TOP STORIES:

FOLLOW US

ತುಳುನಾಡ ಗರೋಡಿಗಳ ಅಭಿವೃದ್ಧಿಗೆ ಅನುದಾನ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮ ಖಂಡನೀಯ


ತುಳುನಾಡ ಗರೋಡಿಗಳ ಅಭಿವೃದ್ಧಿಗೆ ಅನುದಾನ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮ ಖಂಡನೀಯ

ಕರ್ನಾಟಕ ಸರಕಾರ ಧಾರ್ಮಿಕ ದತ್ತಿ ಇಲಾಖೆ ವಿವಿಧ ಜಿಲ್ಲೆಗಳಲ್ಲಿನ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ಧಾರ ,ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 2020-21 ಸಾಲಿನ ಅನುದಾನ ಬಿಡುಗಡೆ ಮಾಡಿದೆ.(ಅದೇಶ ಸಂಖ್ಯೆ; ಕಂಇ 38,ಮುಅಬಿ 2020)
ಇದು ಸ್ವಾಗತಾರ್ಹ.ಒಂದೂರಿನ ಧಾರ್ಮಿಕ ಸ್ಥಳಗಳು ಅಭಿವೃದ್ಧಿಯಾದಲ್ಲಿ ಅದು ಊರಿನ ಪ್ರಗತಿಯ ಸಂಕೇತವೆ ಸರಿ.ಆದರೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋಟಿ ಚೆನ್ನಯರನ್ನು ಆರಾಧನೆ ಮಾಡುವ ಗರೋಡಿಗಳ ಸಂಖ್ಯೆ ದೊಡ್ಡದಾಗಿದ್ದು ಇದರಲ್ಲಿ ಅನೇಕ ಗರೋಡಿಗಳು ಅಜೀರ್ಣಾವಸ್ಥೆಯಲ್ಲಿದೆ.ಸರ್ಕಾರದ ಈ ವರ್ಷದ ಅನುದಾನ ಪಟ್ಟಿಯಲ್ಲಿ ಮೂಡಬಿದ್ರೆ ಭಾಗದ ಕೇವಲ ಒಂದು ಗರೋಡಿಗೆ ಐದು ಲಕ್ಷ ರೂಪಾಯಿ ಅನುದಾನ ಘೋಷಿಸಿದ್ದು ಬಿಟ್ಟರೆ ಬೇರೆ ಯಾವ ಗರೋಡಿಗೂ ಏನೂ ಇಲ್ಲ.ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಬರದೇ ಇರುವ ಇತರ ದೈವಸ್ಥಾನ,ಮಠ,ಮಂದಿರಗಳಿಗೆ ಅನುದಾನ ನೀಡಬಹುದಾದರೆ ಗರೋಡಿಯ ನಿರ್ಲಕ್ಷ್ಯ ಯಾಕೆ..? 436 ಧಾರ್ಮಿಕ ಸ್ಥಳಗಳಿಗೆ 800 ಲಕ್ಷ ನೀಡಿರುವುದಕ್ಕೆ ಅಕ್ಷೇಪವಲ್ಲ.ಇದರಲ್ಲಿ ಗರೋಡಿ ಮಾತ್ರ ನಿಮಗೆ ಹೊರತಾಯಿತೆ..?
ಗರೋಡಿ ಈ ಭಾಗದ ಜನರ ನಂಬಿಕೆ ಮತ್ತು ಆರಾಧನೆಯ ಪ್ರತೀಕ.ಈ ಕ್ಷೇತ್ರಕ್ಕೆ ಮಹತ್ವಪೂರ್ಣ ಹಿನ್ನೆಲೆಯಿದೆ.ಯಾವುದೇ ರಾಜಕೀಯ ಪಕ್ಷವಾಗಲಿ,ಜನಪ್ರತಿನಿಧಿಗಳಾಗಲಿ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಕೋಟಿ ಚೆನ್ನಯರು,ಹಾಗೂ ಬಿಲ್ಲವ ಸಮಾಜದ ಕುರಿತು ಉಲ್ಲೇಖ ಮಾಡಿ ವೋಟ್‌ಬ್ಯಾಂಕ್‌ಗೋಸ್ಕರ ನಡೆಯುವ ಗಿಮಿಕ್‌ಗಳು ಇನ್ನಾದರೂ ನಿಲ್ಲಬೇಕು.ಸಾಮರಸ್ಯ ಮತ್ತು ಸತ್ಯದ ಪ್ರತೀಕವಾದ ಎಲ್ಲಾ ಗರೋಡಿಗಳ ಅಭಿವೃದ್ಧಿಗೆ ಮತ್ತು ವಾರ್ಷಿಕ ಆರಾಧನ ಕಾರ್ಯಕ್ರಮಗಳಿಗೆ ಅನುದಾನ ಘೋಷಿಸಬೇಕು‌.ಮತ್ತು ಯಾವ ಗರೋಡಿಗಳ ಸ್ಥಳದ ಕುರಿತಾಗಿ ತಕರಾರುಗಳಿದೆಯೋ ಅದೆಲ್ಲದಕ್ಕೂ ಸಂಬಂಧಿಸಿ ಗ್ರಾಮದ ಹತ್ತು ಸಮಸ್ತರ ಆಡಳಿತ ಮಂಡಳಿಯ ತೀರ್ಮಾನಕ್ಕೆ ಆದ್ಯತೆಯ ನಿಯಮಗಳನ್ನು ರೂಪಿಸಬೇಕು.ಈಗ ಧಾರ್ಮಿಕ ಮಂತ್ರಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗರೋಡಿಯ ಹಿನ್ನೆಲೆ ,ಅಲ್ಲಿನ ಅದಾಯ ಪರಿಸ್ಥಿತಿ,ಅಜೀರ್ಣಾವಸ್ಥೆ ,ಸ್ವಂತ ಸ್ಥಳದ ಸಮಸ್ಯೆ ಇವೆಲ್ಲವೂ ಖುದ್ದು ತಿಳಿದಿದ್ದು ಅದರೂ ಸರ್ಕಾರ ಈ ಮಟ್ಟದಲ್ಲಿ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ.ಯಾವುದೇ ಸರ್ಕಾರವಾಗಲಿ ಪುಣ್ಯಪುರುಷರು ನೆಲೆಸಿದ ಗರೋಡಿಗೆ ಅನುದಾನವನ್ನು ನೀಡಲೇ ಬೇಕೆಂಬುದು ನಮ್ಮ ಒತ್ತಾಯವಾಗಿದೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ (ರಿ)


Share:

More Posts

Category

Send Us A Message

Related Posts

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »

ಮಹಾ ಕುಂಭಮೇಳ: ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ ಕರ್ನಾಟಕಕ್ಕೆ ಸಂದ ಮೊದಲ ಗೌರವ


Share       ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31 ರಂದು ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಬಮೇಳದಲ್ಲಿ ಉತ್ತರ


Read More »

ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ


Share       ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು


Read More »