸೈನರ್ ಆಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಇವರು ಕೇವಲ ತನ್ನ ಏಳಿಗೆಗಾಗಿ ಮಾತ್ರವಲ್ಲದೆ ಸಮಾಜದ ಏಳಿಗೆಯನ್ನು ಬಯಸಿ ಸಮಾಜ ಸೇವೆಯ ಮಾಡುತ್ತ ಒಬ್ಬ ಸಮಾಜದಲ್ಲಿ ಓರ್ವ ಉತ್ತಮ ವ್ಯಕ್ತಿ ಎಂದೆನಿಸಿಕೊಂಡಿರುವರು

ಉಳ್ಳಾಲದ ಗೋಕರ್ಣನಾಥ ಸಂಘದಲ್ಲಿ 10 ವರ್ಷ ಸೇವೆ, ಬಿಲ್ಲವಾಸ್ ದುಬೈ ಸಂಘದಲ್ಲಿ ಸಕ್ರಿಯ ಕಾರ್ಯಕರ್ತರಾಗಿ 16 ವರ್ಷ ಸೇವೆ, ಪ್ರಸ್ತುತ ಅಭಿರುದ್ದಿ ಅಧಿಕಾರಿಯಾಗಿ ಸಂಘದ ಮುಖಾಂತರ ಅನೇಕ ಬಡ ವಿದ್ಯಾರ್ಥಿಗಳಿಗೆ ಹಣದ ಸಹಾಯ ಮಾಡುವುದರಲ್ಲಿ ಮೊದಲಿಗರು ಆಗಿರುತ್ತಾರೆ. ಬಿರ್ವೆರ್ ಕುಡ್ಲ ದುಬೈ ವಿಂಗ್ ಎಸ್ಕ್ಯೂಟ್ ಆಗಿ, ಮಂಗಳೂರು ಫ್ರೆಂಡ್ಸ್ ದುಬೈ ದೋಸ್ತಿ ಸಂಘದಲ್ಲಿ ಅಧ್ಯಕ್ಷರು ಆಗಿ, ದುಬೈ ವರಮಹಾಲಕ್ಷ್ಮಿ ಪೂಜೆಯ ಸಮಿತಿ ಸ್ಥಾಪಕರಾಗಿ, ಯಕ್ಷಗಾನ ಕೂಟ, ನಾಟಕ ರಂಗ ಧ್ವನಿ ಪ್ರತಿಷ್ಠಾನ, ಯಕ್ಷ ಮಿತ್ರರು, ಗಮ್ಮತ್ ಕಲಾವಿದರು, ತುಳು ಪಾತೆರ್ಗ ತುಳು ಒರಿಪಾಗ ಪ್ರಸ್ತುತ ಬಿಲ್ಲವಾಸ್ ದುಬೈ ಇದರ ವಾಯ್ಸ್ ಪ್ರೆಸಿಡೆಂಟ್ ಆಗಿ ಹೀಗೆಯೇ ಅನೇಕ ಸಂಘ ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ

ಇವರು ಮಾಡಿರುವ ಸೇವೆಗೆ ಅನೇಕ ಗೌರವ ಸನ್ಮಾನವನ್ನು ಪಡೆದಿರುತ್ತಾರೆ. ಉಲ್ಲಾಳೆರೆನ ಶ್ರೀ ನಾರಾಯಣ ಗುರು ಸಂಘ ಕಾಟಿಪಳ್ಳ, ವೀರನಾರಾಯಣ ಗೇಮ್ಸ್ ಟೀಮ್ ಕುಲಶೇಖರ, ಬಿಲ್ಲವಾಸ್ ಸಂಘ ದುಬೈ, ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ಸುರತ್ಕಲ್ ಇಂತಹ ಹಲವಾರು ಸಂಸ್ಥೆಗಳಿಂದ ಸನ್ಮಾನಕ್ಕೆ ಭಾಜನರಾಗಿರುತ್ತಾರೆ.
ನಟನೆಯಲ್ಲಿ ಆಸಕ್ತಿ ಹೊಂದಿರ ಇವರು ಕಲಾ ಪೋಷಕರು ಆಗಿ ಪ್ರತಿಭೆಗಳಿಗೆ ಬೆನ್ನು ತಟ್ಟಿ ಪ್ರೋತ್ಸಾಹ ಕೊಟ್ಟು ಸರಸ್ವತಿಯ ಸೇವೆಯನ್ನು ಮಾಡುತ್ತಾ ಇರುವರು
ಬಿಲ್ಲವ ಸಮಾಜ ಏಳಿಗೆ ಮಾತ್ರ ಅಲ್ಲದೆ ಎಲ್ಲಾ ಸಮಾಜದಲ್ಲಿಯೂ ತನ್ನ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿದ್ದಾರೆ
ಇಷ್ಟು ಮಾತ್ರ ಅಲ್ಲದೆ ಗೆಳೆಯರ ಜೊತೆ ಸೇರಿ 6ಹೆಣ್ಣು ಮಕ್ಕಳಿಗೆ ಮದುವೆಗೆ ಮಾಂಗಲ್ಯ ಸರ ಮತ್ತು ಹಣದ ಸಹಾಯ ಮಾಡಿರುವರು, ಅದೆಷ್ಟೋ ಕೂಲಿ ಕಾರ್ಮಿಕರಿಗೆ ಸರಿಯಾದ ಕೆಲಸ ಸಿಗುವ ವರೆಗೆ ಸಂಪೂರ್ಣ ಖರ್ಚು ಶ್ರೀಯುತರು ನೋಡಿಕೊಂಡಿರುತ್ತಾರೆ.
ಹೊರದೇಶದಲ್ಲಿ ತುಳುನಾಡಿನ ಆಚಾರ ವಿಚಾರಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಜನ ಮನ ಗೆದ್ದಿದ್ದ ಇವರು 2012ರಲ್ಲಿ “ಅಪ್ಪೆ ಭಾಷೆ” ಪುಸ್ತಕ 6 ಜನ ಫ್ರೆಂಡ್ಸ್ ಸೇರಿ 2000 ಪುಸ್ತಕ ಬಿಡುಗಡೆ ಮಾಡಿ ಜನರಿಂದ “ತುಳುವ ಮಾಣಿಕ್ಯ” ಎಂಬ ಬಿರುದು ಪಡೆದರು.ದುಬೈನಲ್ಲಿ ನಡೆದ ತುಳು ಪರ್ಬ ಎಂಬ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಸ್ಪರ್ಧೆ ಇವರ ಟೀಮ್ ಬಿಲ್ಲವಾಸ್ ದುಬೈ ಪ್ರಥಮ ಸ್ಥಾನ ಪಡೆದಿರುತ್ತದೆ.

ಕೋರೋಣದಿಂದ ಇಡಿ ಜಗತ್ತೇ ತತ್ತರಿಸಿ ಹೋದ ಸಮಯದಲ್ಲಿ ದುಬೈನಲ್ಲಿ ಬ್ಲಡ್ ಸೆಂಟರ್ ರಕ್ತದ ಅವಶ್ಯಕತೆ ಇರುವಾಗ 60ಜನರ ಕರೆದುಕೊಂಡು ಹೋಗಿ ರಕ್ತದಾನ ಮಾಡಿಸುವಲ್ಲಿ ಯಶಸ್ವೀಯಾಗಿರುವರು
ಮುಗ್ದ ಮನಸ್ಸಿನ ಇವರು ಮಾಡೋ ಸೇವೆಗೆ ತುಳುನಾಡು, ತುಳುಭಾಷೆ ಮೇಲಿರುವ ಅಭಿಮಾನಕ್ಕೆ ದೇವರ ಅನುಗ್ರಹ ಸದಾ ಇರಲಿ ಕಟೀಲು ದುರ್ಗಾ ಪರಮೇಶ್ವರಿ ಅಮ್ಮ ಇವರಿಗೆ ಆರೋಗ್ಯ ಆಯುಷ್ಯ, ಸಂಪತ್ತು, ಎಲ್ಲಾ ಕೊಟ್ಟು ಕಾಪಾಡಲಿ ಇವರ ಸೇವೆ ಹೀಗೆಯೇ ಮುಂದುವರಿಯಲಿ ಎಂದು ಹಾರೈಸುವ

 

ಬರಹ:✍️ ಪ್ರಶಾಂತ್ ಅಂಚನ್ ಮಸ್ಕತ್ತ್


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »