TOP STORIES:

ತುಳುನಾಡ ತಲೈವ- ಅರವಿಂದ್ ಬೋಳಾರ್


 

ಇತ್ತೀಚಿಗಿನ ಕೆಲ ವರ್ಷಗಳಿಂದ ತುಳುನಾಡಿನ ಸಿನೆಮಾ, ಸೀರಿಯಲ್, ಟಿವಿ ಕಾರ್ಯಕ್ರಮಗಳ ಕ್ಷೇತ್ರದಲ್ಲಿ ಅರವಿಂದ್ ಬೋಳಾರ್ ಅವರದ್ದೇ ಹವಾ. ಸೌಮ್ಯ ವೆಕ್ತಿತ್ವ, ಅಜಾತ ಶತ್ರು, ಯಾವುದೇ ಪಾತ್ರಗಳನ್ನು ಲೀಲಾಜಾಲವಾಗಿ ನಿಭಾಯಿಸುವ ಸಾಮರ್ಥ್ಯ, ಅದಲ್ಲದೇ ಸಮಾಜದಲ್ಲಿನ ಕೆಡುಕುಗಳ ವಿರುದ್ಧ ಕಪಟತನವಿಲ್ಲದೆ ಮುಕ್ತವಾಗಿ ಮಾತಾನಾಡುವ ಧೈರ್ಯ ಹೊಂದಿರುವ ಬೋಳಾರರು ಇದೀಗ ತುಳುನಾಡ ತಲೈವ ಎಂದೇ ಪರಿಗಣಿಸಲ್ಪಟ್ಟಿದ್ದಾರೆ. ಬೋಳಾರ್ ಅವರ ಮುಗ್ದ ಹಾಸ್ಯಕ್ಕೆ ಮಾರು ಹೋಗದವರು ಕನ್ನಡ ಕರಾವಳಿಯಲ್ಲಿ ಯಾರೂ ಇರಲಾರರು.


ಕರಾವಳಿಯಲ್ಲಿ ಇದೀಗ ಸಿನೇಮಾ ನಿರ್ದೇಶಕನೊಬ್ಬ ಸಿನೆಮಾ ಮಾಡಲು ಹೊರಟಿದ್ದಾನೆಂದರೆ ಆತ ಮಾಡುವ ಮೊದಲ ಕೆಲಸ ಅರವಿಂದ್ ಬೋಳಾರ್ ಅವರ ಅಶೀರ್ವಾದ ಬೇಡಿ ಅವರೊಂದಿಗೆ ಚಿತ್ರದ ಬಗ್ಗೆ ಚರ್ಚಿಸುವುದು. ಇಲ್ಲಿ ಸಿನೆಮಾದಲ್ಲಿ ಬೋಳಾರರು ಅಭಿನಯ ಮಾಡ್ತಾರೋ, ಇಲ್ಲವೋ ಎಂಬ ಪ್ರಶ್ನೆಗೆ ಎಡೆಯಿಲ್ಲ. ಬದಲಾಗಿ ಅವರ ನಗುಮುಖದ ಆಶೀರ್ವಾದವಿದ್ದರೆ ಯಾವುದೇ ಸಿನೇಮಾ ಇರಲಿ ಅದು ಜನರಿಗೆ ಹಚ್ಚಿಕೊಂಡು ಬಿಡುತ್ತದೆ ಎಂದು ನಿರ್ದೇಶಕರ, ನಿರ್ಮಾಪಕರ ನಂಬಿಕೆ.


ಕೋಸ್ಟಲ್ ವುಡ್ಡಿನಲ್ಲಿ ಅರವಿಂದ್ ಬೋಳಾರ್ ಇಂದು ಒಂದು ವಿಶೇಷ ಶಕ್ತಿ. ಪೋಸ್ಟರಿನಲ್ಲಿ ಅಥಾವಾ ಪ್ರಚಾರದ ವೇಳೆ ಬೋಳಾರ್ ಅವರ ಚಿತ್ರ ಕಂಡರೆ ಕರಾವಳಿಗರು ತಕ್ಷಣ ಸಿನೆಮಾ ನೋಡಲೇ ಬೇಕು ಎಂಬ ನಿರ್ಧಾರಕ್ಕೆ ಬರುತ್ತಾರೆ. ಇಂದು ಅರವಿಂದ್ ಬೋಳಾರ್ ಕರಾವಳಿಯಲ್ಲಿ ಅತೀ ಹೆಚ್ಚಿನ ಅಭಿಮಾನಿಗಳನ್ನು ಹೊಂದಿರುವ ಕಲಾವಿದ.

ಅರಂವಿದ್ ಅವರ ಮುಖವನ್ನಿಟ್ಟುಕೊಂಡೇ ಪ್ರಚಾರ ಗಿಟ್ಟಿಸಿಕೊಳ್ಳುವ ಫೇಸ್ ಬುಕ್ಕ್ , ಟ್ರೋಲ್ ಪೇಜುಗಳು ಸಾಕಷ್ಟಿವೆ. ತುಳುನಾಡಿನಲ್ಲಿ ಇಂದು ಎಲ್ಲರನ್ನೂ ಆಕರ್ಷಿಸುವ, ನಗಿಸುವ ಮಾಂತ್ರಿಕ ಶಕ್ತಿ ಇದೆಯೆಂದರೆ ಅದು ಅರವಿಂದ್ ಬೋಳಾರ್ ಅವರಿಗೆ ಮಾತ್ರ. ಇತ್ತೀಚೆಗೆ ಬೋಳಾರ್ ಅವರು ನಡೆಸಿಕೊಟ್ಟ ಟಿವಿ ಕಾರ್ಯಕ್ರಮವೊಂದು ವಿವಾದಕ್ಕೊಳಗಾದಾಗ ಇಡೀ ತುಳು ನಾಡು ಅವರ ಬೆನ್ನ ಹಿಂದೆ ಅವರ ಬೆಂಬಲಕ್ಕೆ ನಿಂತಿತ್ತು. ಕುಹಕ ಮನಸ್ಸುಗಳು ಬೋಳಾರರಿಗೆ ದೊರಕಿದ ಈ ಬೆಂಬಲದಿಂದ ದಿಕ್ಕುತೋಚದಂತಾಗಿ ಚಡಪಡಿಸುವ ಸ್ಥಿತಿಯುಂಟಾಗಿತ್ತು. ಈ ಕಾರಣಕ್ಕಾಗಿಯೇ ಬೋಳಾರ್ ಅವರನ್ನು ತುಳುನಾಡ ಮಾಣಿಕ್ಯ ಅಥಾವ ತುಳುನಾಡ ತಲೈವ ಎಂಬ ಬಿರುದುಗಳನ್ನಿತ್ತು ಜನರು ಗೌರವಿಸುತ್ತಿರುವುದು.

ಬಡ ಬಿಲ್ಲವ ಕುಟುಂಬದಲ್ಲಿ ಜನಿಸಿ ಕೇವಲ ತನ್ನ ಪ್ರತಿಭೆಯಿಂದಲೇ ಹಂತ ಹಂತವಾಗಿ ಬೆಳೆದ ಅರವಿಂದ್ ಬೋಳಾರ್ ಇಂದು ಬಿಲ್ಲವ ಸಮಾಜದ ಹೆಮ್ಮೆಯ ಮುಕುಟ ಎಂದು ಕರೆಯಲ್ಪಡುತ್ತಾರೆ. ಶ್ರೀ ನಾರಯಣ ಗುರುಗಳ ತತ್ವಗಳನ್ನು ಚಾಚೂ ತಪ್ಪದೆ ಪಾಲಿಸುವ ಬೋಳಾರ್ ಬಿಲ್ಲವ ಕಾರಣಿಕ ಪುರುಷರಾದ ಕೋಟಿ-ಚೆನ್ನಯ್ಯರ ನೀತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡವರು. ಕೇವಲ ಪ್ರಸಿದ್ಧಿ ಅಥಾವಾ ದುಡ್ಡಿಗಾಗಿ ತನ್ನ ಪ್ರತಿಭೆಯನ್ನು ಮಾರಟ ಮಾಡದೆ ಓರ್ವ ಜವಾಬ್ದಾರಿಯುತ ಕಲಾವಿದನಾಗಿ ಸಮಾಜದಲ್ಲಿನ ಕೆಡುಕುಗಳ ಬಗ್ಗೆ, ಕಪಟತನದ ಬಗ್ಗೆ ಧ್ವನಿ ಎತ್ತುವಲ್ಲಿ ಬೋಳಾರರು ಮೊದಲ ಸ್ಥಾನದಲ್ಲಿದ್ದಾರೆ. ನೇರ ನುಡಿಯ, ಸೌಮ್ಯ ಸ್ವಭಾವದ ಹಾಗೂ ಲಲಿತ ಜೀವನದ ರುವಾರಿಯಾದ ತಲೈವ ಅರವಿಂದ್ ಬೋಳಾರ್ ಅವರನ್ನು ಪಡೆದ ಈ ಕಾಲಘಟ್ಟದ ಜನತೆ ಧನ್ಯರು.

Special article by: billavaswarriors.com team.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »