TOP STORIES:

FOLLOW US

ತುಳುನಾಡ ತಲೈವ- ಅರವಿಂದ್ ಬೋಳಾರ್


 

ಇತ್ತೀಚಿಗಿನ ಕೆಲ ವರ್ಷಗಳಿಂದ ತುಳುನಾಡಿನ ಸಿನೆಮಾ, ಸೀರಿಯಲ್, ಟಿವಿ ಕಾರ್ಯಕ್ರಮಗಳ ಕ್ಷೇತ್ರದಲ್ಲಿ ಅರವಿಂದ್ ಬೋಳಾರ್ ಅವರದ್ದೇ ಹವಾ. ಸೌಮ್ಯ ವೆಕ್ತಿತ್ವ, ಅಜಾತ ಶತ್ರು, ಯಾವುದೇ ಪಾತ್ರಗಳನ್ನು ಲೀಲಾಜಾಲವಾಗಿ ನಿಭಾಯಿಸುವ ಸಾಮರ್ಥ್ಯ, ಅದಲ್ಲದೇ ಸಮಾಜದಲ್ಲಿನ ಕೆಡುಕುಗಳ ವಿರುದ್ಧ ಕಪಟತನವಿಲ್ಲದೆ ಮುಕ್ತವಾಗಿ ಮಾತಾನಾಡುವ ಧೈರ್ಯ ಹೊಂದಿರುವ ಬೋಳಾರರು ಇದೀಗ ತುಳುನಾಡ ತಲೈವ ಎಂದೇ ಪರಿಗಣಿಸಲ್ಪಟ್ಟಿದ್ದಾರೆ. ಬೋಳಾರ್ ಅವರ ಮುಗ್ದ ಹಾಸ್ಯಕ್ಕೆ ಮಾರು ಹೋಗದವರು ಕನ್ನಡ ಕರಾವಳಿಯಲ್ಲಿ ಯಾರೂ ಇರಲಾರರು.


ಕರಾವಳಿಯಲ್ಲಿ ಇದೀಗ ಸಿನೇಮಾ ನಿರ್ದೇಶಕನೊಬ್ಬ ಸಿನೆಮಾ ಮಾಡಲು ಹೊರಟಿದ್ದಾನೆಂದರೆ ಆತ ಮಾಡುವ ಮೊದಲ ಕೆಲಸ ಅರವಿಂದ್ ಬೋಳಾರ್ ಅವರ ಅಶೀರ್ವಾದ ಬೇಡಿ ಅವರೊಂದಿಗೆ ಚಿತ್ರದ ಬಗ್ಗೆ ಚರ್ಚಿಸುವುದು. ಇಲ್ಲಿ ಸಿನೆಮಾದಲ್ಲಿ ಬೋಳಾರರು ಅಭಿನಯ ಮಾಡ್ತಾರೋ, ಇಲ್ಲವೋ ಎಂಬ ಪ್ರಶ್ನೆಗೆ ಎಡೆಯಿಲ್ಲ. ಬದಲಾಗಿ ಅವರ ನಗುಮುಖದ ಆಶೀರ್ವಾದವಿದ್ದರೆ ಯಾವುದೇ ಸಿನೇಮಾ ಇರಲಿ ಅದು ಜನರಿಗೆ ಹಚ್ಚಿಕೊಂಡು ಬಿಡುತ್ತದೆ ಎಂದು ನಿರ್ದೇಶಕರ, ನಿರ್ಮಾಪಕರ ನಂಬಿಕೆ.


ಕೋಸ್ಟಲ್ ವುಡ್ಡಿನಲ್ಲಿ ಅರವಿಂದ್ ಬೋಳಾರ್ ಇಂದು ಒಂದು ವಿಶೇಷ ಶಕ್ತಿ. ಪೋಸ್ಟರಿನಲ್ಲಿ ಅಥಾವಾ ಪ್ರಚಾರದ ವೇಳೆ ಬೋಳಾರ್ ಅವರ ಚಿತ್ರ ಕಂಡರೆ ಕರಾವಳಿಗರು ತಕ್ಷಣ ಸಿನೆಮಾ ನೋಡಲೇ ಬೇಕು ಎಂಬ ನಿರ್ಧಾರಕ್ಕೆ ಬರುತ್ತಾರೆ. ಇಂದು ಅರವಿಂದ್ ಬೋಳಾರ್ ಕರಾವಳಿಯಲ್ಲಿ ಅತೀ ಹೆಚ್ಚಿನ ಅಭಿಮಾನಿಗಳನ್ನು ಹೊಂದಿರುವ ಕಲಾವಿದ.

ಅರಂವಿದ್ ಅವರ ಮುಖವನ್ನಿಟ್ಟುಕೊಂಡೇ ಪ್ರಚಾರ ಗಿಟ್ಟಿಸಿಕೊಳ್ಳುವ ಫೇಸ್ ಬುಕ್ಕ್ , ಟ್ರೋಲ್ ಪೇಜುಗಳು ಸಾಕಷ್ಟಿವೆ. ತುಳುನಾಡಿನಲ್ಲಿ ಇಂದು ಎಲ್ಲರನ್ನೂ ಆಕರ್ಷಿಸುವ, ನಗಿಸುವ ಮಾಂತ್ರಿಕ ಶಕ್ತಿ ಇದೆಯೆಂದರೆ ಅದು ಅರವಿಂದ್ ಬೋಳಾರ್ ಅವರಿಗೆ ಮಾತ್ರ. ಇತ್ತೀಚೆಗೆ ಬೋಳಾರ್ ಅವರು ನಡೆಸಿಕೊಟ್ಟ ಟಿವಿ ಕಾರ್ಯಕ್ರಮವೊಂದು ವಿವಾದಕ್ಕೊಳಗಾದಾಗ ಇಡೀ ತುಳು ನಾಡು ಅವರ ಬೆನ್ನ ಹಿಂದೆ ಅವರ ಬೆಂಬಲಕ್ಕೆ ನಿಂತಿತ್ತು. ಕುಹಕ ಮನಸ್ಸುಗಳು ಬೋಳಾರರಿಗೆ ದೊರಕಿದ ಈ ಬೆಂಬಲದಿಂದ ದಿಕ್ಕುತೋಚದಂತಾಗಿ ಚಡಪಡಿಸುವ ಸ್ಥಿತಿಯುಂಟಾಗಿತ್ತು. ಈ ಕಾರಣಕ್ಕಾಗಿಯೇ ಬೋಳಾರ್ ಅವರನ್ನು ತುಳುನಾಡ ಮಾಣಿಕ್ಯ ಅಥಾವ ತುಳುನಾಡ ತಲೈವ ಎಂಬ ಬಿರುದುಗಳನ್ನಿತ್ತು ಜನರು ಗೌರವಿಸುತ್ತಿರುವುದು.

ಬಡ ಬಿಲ್ಲವ ಕುಟುಂಬದಲ್ಲಿ ಜನಿಸಿ ಕೇವಲ ತನ್ನ ಪ್ರತಿಭೆಯಿಂದಲೇ ಹಂತ ಹಂತವಾಗಿ ಬೆಳೆದ ಅರವಿಂದ್ ಬೋಳಾರ್ ಇಂದು ಬಿಲ್ಲವ ಸಮಾಜದ ಹೆಮ್ಮೆಯ ಮುಕುಟ ಎಂದು ಕರೆಯಲ್ಪಡುತ್ತಾರೆ. ಶ್ರೀ ನಾರಯಣ ಗುರುಗಳ ತತ್ವಗಳನ್ನು ಚಾಚೂ ತಪ್ಪದೆ ಪಾಲಿಸುವ ಬೋಳಾರ್ ಬಿಲ್ಲವ ಕಾರಣಿಕ ಪುರುಷರಾದ ಕೋಟಿ-ಚೆನ್ನಯ್ಯರ ನೀತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡವರು. ಕೇವಲ ಪ್ರಸಿದ್ಧಿ ಅಥಾವಾ ದುಡ್ಡಿಗಾಗಿ ತನ್ನ ಪ್ರತಿಭೆಯನ್ನು ಮಾರಟ ಮಾಡದೆ ಓರ್ವ ಜವಾಬ್ದಾರಿಯುತ ಕಲಾವಿದನಾಗಿ ಸಮಾಜದಲ್ಲಿನ ಕೆಡುಕುಗಳ ಬಗ್ಗೆ, ಕಪಟತನದ ಬಗ್ಗೆ ಧ್ವನಿ ಎತ್ತುವಲ್ಲಿ ಬೋಳಾರರು ಮೊದಲ ಸ್ಥಾನದಲ್ಲಿದ್ದಾರೆ. ನೇರ ನುಡಿಯ, ಸೌಮ್ಯ ಸ್ವಭಾವದ ಹಾಗೂ ಲಲಿತ ಜೀವನದ ರುವಾರಿಯಾದ ತಲೈವ ಅರವಿಂದ್ ಬೋಳಾರ್ ಅವರನ್ನು ಪಡೆದ ಈ ಕಾಲಘಟ್ಟದ ಜನತೆ ಧನ್ಯರು.

Special article by: billavaswarriors.com team.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »