TOP STORIES:

ತುಳುನಾಡ ಗರೋಡಿಗಳ ಅಭಿವೃದ್ಧಿಗೆ ಅನುದಾನ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮ ಖಂಡನೀಯ


ತುಳುನಾಡ ಗರೋಡಿಗಳ ಅಭಿವೃದ್ಧಿಗೆ ಅನುದಾನ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮ ಖಂಡನೀಯ

ಕರ್ನಾಟಕ ಸರಕಾರ ಧಾರ್ಮಿಕ ದತ್ತಿ ಇಲಾಖೆ ವಿವಿಧ ಜಿಲ್ಲೆಗಳಲ್ಲಿನ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ಧಾರ ,ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 2020-21 ಸಾಲಿನ ಅನುದಾನ ಬಿಡುಗಡೆ ಮಾಡಿದೆ.(ಅದೇಶ ಸಂಖ್ಯೆ; ಕಂಇ 38,ಮುಅಬಿ 2020)
ಇದು ಸ್ವಾಗತಾರ್ಹ.ಒಂದೂರಿನ ಧಾರ್ಮಿಕ ಸ್ಥಳಗಳು ಅಭಿವೃದ್ಧಿಯಾದಲ್ಲಿ ಅದು ಊರಿನ ಪ್ರಗತಿಯ ಸಂಕೇತವೆ ಸರಿ.ಆದರೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋಟಿ ಚೆನ್ನಯರನ್ನು ಆರಾಧನೆ ಮಾಡುವ ಗರೋಡಿಗಳ ಸಂಖ್ಯೆ ದೊಡ್ಡದಾಗಿದ್ದು ಇದರಲ್ಲಿ ಅನೇಕ ಗರೋಡಿಗಳು ಅಜೀರ್ಣಾವಸ್ಥೆಯಲ್ಲಿದೆ.ಸರ್ಕಾರದ ಈ ವರ್ಷದ ಅನುದಾನ ಪಟ್ಟಿಯಲ್ಲಿ ಮೂಡಬಿದ್ರೆ ಭಾಗದ ಕೇವಲ ಒಂದು ಗರೋಡಿಗೆ ಐದು ಲಕ್ಷ ರೂಪಾಯಿ ಅನುದಾನ ಘೋಷಿಸಿದ್ದು ಬಿಟ್ಟರೆ ಬೇರೆ ಯಾವ ಗರೋಡಿಗೂ ಏನೂ ಇಲ್ಲ.ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಬರದೇ ಇರುವ ಇತರ ದೈವಸ್ಥಾನ,ಮಠ,ಮಂದಿರಗಳಿಗೆ ಅನುದಾನ ನೀಡಬಹುದಾದರೆ ಗರೋಡಿಯ ನಿರ್ಲಕ್ಷ್ಯ ಯಾಕೆ..? 436 ಧಾರ್ಮಿಕ ಸ್ಥಳಗಳಿಗೆ 800 ಲಕ್ಷ ನೀಡಿರುವುದಕ್ಕೆ ಅಕ್ಷೇಪವಲ್ಲ.ಇದರಲ್ಲಿ ಗರೋಡಿ ಮಾತ್ರ ನಿಮಗೆ ಹೊರತಾಯಿತೆ..?
ಗರೋಡಿ ಈ ಭಾಗದ ಜನರ ನಂಬಿಕೆ ಮತ್ತು ಆರಾಧನೆಯ ಪ್ರತೀಕ.ಈ ಕ್ಷೇತ್ರಕ್ಕೆ ಮಹತ್ವಪೂರ್ಣ ಹಿನ್ನೆಲೆಯಿದೆ.ಯಾವುದೇ ರಾಜಕೀಯ ಪಕ್ಷವಾಗಲಿ,ಜನಪ್ರತಿನಿಧಿಗಳಾಗಲಿ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಕೋಟಿ ಚೆನ್ನಯರು,ಹಾಗೂ ಬಿಲ್ಲವ ಸಮಾಜದ ಕುರಿತು ಉಲ್ಲೇಖ ಮಾಡಿ ವೋಟ್‌ಬ್ಯಾಂಕ್‌ಗೋಸ್ಕರ ನಡೆಯುವ ಗಿಮಿಕ್‌ಗಳು ಇನ್ನಾದರೂ ನಿಲ್ಲಬೇಕು.ಸಾಮರಸ್ಯ ಮತ್ತು ಸತ್ಯದ ಪ್ರತೀಕವಾದ ಎಲ್ಲಾ ಗರೋಡಿಗಳ ಅಭಿವೃದ್ಧಿಗೆ ಮತ್ತು ವಾರ್ಷಿಕ ಆರಾಧನ ಕಾರ್ಯಕ್ರಮಗಳಿಗೆ ಅನುದಾನ ಘೋಷಿಸಬೇಕು‌.ಮತ್ತು ಯಾವ ಗರೋಡಿಗಳ ಸ್ಥಳದ ಕುರಿತಾಗಿ ತಕರಾರುಗಳಿದೆಯೋ ಅದೆಲ್ಲದಕ್ಕೂ ಸಂಬಂಧಿಸಿ ಗ್ರಾಮದ ಹತ್ತು ಸಮಸ್ತರ ಆಡಳಿತ ಮಂಡಳಿಯ ತೀರ್ಮಾನಕ್ಕೆ ಆದ್ಯತೆಯ ನಿಯಮಗಳನ್ನು ರೂಪಿಸಬೇಕು.ಈಗ ಧಾರ್ಮಿಕ ಮಂತ್ರಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗರೋಡಿಯ ಹಿನ್ನೆಲೆ ,ಅಲ್ಲಿನ ಅದಾಯ ಪರಿಸ್ಥಿತಿ,ಅಜೀರ್ಣಾವಸ್ಥೆ ,ಸ್ವಂತ ಸ್ಥಳದ ಸಮಸ್ಯೆ ಇವೆಲ್ಲವೂ ಖುದ್ದು ತಿಳಿದಿದ್ದು ಅದರೂ ಸರ್ಕಾರ ಈ ಮಟ್ಟದಲ್ಲಿ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ.ಯಾವುದೇ ಸರ್ಕಾರವಾಗಲಿ ಪುಣ್ಯಪುರುಷರು ನೆಲೆಸಿದ ಗರೋಡಿಗೆ ಅನುದಾನವನ್ನು ನೀಡಲೇ ಬೇಕೆಂಬುದು ನಮ್ಮ ಒತ್ತಾಯವಾಗಿದೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ (ರಿ)


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »