TOP STORIES:

FOLLOW US

ತುಳುನಾಡ ತಲೈವ- ಅರವಿಂದ್ ಬೋಳಾರ್


 

ಇತ್ತೀಚಿಗಿನ ಕೆಲ ವರ್ಷಗಳಿಂದ ತುಳುನಾಡಿನ ಸಿನೆಮಾ, ಸೀರಿಯಲ್, ಟಿವಿ ಕಾರ್ಯಕ್ರಮಗಳ ಕ್ಷೇತ್ರದಲ್ಲಿ ಅರವಿಂದ್ ಬೋಳಾರ್ ಅವರದ್ದೇ ಹವಾ. ಸೌಮ್ಯ ವೆಕ್ತಿತ್ವ, ಅಜಾತ ಶತ್ರು, ಯಾವುದೇ ಪಾತ್ರಗಳನ್ನು ಲೀಲಾಜಾಲವಾಗಿ ನಿಭಾಯಿಸುವ ಸಾಮರ್ಥ್ಯ, ಅದಲ್ಲದೇ ಸಮಾಜದಲ್ಲಿನ ಕೆಡುಕುಗಳ ವಿರುದ್ಧ ಕಪಟತನವಿಲ್ಲದೆ ಮುಕ್ತವಾಗಿ ಮಾತಾನಾಡುವ ಧೈರ್ಯ ಹೊಂದಿರುವ ಬೋಳಾರರು ಇದೀಗ ತುಳುನಾಡ ತಲೈವ ಎಂದೇ ಪರಿಗಣಿಸಲ್ಪಟ್ಟಿದ್ದಾರೆ. ಬೋಳಾರ್ ಅವರ ಮುಗ್ದ ಹಾಸ್ಯಕ್ಕೆ ಮಾರು ಹೋಗದವರು ಕನ್ನಡ ಕರಾವಳಿಯಲ್ಲಿ ಯಾರೂ ಇರಲಾರರು.


ಕರಾವಳಿಯಲ್ಲಿ ಇದೀಗ ಸಿನೇಮಾ ನಿರ್ದೇಶಕನೊಬ್ಬ ಸಿನೆಮಾ ಮಾಡಲು ಹೊರಟಿದ್ದಾನೆಂದರೆ ಆತ ಮಾಡುವ ಮೊದಲ ಕೆಲಸ ಅರವಿಂದ್ ಬೋಳಾರ್ ಅವರ ಅಶೀರ್ವಾದ ಬೇಡಿ ಅವರೊಂದಿಗೆ ಚಿತ್ರದ ಬಗ್ಗೆ ಚರ್ಚಿಸುವುದು. ಇಲ್ಲಿ ಸಿನೆಮಾದಲ್ಲಿ ಬೋಳಾರರು ಅಭಿನಯ ಮಾಡ್ತಾರೋ, ಇಲ್ಲವೋ ಎಂಬ ಪ್ರಶ್ನೆಗೆ ಎಡೆಯಿಲ್ಲ. ಬದಲಾಗಿ ಅವರ ನಗುಮುಖದ ಆಶೀರ್ವಾದವಿದ್ದರೆ ಯಾವುದೇ ಸಿನೇಮಾ ಇರಲಿ ಅದು ಜನರಿಗೆ ಹಚ್ಚಿಕೊಂಡು ಬಿಡುತ್ತದೆ ಎಂದು ನಿರ್ದೇಶಕರ, ನಿರ್ಮಾಪಕರ ನಂಬಿಕೆ.


ಕೋಸ್ಟಲ್ ವುಡ್ಡಿನಲ್ಲಿ ಅರವಿಂದ್ ಬೋಳಾರ್ ಇಂದು ಒಂದು ವಿಶೇಷ ಶಕ್ತಿ. ಪೋಸ್ಟರಿನಲ್ಲಿ ಅಥಾವಾ ಪ್ರಚಾರದ ವೇಳೆ ಬೋಳಾರ್ ಅವರ ಚಿತ್ರ ಕಂಡರೆ ಕರಾವಳಿಗರು ತಕ್ಷಣ ಸಿನೆಮಾ ನೋಡಲೇ ಬೇಕು ಎಂಬ ನಿರ್ಧಾರಕ್ಕೆ ಬರುತ್ತಾರೆ. ಇಂದು ಅರವಿಂದ್ ಬೋಳಾರ್ ಕರಾವಳಿಯಲ್ಲಿ ಅತೀ ಹೆಚ್ಚಿನ ಅಭಿಮಾನಿಗಳನ್ನು ಹೊಂದಿರುವ ಕಲಾವಿದ.

ಅರಂವಿದ್ ಅವರ ಮುಖವನ್ನಿಟ್ಟುಕೊಂಡೇ ಪ್ರಚಾರ ಗಿಟ್ಟಿಸಿಕೊಳ್ಳುವ ಫೇಸ್ ಬುಕ್ಕ್ , ಟ್ರೋಲ್ ಪೇಜುಗಳು ಸಾಕಷ್ಟಿವೆ. ತುಳುನಾಡಿನಲ್ಲಿ ಇಂದು ಎಲ್ಲರನ್ನೂ ಆಕರ್ಷಿಸುವ, ನಗಿಸುವ ಮಾಂತ್ರಿಕ ಶಕ್ತಿ ಇದೆಯೆಂದರೆ ಅದು ಅರವಿಂದ್ ಬೋಳಾರ್ ಅವರಿಗೆ ಮಾತ್ರ. ಇತ್ತೀಚೆಗೆ ಬೋಳಾರ್ ಅವರು ನಡೆಸಿಕೊಟ್ಟ ಟಿವಿ ಕಾರ್ಯಕ್ರಮವೊಂದು ವಿವಾದಕ್ಕೊಳಗಾದಾಗ ಇಡೀ ತುಳು ನಾಡು ಅವರ ಬೆನ್ನ ಹಿಂದೆ ಅವರ ಬೆಂಬಲಕ್ಕೆ ನಿಂತಿತ್ತು. ಕುಹಕ ಮನಸ್ಸುಗಳು ಬೋಳಾರರಿಗೆ ದೊರಕಿದ ಈ ಬೆಂಬಲದಿಂದ ದಿಕ್ಕುತೋಚದಂತಾಗಿ ಚಡಪಡಿಸುವ ಸ್ಥಿತಿಯುಂಟಾಗಿತ್ತು. ಈ ಕಾರಣಕ್ಕಾಗಿಯೇ ಬೋಳಾರ್ ಅವರನ್ನು ತುಳುನಾಡ ಮಾಣಿಕ್ಯ ಅಥಾವ ತುಳುನಾಡ ತಲೈವ ಎಂಬ ಬಿರುದುಗಳನ್ನಿತ್ತು ಜನರು ಗೌರವಿಸುತ್ತಿರುವುದು.

ಬಡ ಬಿಲ್ಲವ ಕುಟುಂಬದಲ್ಲಿ ಜನಿಸಿ ಕೇವಲ ತನ್ನ ಪ್ರತಿಭೆಯಿಂದಲೇ ಹಂತ ಹಂತವಾಗಿ ಬೆಳೆದ ಅರವಿಂದ್ ಬೋಳಾರ್ ಇಂದು ಬಿಲ್ಲವ ಸಮಾಜದ ಹೆಮ್ಮೆಯ ಮುಕುಟ ಎಂದು ಕರೆಯಲ್ಪಡುತ್ತಾರೆ. ಶ್ರೀ ನಾರಯಣ ಗುರುಗಳ ತತ್ವಗಳನ್ನು ಚಾಚೂ ತಪ್ಪದೆ ಪಾಲಿಸುವ ಬೋಳಾರ್ ಬಿಲ್ಲವ ಕಾರಣಿಕ ಪುರುಷರಾದ ಕೋಟಿ-ಚೆನ್ನಯ್ಯರ ನೀತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡವರು. ಕೇವಲ ಪ್ರಸಿದ್ಧಿ ಅಥಾವಾ ದುಡ್ಡಿಗಾಗಿ ತನ್ನ ಪ್ರತಿಭೆಯನ್ನು ಮಾರಟ ಮಾಡದೆ ಓರ್ವ ಜವಾಬ್ದಾರಿಯುತ ಕಲಾವಿದನಾಗಿ ಸಮಾಜದಲ್ಲಿನ ಕೆಡುಕುಗಳ ಬಗ್ಗೆ, ಕಪಟತನದ ಬಗ್ಗೆ ಧ್ವನಿ ಎತ್ತುವಲ್ಲಿ ಬೋಳಾರರು ಮೊದಲ ಸ್ಥಾನದಲ್ಲಿದ್ದಾರೆ. ನೇರ ನುಡಿಯ, ಸೌಮ್ಯ ಸ್ವಭಾವದ ಹಾಗೂ ಲಲಿತ ಜೀವನದ ರುವಾರಿಯಾದ ತಲೈವ ಅರವಿಂದ್ ಬೋಳಾರ್ ಅವರನ್ನು ಪಡೆದ ಈ ಕಾಲಘಟ್ಟದ ಜನತೆ ಧನ್ಯರು.

Special article by: billavaswarriors.com team.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »