TOP STORIES:

ತುಳುನಾಡ ಗರೋಡಿಗಳ ಅಭಿವೃದ್ಧಿಗೆ ಅನುದಾನ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮ ಖಂಡನೀಯ


ತುಳುನಾಡ ಗರೋಡಿಗಳ ಅಭಿವೃದ್ಧಿಗೆ ಅನುದಾನ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮ ಖಂಡನೀಯ

ಕರ್ನಾಟಕ ಸರಕಾರ ಧಾರ್ಮಿಕ ದತ್ತಿ ಇಲಾಖೆ ವಿವಿಧ ಜಿಲ್ಲೆಗಳಲ್ಲಿನ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ಧಾರ ,ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 2020-21 ಸಾಲಿನ ಅನುದಾನ ಬಿಡುಗಡೆ ಮಾಡಿದೆ.(ಅದೇಶ ಸಂಖ್ಯೆ; ಕಂಇ 38,ಮುಅಬಿ 2020)
ಇದು ಸ್ವಾಗತಾರ್ಹ.ಒಂದೂರಿನ ಧಾರ್ಮಿಕ ಸ್ಥಳಗಳು ಅಭಿವೃದ್ಧಿಯಾದಲ್ಲಿ ಅದು ಊರಿನ ಪ್ರಗತಿಯ ಸಂಕೇತವೆ ಸರಿ.ಆದರೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋಟಿ ಚೆನ್ನಯರನ್ನು ಆರಾಧನೆ ಮಾಡುವ ಗರೋಡಿಗಳ ಸಂಖ್ಯೆ ದೊಡ್ಡದಾಗಿದ್ದು ಇದರಲ್ಲಿ ಅನೇಕ ಗರೋಡಿಗಳು ಅಜೀರ್ಣಾವಸ್ಥೆಯಲ್ಲಿದೆ.ಸರ್ಕಾರದ ಈ ವರ್ಷದ ಅನುದಾನ ಪಟ್ಟಿಯಲ್ಲಿ ಮೂಡಬಿದ್ರೆ ಭಾಗದ ಕೇವಲ ಒಂದು ಗರೋಡಿಗೆ ಐದು ಲಕ್ಷ ರೂಪಾಯಿ ಅನುದಾನ ಘೋಷಿಸಿದ್ದು ಬಿಟ್ಟರೆ ಬೇರೆ ಯಾವ ಗರೋಡಿಗೂ ಏನೂ ಇಲ್ಲ.ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಬರದೇ ಇರುವ ಇತರ ದೈವಸ್ಥಾನ,ಮಠ,ಮಂದಿರಗಳಿಗೆ ಅನುದಾನ ನೀಡಬಹುದಾದರೆ ಗರೋಡಿಯ ನಿರ್ಲಕ್ಷ್ಯ ಯಾಕೆ..? 436 ಧಾರ್ಮಿಕ ಸ್ಥಳಗಳಿಗೆ 800 ಲಕ್ಷ ನೀಡಿರುವುದಕ್ಕೆ ಅಕ್ಷೇಪವಲ್ಲ.ಇದರಲ್ಲಿ ಗರೋಡಿ ಮಾತ್ರ ನಿಮಗೆ ಹೊರತಾಯಿತೆ..?
ಗರೋಡಿ ಈ ಭಾಗದ ಜನರ ನಂಬಿಕೆ ಮತ್ತು ಆರಾಧನೆಯ ಪ್ರತೀಕ.ಈ ಕ್ಷೇತ್ರಕ್ಕೆ ಮಹತ್ವಪೂರ್ಣ ಹಿನ್ನೆಲೆಯಿದೆ.ಯಾವುದೇ ರಾಜಕೀಯ ಪಕ್ಷವಾಗಲಿ,ಜನಪ್ರತಿನಿಧಿಗಳಾಗಲಿ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಕೋಟಿ ಚೆನ್ನಯರು,ಹಾಗೂ ಬಿಲ್ಲವ ಸಮಾಜದ ಕುರಿತು ಉಲ್ಲೇಖ ಮಾಡಿ ವೋಟ್‌ಬ್ಯಾಂಕ್‌ಗೋಸ್ಕರ ನಡೆಯುವ ಗಿಮಿಕ್‌ಗಳು ಇನ್ನಾದರೂ ನಿಲ್ಲಬೇಕು.ಸಾಮರಸ್ಯ ಮತ್ತು ಸತ್ಯದ ಪ್ರತೀಕವಾದ ಎಲ್ಲಾ ಗರೋಡಿಗಳ ಅಭಿವೃದ್ಧಿಗೆ ಮತ್ತು ವಾರ್ಷಿಕ ಆರಾಧನ ಕಾರ್ಯಕ್ರಮಗಳಿಗೆ ಅನುದಾನ ಘೋಷಿಸಬೇಕು‌.ಮತ್ತು ಯಾವ ಗರೋಡಿಗಳ ಸ್ಥಳದ ಕುರಿತಾಗಿ ತಕರಾರುಗಳಿದೆಯೋ ಅದೆಲ್ಲದಕ್ಕೂ ಸಂಬಂಧಿಸಿ ಗ್ರಾಮದ ಹತ್ತು ಸಮಸ್ತರ ಆಡಳಿತ ಮಂಡಳಿಯ ತೀರ್ಮಾನಕ್ಕೆ ಆದ್ಯತೆಯ ನಿಯಮಗಳನ್ನು ರೂಪಿಸಬೇಕು.ಈಗ ಧಾರ್ಮಿಕ ಮಂತ್ರಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗರೋಡಿಯ ಹಿನ್ನೆಲೆ ,ಅಲ್ಲಿನ ಅದಾಯ ಪರಿಸ್ಥಿತಿ,ಅಜೀರ್ಣಾವಸ್ಥೆ ,ಸ್ವಂತ ಸ್ಥಳದ ಸಮಸ್ಯೆ ಇವೆಲ್ಲವೂ ಖುದ್ದು ತಿಳಿದಿದ್ದು ಅದರೂ ಸರ್ಕಾರ ಈ ಮಟ್ಟದಲ್ಲಿ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ.ಯಾವುದೇ ಸರ್ಕಾರವಾಗಲಿ ಪುಣ್ಯಪುರುಷರು ನೆಲೆಸಿದ ಗರೋಡಿಗೆ ಅನುದಾನವನ್ನು ನೀಡಲೇ ಬೇಕೆಂಬುದು ನಮ್ಮ ಒತ್ತಾಯವಾಗಿದೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ (ರಿ)


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »