TOP STORIES:

ತುಳುನಾಡ ಗರೋಡಿಗಳ ಅಭಿವೃದ್ಧಿಗೆ ಅನುದಾನ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮ ಖಂಡನೀಯ


ತುಳುನಾಡ ಗರೋಡಿಗಳ ಅಭಿವೃದ್ಧಿಗೆ ಅನುದಾನ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮ ಖಂಡನೀಯ

ಕರ್ನಾಟಕ ಸರಕಾರ ಧಾರ್ಮಿಕ ದತ್ತಿ ಇಲಾಖೆ ವಿವಿಧ ಜಿಲ್ಲೆಗಳಲ್ಲಿನ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ಧಾರ ,ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 2020-21 ಸಾಲಿನ ಅನುದಾನ ಬಿಡುಗಡೆ ಮಾಡಿದೆ.(ಅದೇಶ ಸಂಖ್ಯೆ; ಕಂಇ 38,ಮುಅಬಿ 2020)
ಇದು ಸ್ವಾಗತಾರ್ಹ.ಒಂದೂರಿನ ಧಾರ್ಮಿಕ ಸ್ಥಳಗಳು ಅಭಿವೃದ್ಧಿಯಾದಲ್ಲಿ ಅದು ಊರಿನ ಪ್ರಗತಿಯ ಸಂಕೇತವೆ ಸರಿ.ಆದರೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋಟಿ ಚೆನ್ನಯರನ್ನು ಆರಾಧನೆ ಮಾಡುವ ಗರೋಡಿಗಳ ಸಂಖ್ಯೆ ದೊಡ್ಡದಾಗಿದ್ದು ಇದರಲ್ಲಿ ಅನೇಕ ಗರೋಡಿಗಳು ಅಜೀರ್ಣಾವಸ್ಥೆಯಲ್ಲಿದೆ.ಸರ್ಕಾರದ ಈ ವರ್ಷದ ಅನುದಾನ ಪಟ್ಟಿಯಲ್ಲಿ ಮೂಡಬಿದ್ರೆ ಭಾಗದ ಕೇವಲ ಒಂದು ಗರೋಡಿಗೆ ಐದು ಲಕ್ಷ ರೂಪಾಯಿ ಅನುದಾನ ಘೋಷಿಸಿದ್ದು ಬಿಟ್ಟರೆ ಬೇರೆ ಯಾವ ಗರೋಡಿಗೂ ಏನೂ ಇಲ್ಲ.ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಬರದೇ ಇರುವ ಇತರ ದೈವಸ್ಥಾನ,ಮಠ,ಮಂದಿರಗಳಿಗೆ ಅನುದಾನ ನೀಡಬಹುದಾದರೆ ಗರೋಡಿಯ ನಿರ್ಲಕ್ಷ್ಯ ಯಾಕೆ..? 436 ಧಾರ್ಮಿಕ ಸ್ಥಳಗಳಿಗೆ 800 ಲಕ್ಷ ನೀಡಿರುವುದಕ್ಕೆ ಅಕ್ಷೇಪವಲ್ಲ.ಇದರಲ್ಲಿ ಗರೋಡಿ ಮಾತ್ರ ನಿಮಗೆ ಹೊರತಾಯಿತೆ..?
ಗರೋಡಿ ಈ ಭಾಗದ ಜನರ ನಂಬಿಕೆ ಮತ್ತು ಆರಾಧನೆಯ ಪ್ರತೀಕ.ಈ ಕ್ಷೇತ್ರಕ್ಕೆ ಮಹತ್ವಪೂರ್ಣ ಹಿನ್ನೆಲೆಯಿದೆ.ಯಾವುದೇ ರಾಜಕೀಯ ಪಕ್ಷವಾಗಲಿ,ಜನಪ್ರತಿನಿಧಿಗಳಾಗಲಿ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಕೋಟಿ ಚೆನ್ನಯರು,ಹಾಗೂ ಬಿಲ್ಲವ ಸಮಾಜದ ಕುರಿತು ಉಲ್ಲೇಖ ಮಾಡಿ ವೋಟ್‌ಬ್ಯಾಂಕ್‌ಗೋಸ್ಕರ ನಡೆಯುವ ಗಿಮಿಕ್‌ಗಳು ಇನ್ನಾದರೂ ನಿಲ್ಲಬೇಕು.ಸಾಮರಸ್ಯ ಮತ್ತು ಸತ್ಯದ ಪ್ರತೀಕವಾದ ಎಲ್ಲಾ ಗರೋಡಿಗಳ ಅಭಿವೃದ್ಧಿಗೆ ಮತ್ತು ವಾರ್ಷಿಕ ಆರಾಧನ ಕಾರ್ಯಕ್ರಮಗಳಿಗೆ ಅನುದಾನ ಘೋಷಿಸಬೇಕು‌.ಮತ್ತು ಯಾವ ಗರೋಡಿಗಳ ಸ್ಥಳದ ಕುರಿತಾಗಿ ತಕರಾರುಗಳಿದೆಯೋ ಅದೆಲ್ಲದಕ್ಕೂ ಸಂಬಂಧಿಸಿ ಗ್ರಾಮದ ಹತ್ತು ಸಮಸ್ತರ ಆಡಳಿತ ಮಂಡಳಿಯ ತೀರ್ಮಾನಕ್ಕೆ ಆದ್ಯತೆಯ ನಿಯಮಗಳನ್ನು ರೂಪಿಸಬೇಕು.ಈಗ ಧಾರ್ಮಿಕ ಮಂತ್ರಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗರೋಡಿಯ ಹಿನ್ನೆಲೆ ,ಅಲ್ಲಿನ ಅದಾಯ ಪರಿಸ್ಥಿತಿ,ಅಜೀರ್ಣಾವಸ್ಥೆ ,ಸ್ವಂತ ಸ್ಥಳದ ಸಮಸ್ಯೆ ಇವೆಲ್ಲವೂ ಖುದ್ದು ತಿಳಿದಿದ್ದು ಅದರೂ ಸರ್ಕಾರ ಈ ಮಟ್ಟದಲ್ಲಿ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ.ಯಾವುದೇ ಸರ್ಕಾರವಾಗಲಿ ಪುಣ್ಯಪುರುಷರು ನೆಲೆಸಿದ ಗರೋಡಿಗೆ ಅನುದಾನವನ್ನು ನೀಡಲೇ ಬೇಕೆಂಬುದು ನಮ್ಮ ಒತ್ತಾಯವಾಗಿದೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ (ರಿ)


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »